AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ
ಶಿವಣ್ಣ-ಅನುಶ್ರೀ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 08, 2022 | 9:43 PM

ಪಾರ್ವತಮ್ಮ ರಾಜ್​ಕುಮಾರ್ ಅವರನ್ನು (Parvathamma Rajkumar) ಕಂಡರೆ ಕರ್ನಾಟಕದ ಜನತೆಗೆ ವಿಶೇಷ ಪ್ರೀತಿ ಇದೆ. ಅವರು ನಿರ್ಮಾಣದ ಮೂಲಕ ಮನೆ ಮಾತಾದವರು. ಮನೆಯಲ್ಲಿ ತಾಯಿ ಆಗಿಯೂ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಇನ್ನು ಪಾರ್ವತಮ್ಮ ಅವರನ್ನು ಕಂಡರೆ ಶಿವರಾಜ್​ಕುಮಾರ್​​ಗೆ (Shivarajkumar) ವಿಶೇಷ ಗೌರವ ಇದೆ. ಅನೇಕ ವೇದಿಕೆ ಮೇಲೆ ಶಿವಣ್ಣ  ಅಮ್ಮನ ಬಗ್ಗೆ ಹೇಳುತ್ತಾ ಭಾವುಕರಾಗಿದ್ದರು. ಈಗ ಅವರು ತಾಯಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ಈಗಾಗಲೇ ಐದು ಸೀಸನ್​​ಗಳನ್ನು ಯಶಸ್ವಿಯಾಗಿ ಪೂರ್ತಿಗೊಳಿಸಿದೆ. ಈಗ ಆರನೇ ಸೀಸನ್ ಆರಂಭವಾಗಿದೆ. ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿರುವ ಈ ಶೋಗೆ ಶಿವಣ್ಣ ಜಡ್ಜ್​ ಆಗಿದ್ದಾರೆ. ಶಿವರಾಜ್​ಕುಮಾರ್ ಡ್ಯಾನ್ಸ್ ಮೂಲಕವೂ ಜನಪ್ರಿಯತೆ ಗಳಿಸಿದವರು. ಈ ಕಾರಣಕ್ಕೆ ಶಿವಣ್ಣ ಅವರನ್ನು ಜಡ್ಜ್​ ಸ್ಥಾನದಲ್ಲಿ ಕೂರಿಸಲಾಗಿದೆ.

ಇದನ್ನೂ ಓದಿ
Image
‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?
Image
Bairagee Song: ಹೊಸ ಅವತಾರದಲ್ಲಿ ಶಿವಣ್ಣ; ಅಭಿಮಾನಿಗಳ ಮನಗೆದ್ದ ಬೈರಾಗಿ ಚಿತ್ರದ ‘ನಕರನಖ’
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
ಪೊಲೀಸರ ಜತೆ ಮಸ್ತ್ ಡ್ಯಾನ್ಸ್ ಮಾಡಿದ ಶಿವಣ್ಣ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು. ಕೊನೆಯಲ್ಲಿ ಜಡ್ಜ್​ ಹಾಗೂ ನಿರೂಪಕಿ ಅನುಶ್ರೀ ಅವರು ತಾಯಿ ಇರುವ ಫೋಟೋವನ್ನು ಪ್ರದರ್ಶನ ಮಾಡಲಾಯಿತು. ಶಿವಣ್ಣ-ಪಾರ್ವತಮ್ಮನ ಫೋಟೋ ಎಲ್ಲರ ಗಮನ ಸೆಳೆಯಿತು.

ಈ ಫೋಟೋ ನೋಡುತ್ತಿದ್ದಂತೆ ಶಿವರಾಜ್​ಕುಮಾರ್ ಅವರು ಗಳಗಳನೆ ಅತ್ತುಬಿಟ್ಟರು. ದುಃಖವನ್ನು ನಿಯಂತ್ರಿಸಿಕೊಳ್ಳಲು ಅವರ ಬಳಿಯಿಂದ ಸಾಧ್ಯವೇ ಆಗಲಿಲ್ಲ. ಜಡ್ಜ್​ಗಳು ಶಿವಣ್ಣ ಅವರನ್ನು ಸಮಾಧಾನ ಮಾಡಿದರು. ರಕ್ಷಿತಾ ಕೂಡ ಶಿವಣ್ಣ ಅವರನ್ನು ಸಮಾಧಾನ ಮಾಡೋಕೆ ಪ್ರಯತ್ನಿಸಿದರು. ಕೊನೆಗೂ ಅವರು ಸಮಾಧಾನಗೊಂಡರು.

View this post on Instagram

A post shared by Zee Kannada (@zeekannada)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಶೋ ಅನ್ನು ಆ್ಯಂಕರ್ ಅನುಶ್ರೀ ನಿರೂಪಣೆ ಮಾಡುತ್ತಿದ್ದಾರೆ. ತಾಯಿಯ ಫೋಟೋವನ್ನು ಪ್ರದರ್ಶನ ಮಾಡಿ ಕಣ್ಣೀರು ಹಾಕಿಸಿದ್ದಕ್ಕೆ ಅವರು ಶಿವರಾಜ್​ಕುಮಾರ್ ಬಳಿ ಕ್ಷಮೆ ಕೇಳಿದರು. ಜೀ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇದಕ್ಕೆ ವೀಕ್ಷಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು