AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ 6ನೇ ಸೀಸನ್ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಶಿವರಾಜ್​ಕುಮಾರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ರಕ್ಷಿತಾ ಪ್ರೇಮ್ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ.

‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ
ಶಿವಣ್ಣ-ರಕ್ಷಿತಾ
TV9 Web
| Edited By: |

Updated on:Jun 24, 2022 | 5:34 PM

Share

ನಟ ಶಿವರಾಜ್​ಕುಮಾರ್ (Shivarajkumar) ಅವರು ಶೀಘ್ರವೇ 60ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅವರ ಎನರ್ಜಿ ಹಾಗೂ ಬಾಡಿ ಫಿಟ್​ನೆಸ್​ ನೋಡಿದರೆ ಯಾರೊಬ್ಬರೂ ಅವರಿಗೆ ಇಷ್ಟೊಂದು ವಯಸ್ಸು ಆಯಿತು ಎಂದು ಹೇಳಲು ಸಾಧ್ಯವೇ ಇಲ್ಲ. ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ರಿಯಾಲಿಟಿ ಶೋಗೆ ಜಡ್ಜ್ ಕೂಡ ಆಗಿದ್ದಾರೆ. ಈಗ ಶಿವರಾಜ್​ಕುಮಾರ್ ಅವರು ಮಾಡಿರುವ ಎನರ್ಜೆಟಿಕ್  ಡ್ಯಾನ್ಸ್ ಸಖತ್ ವೈರಲ್ ಆಗುತ್ತಿದೆ. ಈ ಡ್ಯಾನ್ಸ್ ನೋಡಿ ರಕ್ಷಿತಾ ಪ್ರೇಮ್ (Rakshita Prem)​ ಅವರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ 6ನೇ ಸೀಸನ್ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಶಿವರಾಜ್​ಕುಮಾರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ರಕ್ಷಿತಾ ಪ್ರೇಮ್ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈ ವೇದಿಕೆ ಮೇಲೆ ಡ್ಯಾನ್ಸ್ ಮಾಡುವ ಹಲವು ಸ್ಪರ್ಧಿಗಳಿಗೆ ಶಿವಣ್ಣ ಅವರು ಸ್ಫೂರ್ತಿದಾಯಕ ಮಾತುಗಳನ್ನು ಆಡುತ್ತಾರೆ. ಈಗ ಶಿವಣ್ಣ ಅವರೇ ಡ್ಯಾನ್ಸ್ ಮಾಡಿದ್ದು ಹಲವರಿಗೆ ಖುಷಿ ನೀಡಿದೆ.

ಇದನ್ನೂ ಓದಿ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

‘ಜೋಗಿ’ ಪ್ರೇಮ್ ನಿರ್ದೇಶನದ, ಶಿವರಾಜ್​ಕುಮಾರ್ ನಟನೆಯ ‘ಜೋಗಯ್ಯ’ ಸಿನಿಮಾ 2011ರಲ್ಲಿ ತೆರೆಗೆ ಬಂತು. ಈ ಚಿತ್ರದ ‘ಗಂಗೆಯ ಅವನ ತಲೆ ಮೇಲೆ..’ ಹಾಡು ಸೂಪರ್ ಹಿಟ್ ಆಗಿತ್ತು. ಈ ಹಾಡಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6​’ ಸ್ಪರ್ಧಿಗಳು ಡ್ಯಾನ್ಸ್ ಮಾಡಿದರು. ಈ ಹಾಡನ್ನು ನೋಡಿ ಶಿವಣ್ಣ ಸುಮ್ಮನೆ ಕೂರಲಿಲ್ಲ. ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಶಿವರಾಜ್​ಕುಮಾರ್ ಎನರ್ಜಿ ನೋಡಿ ರಕ್ಷಿತಾ ಸಖತ್ ಖುಷಿ ಆದರು. ಸದ್ಯ, ಜೀ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

View this post on Instagram

A post shared by Zee Kannada (@zeekannada)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಕಾರ್ಯಕ್ರಮ ಪ್ರತಿ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುತ್ತಿದೆ. ಇತ್ತೀಚೆಗೆ ಈ ಕಾರ್ಯಕ್ರಮದ ಅವಾರ್ಡ್​ ಹೇಗಿರಲಿದೆ ಎಂಬುದನ್ನು ಅನಾವರಣ ಮಾಡಲಾಗಿತ್ತು. ಅವಾರ್ಡ್​ ಮೇಲೆ ಪುನೀತ್​ ರಾಜ್​ಕುಮಾರ್ ರಾರಾಜಿಸಿದ್ದರು. ಇದನ್ನು ನೋಡಿ ಶಿವಣ್ಣ ಭಾವುಕರಾಗಿದ್ದರು.

ಇದನ್ನೂ ಓದಿ: ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ

ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

Published On - 5:33 pm, Fri, 24 June 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ