AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ 6ನೇ ಸೀಸನ್ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಶಿವರಾಜ್​ಕುಮಾರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ರಕ್ಷಿತಾ ಪ್ರೇಮ್ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ.

‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ
ಶಿವಣ್ಣ-ರಕ್ಷಿತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 24, 2022 | 5:34 PM

Share

ನಟ ಶಿವರಾಜ್​ಕುಮಾರ್ (Shivarajkumar) ಅವರು ಶೀಘ್ರವೇ 60ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅವರ ಎನರ್ಜಿ ಹಾಗೂ ಬಾಡಿ ಫಿಟ್​ನೆಸ್​ ನೋಡಿದರೆ ಯಾರೊಬ್ಬರೂ ಅವರಿಗೆ ಇಷ್ಟೊಂದು ವಯಸ್ಸು ಆಯಿತು ಎಂದು ಹೇಳಲು ಸಾಧ್ಯವೇ ಇಲ್ಲ. ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ರಿಯಾಲಿಟಿ ಶೋಗೆ ಜಡ್ಜ್ ಕೂಡ ಆಗಿದ್ದಾರೆ. ಈಗ ಶಿವರಾಜ್​ಕುಮಾರ್ ಅವರು ಮಾಡಿರುವ ಎನರ್ಜೆಟಿಕ್  ಡ್ಯಾನ್ಸ್ ಸಖತ್ ವೈರಲ್ ಆಗುತ್ತಿದೆ. ಈ ಡ್ಯಾನ್ಸ್ ನೋಡಿ ರಕ್ಷಿತಾ ಪ್ರೇಮ್ (Rakshita Prem)​ ಅವರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ 6ನೇ ಸೀಸನ್ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಶಿವರಾಜ್​ಕುಮಾರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ರಕ್ಷಿತಾ ಪ್ರೇಮ್ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈ ವೇದಿಕೆ ಮೇಲೆ ಡ್ಯಾನ್ಸ್ ಮಾಡುವ ಹಲವು ಸ್ಪರ್ಧಿಗಳಿಗೆ ಶಿವಣ್ಣ ಅವರು ಸ್ಫೂರ್ತಿದಾಯಕ ಮಾತುಗಳನ್ನು ಆಡುತ್ತಾರೆ. ಈಗ ಶಿವಣ್ಣ ಅವರೇ ಡ್ಯಾನ್ಸ್ ಮಾಡಿದ್ದು ಹಲವರಿಗೆ ಖುಷಿ ನೀಡಿದೆ.

ಇದನ್ನೂ ಓದಿ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

‘ಜೋಗಿ’ ಪ್ರೇಮ್ ನಿರ್ದೇಶನದ, ಶಿವರಾಜ್​ಕುಮಾರ್ ನಟನೆಯ ‘ಜೋಗಯ್ಯ’ ಸಿನಿಮಾ 2011ರಲ್ಲಿ ತೆರೆಗೆ ಬಂತು. ಈ ಚಿತ್ರದ ‘ಗಂಗೆಯ ಅವನ ತಲೆ ಮೇಲೆ..’ ಹಾಡು ಸೂಪರ್ ಹಿಟ್ ಆಗಿತ್ತು. ಈ ಹಾಡಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6​’ ಸ್ಪರ್ಧಿಗಳು ಡ್ಯಾನ್ಸ್ ಮಾಡಿದರು. ಈ ಹಾಡನ್ನು ನೋಡಿ ಶಿವಣ್ಣ ಸುಮ್ಮನೆ ಕೂರಲಿಲ್ಲ. ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಶಿವರಾಜ್​ಕುಮಾರ್ ಎನರ್ಜಿ ನೋಡಿ ರಕ್ಷಿತಾ ಸಖತ್ ಖುಷಿ ಆದರು. ಸದ್ಯ, ಜೀ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

View this post on Instagram

A post shared by Zee Kannada (@zeekannada)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಕಾರ್ಯಕ್ರಮ ಪ್ರತಿ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುತ್ತಿದೆ. ಇತ್ತೀಚೆಗೆ ಈ ಕಾರ್ಯಕ್ರಮದ ಅವಾರ್ಡ್​ ಹೇಗಿರಲಿದೆ ಎಂಬುದನ್ನು ಅನಾವರಣ ಮಾಡಲಾಗಿತ್ತು. ಅವಾರ್ಡ್​ ಮೇಲೆ ಪುನೀತ್​ ರಾಜ್​ಕುಮಾರ್ ರಾರಾಜಿಸಿದ್ದರು. ಇದನ್ನು ನೋಡಿ ಶಿವಣ್ಣ ಭಾವುಕರಾಗಿದ್ದರು.

ಇದನ್ನೂ ಓದಿ: ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ

ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

Published On - 5:33 pm, Fri, 24 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ