AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಮುಕ್ತರಾದ ಬಳಿಕ ಎನರ್ಜಿ ಹೆಚ್ಚಿಸಿಕೊಂಡ ಶಿವಣ್ಣ; ಇಲ್ಲಿದೆ ವಿಡಿಯೋ ಸಾಕ್ಷಿ

ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಅವರ ಹೊಸ ಚಿತ್ರ ‘45’ರ ಪ್ರಚಾರ ಕಾರ್ಯಕ್ರಮದಲ್ಲೂ ಅವರು ಸಕ್ರಿಯವಾಗಿ ಭಾಗವಹಿಸಿದ್ದಾರೆ. ಈ ಎಲ್ಲಾ ಘಟನೆಗಳು ಅವರ ಸಂಪೂರ್ಣ ಚೇತರಿಕೆಯನ್ನು ತೋರಿಸುತ್ತವೆ.

ಕ್ಯಾನ್ಸರ್ ಮುಕ್ತರಾದ ಬಳಿಕ ಎನರ್ಜಿ ಹೆಚ್ಚಿಸಿಕೊಂಡ ಶಿವಣ್ಣ; ಇಲ್ಲಿದೆ ವಿಡಿಯೋ ಸಾಕ್ಷಿ
ಶಿವರಾಜ್​ಕುಮಾರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 18, 2025 | 8:04 AM

ಶಿವರಾಜ್​ಕುಮಾರ್ (Shiva Rajkumar) ಅವರು ಕ್ಯಾನ್ಸರ್​​ಗೆ ಒಳಗಾಗಿದ್ದರು. ಅವರಿಗೆ ಕ್ಯಾನ್ಸರ್ ಇರೋ ವಿಚಾರ ಸಾಕಷ್ಟು ಆತಂಕ ಮೂಡಿಸಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಈಗ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಅವರು ಅಮೆರಿಕದಲ್ಲಿ ಆಪರೇಷನ್​ಗೆ ಒಳಗಾಗಿ, ಭಾರತಕ್ಕೆ ಬಂದರು. ಈಗ ಅವರನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಈಗ ಮೊದಲಿನ ಎನರ್ಜಿಗೆ ಬಂದಿದ್ದಾರೆ. ಅವರ ಎನರ್ಜಿ ಮತ್ತಷ್ಟು ಹೆಚ್ಚಾದಂತೆ ಕಾಣುತ್ತಿದೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

ಶಿವಣ್ಣ ಹಾಗೂ ಜೀ ಕನ್ನಡದ ಮಧ್ಯೆ ಅವಿನಾಭಾವ ಸಂಬಂಧ ಇದೆ. ಶಿವರಾಜ್​ಕುಮಾರ್ ಅವರು ಈ ಮೊದಲು ಡ್ಯಾನ್ಸ್ ರಿಯಾಲಿಟಿ ಶೋಗೆ ಜಡ್ಜ್ ಆಗಿದ್ದರು. ಈಗ ಅವರು ‘ಸರಿಗಮಪ’ ವೇದಿಕೆ ಮೇಲೆ ಅತಿಥಿಯಾಗಿ ಆಗಮಿಸಿದ್ದಾರೆ. ಅವರ ಜೊತೆ ಮಗಳು ನಿವೇದಿತಾ ಕೂಡ ಇದ್ದರು. ನಿವೇದಿತಾ ನಿರ್ಮಾಣದ ‘ಫೈರ್​ ಫ್ಲೈ’ ಚಿತ್ರದ ಪ್ರಚಾರ ಮಾಡಲಾಗಿದೆ. ಅವರನ್ನು ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಶಿವಣ್ಣ ಅವರು ಮೊದಲಿನ ಎನರ್ಜಿಯಲ್ಲೇ ಡ್ಯಾನ್ಸ್ ಮಾಡಿರೋದು ವಿಶೇಷ.

ಇದನ್ನೂ ಓದಿ
Image
ಪೂಜಾ ಹೆಗ್ಡೆಗೆ ಕರ್ನಾಟಕದ ಕನೆಕ್ಷನ್ ಹೇಗೆ? ನಿಜಕ್ಕೂ ಅವರು ಇಲ್ಲಿಯವರಾ?
Image
ವೆಬ್ ಸೀರಿಸ್​ಗೆ ಗುಡ್ ಬೈ ಹೇಳಿದ ಸಮಂತಾ; ಹುಟ್ಟಿಕೊಂಡ ಅಸಮಾಧಾನ ಏನು?
Image
ಸ್ಪರ್ಧೆ ಬೇಡ ಎಂಬ ನಿರ್ಧಾರ; ಅಂದುಕೊಂಡಿದ್ದಕ್ಕಿಂತ ಮೊದಲೇ ಆಮಿರ್ ಸಿನಿಮಾ
Image
ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  
View this post on Instagram

A post shared by Zee Kannada (@zeekannada)

ಶಿವರಾಜ್​ಕುಮಾರ್ ವೇದಿಕೆ ಏರಿದರು ಎಂದರೆ ಅವರಿಂದ ಎಲ್ಲರೂ ಡ್ಯಾನ್ಸ್​ನ ನಿರೀಕ್ಷೆ ಮಾಡುತ್ತಾರೆ. ಆದರೆ, ಅವರಿಗೆ ಆಪರೇಷನ್ ಆಗಿದೆ. ಈಗ ಅವರ ಬಳಿ ಡ್ಯಾನ್ಸ್ ಮಾಡಿಸಬೇಕೋ ಅಥವಾ ಬೇಡವೋ ಎನ್ನುವ ಪ್ರಶ್ನೆ ಮೂಡಬಹುದು. ಆದರೆ, ಶಿವರಾಜ್​ಕುಮಾರ್ ಮೊದಲಿನ ಎನರ್ಜಿಗೆ ಮರಳಿದ್ದಾರೆ. ‘ಸರಿಗಮಪ’ ವೇದಿಕೆ ಮೇಲೆ ಅವರು ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಶಿವಣ್ಣ ಅವರನ್ನು ನೋಡಿ ಆ್ಯಂಕರ್ ಅನುಶ್ರೀ, ಗಾಯಕ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಖುಷಿ ಆಗಿದ್ದಾರೆ.

ಇದನ್ನೂ ಓದಿ: ‘ನನ್ನ ಸುದೀಪ್ ಮಧ್ಯೆ ಸಣ್ಣಪುಟ್ಟ ಮನಸ್ತಾಪ ಆಗಿರಬಹುದು, ಆದರೆ ವೈರತ್ವ ಬೆಳೆದಿಲ್ಲ’; ಶಿವರಾಜ್​ಕುಮಾರ್

ಅರ್ಜುನ್ ಜನ್ಯ ಅವರು ಸಿನಿಮಾ ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಅವರು ‘45’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಶಿವರಾಜ್​ಕುಮಾರ್ ಅವರು ಹೀರೋ. ಉಪೇಂದ್ರ, ರಾಜ್ ಬಿ ಶೆಟ್ಟಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ. ಈ ಸಿನಿಮಾ ರಿಲೀಸ್​ಗಾಗಿ ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಚಿತ್ರ್ಕೆ ಉತ್ತಮ ಪ್ರಚಾರ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Fri, 18 April 25

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ