AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ನಲ್ಲಿ ತಂದೆ ನೆನೆದು ಕಣ್ಣೀರು ಹಾಕಿದ ಶಿವಣ್ಣ; ಇದಕ್ಕೆ ಕಾರಣವಾಯ್ತು ಆ ಒಂದು ಹಾಡು

ಎಲ್ಲಾ ಚಿತ್ರಗಳ ಕೆಲಸಗಳ ಮಧ್ಯೆ ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ ಆರನೇ ಸೀಸನ್​ಗೆ ಜಡ್ಜ್​ ಆಗಿ ಭಾಗಿ ಆಗುತ್ತಿದ್ದಾರೆ. ಶಿವಣ್ಣ ಅವರು ಈ ಕಾರ್ಯಕ್ರಮಕ್ಕೆ ಬಂದ ದಿನದಿಂದಲೂ ಹಲವು ಭಾವನಾತ್ಮಕ ಕ್ಷಣಗಳಿಗೆ ಈ ವೇದಿಕೆ ಸಾಕ್ಷಿ ಆಗುತ್ತಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ನಲ್ಲಿ ತಂದೆ ನೆನೆದು ಕಣ್ಣೀರು ಹಾಕಿದ ಶಿವಣ್ಣ; ಇದಕ್ಕೆ ಕಾರಣವಾಯ್ತು ಆ ಒಂದು ಹಾಡು
TV9 Web
| Edited By: |

Updated on: Jun 25, 2022 | 5:28 PM

Share

ರಾಜ್​ಕುಮಾರ್ (Rajkumar) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ಮಕ್ಕಳಲ್ಲಿ ಒಬ್ಬರಾದ ಶಿವರಾಜ್​ಕುಮಾರ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಶೀಘ್ರವೇ ಅವರು 60ನೇ ವಯಸ್ಸಿಗೆ ಕಾಲಿಡುತ್ತಿದ್ದು, ಈ ವಯಸ್ಸಿನಲ್ಲೂ ಸಾಕಷ್ಟು ಎನರ್ಜಿ ತೋರುತ್ತಿದ್ದಾರೆ. ಹಲವು ವೇದಿಕೆಗಳ ಮೇಲೆ ಶಿವರಾಜ್​ಕುಮಾರ್ (Shivarajkumar) ಅವರು ತಂದೆ ರಾಜ್​ಕುಮಾರ್ ಹಾಗೂ ತಾಯಿ ಪಾರ್ವತಮ್ಮ ಅವರನ್ನು ನೆನಪಿಸಿಕೊಳ್ಳುತ್ತಾರೆ. ಅವರನ್ನು ನೆನಪಿಸಿಕೊಂಡ ಮರುಕ್ಷಣ ಭಾವುಕರಾಗುತ್ತಾರೆ. ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಕಣ್ಣೀರು ಹಾಕಿದ್ದಾರೆ. ಒಂದು ಹಾಡಿನಿಂದ ಅವರು ಭಾವುಕರಾಗಿದ್ದಾರೆ.

ಶಿವರಾಜ್​ಕುಮಾರ್ ಅವರು ಸ್ಯಾಂಡಲ್​ವುಡ್​ನಲ್ಲಿ ಸಖತ್​ ಬ್ಯುಸಿ ಹೀರೋ. ಒಂದಾದಮೇಲೆ ಒಂದರಂತೆ ಹಲವು ಸಿನಿಮಾಗಳನ್ನು ಅವರು ಮಾಡುತ್ತಿದ್ದಾರೆ. ಅವರ ಹಲವು ಚಿತ್ರಗಳು ಘೋಷಣೆ ಆಗಿದ್ದು, ಶೂಟಿಂಗ್ ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಈ ಎಲ್ಲಾ ಚಿತ್ರಗಳ ಕೆಲಸಗಳ ಮಧ್ಯೆ ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ ಆರನೇ ಸೀಸನ್​ಗೆ ಜಡ್ಜ್​ ಆಗಿ ಭಾಗಿ ಆಗುತ್ತಿದ್ದಾರೆ. ಶಿವಣ್ಣ ಅವರು ಈ ಕಾರ್ಯಕ್ರಮಕ್ಕೆ ಬಂದ ದಿನದಿಂದಲೂ ಹಲವು ಭಾವನಾತ್ಮಕ ಕ್ಷಣಗಳಿಗೆ ಈ ವೇದಿಕೆ ಸಾಕ್ಷಿ ಆಗುತ್ತಿದೆ.

ಇದನ್ನೂ ಓದಿ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಈಗಲೂ ರಾಜ್​ಕುಮಾರ್​ ಅವರನ್ನು ಮಿಸ್ ಮಾಡಿಕೊಳ್ಳುತ್ತಾರೆ. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ. ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವೇದಿಕೆ ಮೇಲೆ ‘ಜಗವೆ ಒಂದು ರಣ ರಂಗ..’ ಹಾಡನ್ನು ಪ್ರಸಾರ ಮಾಡಲಾಯಿತು. ಈ ಹಾಡಿಗೆ ಸ್ಪರ್ಧಿಗಳು ಡ್ಯಾನ್ಸ್ ಮಾಡಿದರು. ಮೂಲ ಹಾಡನ್ನು ಹಾಡಿದ್ದು ರಾಜ್​ಕುಮಾರ್. ಹೀಗಾಗಿ, ಶಿವಣ್ಣಗೆ ತಂದೆಯ ನೆನಪಾಯಿತು.

View this post on Instagram

A post shared by Zee Kannada (@zeekannada)

‘ಈ ಹಾಡನ್ನು ನೀವು ಪರ್ಫಾರ್ಮ್​ ಮಾಡುವಾಗ ರಣರಂಗ ಸೆಟ್​ಗೆ ಹೋದ ಹಾಗೆ ಆಯ್ತು. ಇವತ್ತು ನನ್ನ ತಂದೆಯನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಯಾವ ಘಳಿಗೆಯಲ್ಲಿ ಹಂಸಲೇಖ ಅವರು ಈ ಹಾಡನ್ನು ಬರೆದರೋ ಗೊತ್ತಿಲ್ಲ. ಅವರಿಗೋಸ್ಕರವೇ ಈ ಹಾಡನ್ನು ಬರೆದ ಹಾಗೆ ಇದೆ’ ಎಂದು ಹೇಳುತ್ತಿರುವಾಗಲೇ ಶಿವಣ್ಣ ಕಣ್ಣಲ್ಲಿ ನೀರು ಬಂತು. ಈ ಪ್ರೋಮೋವನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಕ್ಕೆ ಈ ರಿಯಾಲಿಟಿ ಶೋ ಪ್ರಸಾರವಾಗುತ್ತದೆ. ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರೆ, ರಕ್ಷಿತಾ ಪ್ರೇಮ್ ಜಡ್ಜ್​ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ‘ಬೈರಾಗಿ’ ಯಾತ್ರೆ: ಡಾ. ರಾಜ್​ ಹುಟ್ಟಿ ಬೆಳೆದ ಗಾಜನೂರು ನೋಡಲು ಶಿವಣ್ಣನ ಜತೆ ಹೊರಟ ಡಾಲಿ ಧನಂಜಯ

ರಾಮನಗರದಲ್ಲಿ ಶಿವರಾಜ್​ಕುಮಾರ್​ಗೆ ಭವ್ಯ ಸ್ವಾಗತ; ಇಲ್ಲಿದೆ ವಿಡಿಯೋ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ