AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪನ ಹೆಸರನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದಕ್ಕೆ ಶಿವರಾಜ್​ಕುಮಾರ್ ಒಳ್ಳೆಯ ಉದಾಹರಣೆ’; ಧನುಷ್

ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕದಲ್ಲಿದ್ದಾರೆ. ಅವರ ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 'ಜೈಲರ್' ಮತ್ತು 'ಕ್ಯಾಪ್ಟನ್ ಮಿಲ್ಲರ್' ಚಿತ್ರಗಳಲ್ಲಿನ ಅವರ ಅಭಿನಯಕ್ಕೆ ಧನುಷ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಧನುಷ್ ಅವರ ಈ ಮಾತುಗಳು ಸಹ ವೈರಲ್ ಆಗಿವೆ. ಅಭಿಮಾನಿಗಳು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

‘ಅಪ್ಪನ ಹೆಸರನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದಕ್ಕೆ ಶಿವರಾಜ್​ಕುಮಾರ್ ಒಳ್ಳೆಯ ಉದಾಹರಣೆ’; ಧನುಷ್
ಶಿವಣ್ಣ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Dec 23, 2024 | 8:13 AM

ಶಿವರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಈಗ ಒಂದು ಬ್ರೇಕ್​ನಲ್ಲಿ ಇದ್ದಾರೆ. ಅವರಿಗೆ ಕ್ಯಾನ್ಸರ್ ಇರುವ ಕಾರಣ ಅಮೆರಿಕ ತೆರಳಿದ್ದು, ಅಲ್ಲಿ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಸಂದರ್ಭದಲ್ಲಿ ಅವರ ಹಳೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಕನ್ನಡದಲ್ಲಿ ಮಾತ್ರವಲ್ಲದೆ ಪರಭಾಷೆಯಲ್ಲೂ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಿದೆ. ಅವರು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಧನುಷ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಹೆಸರಿನ ಸಿನಿಮಾದಲ್ಲಿ ಶಿವರಾಜ್​ಕುಮಾರ್ ನಟಿಸಿದ್ದರು. ಈ ಚಿತ್ರದ ಮೂಲಕ ಅವರು ಗಮನ ಸೆಳೆದಿದ್ದರು. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಧನುಷ್ ಆಡಿದ ಮಾತನ್ನು ವೈರಲ್ ಮಾಡಲಾಗುತ್ತಿದೆ.

‘ಜೈಲರ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ನಟಿಸಿದ್ದರು. ಅವರ ಎಂಟ್ರಿಗೆ ಸಖತ್ ಸಿಳ್ಳೆ ಬಿದ್ದಿತ್ತು. ರಜನಿಕಾಂತ್ ಕೂಡ ಶಿವರಾಜ್​ಕುಮಾರ್​ಗೆ ಕರೆ ಮಾಡಿ, ‘ಒಂದೇ ದೃಶ್ಯದಲ್ಲಿ ಎಲ್ಲರನ್ನೂ ತಿಂದ್ಕೊಂಡು ಬಿಟ್ಯಲ್ಲ’ ಎಂದು ಹೆಮ್ಮೆಯಿಂದ ಹೇಳಿದ್ದರಂತೆ. ಧನುಷ್​ಗೂ ಈ ಚಿತ್ರ ಇಷ್ಟ ಆಗಿದ್ದು, ಕ್ಯಾಪ್ಟನ್ ಮಿಲ್ಲರ್ ಈವೆಂಟ್​ನಲ್ಲಿ ಮಾತನಾಡಿದ್ದರು.

‘ಜೈಲರ್ ಕ್ಲೈಮ್ಯಾಕ್ಸ್ ಸ್ಲೋ ಮೋಷನ್​ನಲ್ಲಿ ನಡೆದು ಬಂದಹಾಗೆಯೇ ತಮಿಳುನಾಡು ಜನರ ಮನಸ್ಸಲ್ಲೂ ಹಾಗೆಯೇ ನಡೆದು ಹೋದ್ರಿ. ಮನುಷ್ಯನ ಮನಸ್ಸಿಗೆ, ನಿಮ್ಮ ಕೆಲಸಕ್ಕೆ ನಾನು ದೊಡ್ಡ ಅಭಿಮಾನಿ. ಅಪ್ಪನ ಹೆಸರನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದಕ್ಕೆ ದೊಡ್ಡ ಉದಾಹರಣೆ. ನನ್ನ ಮಗ ಇದ್ದಾನೆ. ನಿಮ್ಮ ನೋಡಿ ಕಲಿಯಬೇಕು’ ಎಂದರು.

ಆ ಬಳಿಕ ಎದ್ದು ನಿಂತು ಶಿವರಾಜ್​ಕುಮಾರ್ ಅವರಿಗೆ ಜೋರಾದ ಚಪ್ಪಾಳೆ ತಟ್ಟಲು ಹೇಳಿದರು. ಅಲ್ಲಿ ನೆರೆದಿದ್ದ ಸಾವಿರಾರು ಮಂದಿ ಶಿವರಾಜ್​ಕುಮಾರ್ ಅವರಿಗೆ ಎದ್ದು ನಿಂತು ಚಪ್ಪಾಳೆ ತಟ್ಟಿದರು. ಈಗ ವಿಡಿಯೋನ ಎಲ್ಲೂ ವೈರಲ್ ಮಾಡುತ್ತಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ:  ಕಮಲ್ ಹಾಸನ್​ನ ತಬ್ಬಿ ಮೂರು ದಿನ ಸ್ನಾನ ಮಾಡಿರಲಿಲ್ಲ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಸದ್ಯ ಅಮೆರಿಕದಲ್ಲಿ ಇದ್ದಾರೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಶೀಘ್ರವೇ ಅವರು ಶಸ್ತ್ರಚಿಕಿತ್ಸೆ ಪಡೆಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ