Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ ಇನ್ನೂ ಇಬ್ಬರು ಆಟಗಾರರು ಬರುತ್ತಿದ್ದಾರೆ. ಯಾರದು?

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?
Follow us
ಮಂಜುನಾಥ ಸಿ.
|

Updated on: Nov 17, 2024 | 8:56 AM

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತು ಒಳ್ಳೆ ಆಟ ಆಡುತ್ತಿದ್ದಾರೆ. ಲಾಯರ್ ಜಗದೀಶ್ ಮತ್ತು ರಂಜಿತ್ ನಿಯಮ ಮುರಿದು ಹೊರ ಹೋದ ಕಾರಣಕ್ಕೆ ವೈಲ್ಡ್ ಕಾರ್ಡ್ ಮೂಲಕ ಹನುಮಂತು ಅನ್ನು ಒಳಗೆ ಕರೆದುಕೊಳ್ಳಲಾಗಿತ್ತು. ಆದರೆ ಈಗ ಮತ್ತೆ ಇಬ್ಬರು ಸೆಲೆಬ್ರಿಟಿಗಳು ವೈಲ್ಡ್ ಕಾರ್ಡ್ ಮೂಲಕ ಬಿಗ್​ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಶೋಭಾ ಶೆಟ್ಟಿ ಮತ್ತು ರಂಜಿತ್ ಅವರುಗಳು ಈ ಬಾರಿ ವೈಲ್ಡ್ ಕಾರ್ಡ್​ ಮೂಲಕ ಬಿಗ್​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂದಹಾಗೆ ಈ ಶೋಭಾ ಶೆಟ್ಟಿಗೆ ಬಿಗ್​ಬಾಸ್ ಹೊಸದೇನೂ ಅಲ್ಲ. ಈ ಹಿಂದೆ ತೆಲುಗು ಬಿಗ್​ಬಾಸ್ ಸೀಸನ್ 07 ರಲ್ಲಿ ಶೋಭಾ ಶೆಟ್ಟಿ ಭಾಗಿಯಾಗಿದ್ದರು. ಅಲ್ಲಿ ತಮ್ಮ ಜಗಳ, ಕಿರಿಕಿರಿಗಳಿಂದಾಗಿಯೇ ಜನಪ್ರಿಯ ಆಗಿದ್ದರು ಶೋಭಾ ಶೆಟ್ಟಿ.

ಶೋಭಾ ಶೆಟ್ಟಿ ನಟಿಯಾಗಿದ್ದು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ವ್ಲಾಗರ್ ಸಹ ಆಗಿರುವ ಶೋಭಾ ಶೆಟ್ಟಿ ಯೂಟ್ಯೂಬ್ ಚಾನೆಲ್ ಹೊಂದಿದ್ದು ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ವಿಡಿಯೋ ಮಾಡಿ ವ್ಲಾಗ್ ರೂಪದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡುತ್ತಿರುವ ರಂಜಿತ್ ಸಹ ನಟರಾಗಿದ್ದು, ಕಿರುತೆರೆ ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಹಳೆ ವರ್ತೂರು ಸಂತೋಷ್ ಅನ್ನು ನೆನಪಿಸಿಕೊಂಡ ಸುದೀಪ್

ಈಗಾಗಲೇ ಈ ಸೀಸನ್​ನಲ್ಲಿ ಹನುಮಂತು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಮನೆ ಪ್ರವೇಶಿಸಿದ್ದಾರೆ. ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವಿನಾಶ್ ಮತ್ತು ಪವಿ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಇಬ್ಬರೂ ಆರಂಭದಲ್ಲಿ ಭರವಸೆ ಮೂಡಿಸಿದ್ದರಾದರೂ ಅಷ್ಟೇನೂ ಚೆನ್ನಾಗಿ ಆಡಲಿಲ್ಲ. ಇಬ್ಬರೂ ಸಹ ಬಂದಷ್ಟೆ ವೇಗವಾಗಿ ಮನೆಯಿಂದ ಎಲಿಮಿನೇಟ್ ಆದರು. ಈಗ ಬರಲಿರುವ ಶೋಭಾ ಶೆಟ್ಟಿ ಹಾಗೂ ರಂಜಿತ್ ಕತೆ ಏನಾಗಲಿದೆ ಕಾದು ನೋಡಬೇಕಿದೆ.

ಶೋಭಾ ಶೆಟ್ಟಿ ಹಾಗೂ ರಂಜಿತ್ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಲಿದ್ದಾರೆ ಎಂಬುದು ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಮಾತ್ರವೇ ಹರಿದಾಡುತ್ತಿರುವ ಸುದ್ದಿ ಆಗಿದ್ದು, ಕಲರ್ಸ್ ವಾಹಿನಿ ಈ ಬಗ್ಗೆ ಯಾವುದೇ ಹೇಳಿಕೆ ಅಥವಾ ಪ್ರೋಮೋ ಬಿಡುಗಡೆ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್