AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ ಇನ್ನೂ ಇಬ್ಬರು ಆಟಗಾರರು ಬರುತ್ತಿದ್ದಾರೆ. ಯಾರದು?

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?
ಮಂಜುನಾಥ ಸಿ.
|

Updated on: Nov 17, 2024 | 8:56 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತು ಒಳ್ಳೆ ಆಟ ಆಡುತ್ತಿದ್ದಾರೆ. ಲಾಯರ್ ಜಗದೀಶ್ ಮತ್ತು ರಂಜಿತ್ ನಿಯಮ ಮುರಿದು ಹೊರ ಹೋದ ಕಾರಣಕ್ಕೆ ವೈಲ್ಡ್ ಕಾರ್ಡ್ ಮೂಲಕ ಹನುಮಂತು ಅನ್ನು ಒಳಗೆ ಕರೆದುಕೊಳ್ಳಲಾಗಿತ್ತು. ಆದರೆ ಈಗ ಮತ್ತೆ ಇಬ್ಬರು ಸೆಲೆಬ್ರಿಟಿಗಳು ವೈಲ್ಡ್ ಕಾರ್ಡ್ ಮೂಲಕ ಬಿಗ್​ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಶೋಭಾ ಶೆಟ್ಟಿ ಮತ್ತು ರಂಜಿತ್ ಅವರುಗಳು ಈ ಬಾರಿ ವೈಲ್ಡ್ ಕಾರ್ಡ್​ ಮೂಲಕ ಬಿಗ್​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂದಹಾಗೆ ಈ ಶೋಭಾ ಶೆಟ್ಟಿಗೆ ಬಿಗ್​ಬಾಸ್ ಹೊಸದೇನೂ ಅಲ್ಲ. ಈ ಹಿಂದೆ ತೆಲುಗು ಬಿಗ್​ಬಾಸ್ ಸೀಸನ್ 07 ರಲ್ಲಿ ಶೋಭಾ ಶೆಟ್ಟಿ ಭಾಗಿಯಾಗಿದ್ದರು. ಅಲ್ಲಿ ತಮ್ಮ ಜಗಳ, ಕಿರಿಕಿರಿಗಳಿಂದಾಗಿಯೇ ಜನಪ್ರಿಯ ಆಗಿದ್ದರು ಶೋಭಾ ಶೆಟ್ಟಿ.

ಶೋಭಾ ಶೆಟ್ಟಿ ನಟಿಯಾಗಿದ್ದು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ವ್ಲಾಗರ್ ಸಹ ಆಗಿರುವ ಶೋಭಾ ಶೆಟ್ಟಿ ಯೂಟ್ಯೂಬ್ ಚಾನೆಲ್ ಹೊಂದಿದ್ದು ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ವಿಡಿಯೋ ಮಾಡಿ ವ್ಲಾಗ್ ರೂಪದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡುತ್ತಿರುವ ರಂಜಿತ್ ಸಹ ನಟರಾಗಿದ್ದು, ಕಿರುತೆರೆ ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಹಳೆ ವರ್ತೂರು ಸಂತೋಷ್ ಅನ್ನು ನೆನಪಿಸಿಕೊಂಡ ಸುದೀಪ್

ಈಗಾಗಲೇ ಈ ಸೀಸನ್​ನಲ್ಲಿ ಹನುಮಂತು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಮನೆ ಪ್ರವೇಶಿಸಿದ್ದಾರೆ. ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವಿನಾಶ್ ಮತ್ತು ಪವಿ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಇಬ್ಬರೂ ಆರಂಭದಲ್ಲಿ ಭರವಸೆ ಮೂಡಿಸಿದ್ದರಾದರೂ ಅಷ್ಟೇನೂ ಚೆನ್ನಾಗಿ ಆಡಲಿಲ್ಲ. ಇಬ್ಬರೂ ಸಹ ಬಂದಷ್ಟೆ ವೇಗವಾಗಿ ಮನೆಯಿಂದ ಎಲಿಮಿನೇಟ್ ಆದರು. ಈಗ ಬರಲಿರುವ ಶೋಭಾ ಶೆಟ್ಟಿ ಹಾಗೂ ರಂಜಿತ್ ಕತೆ ಏನಾಗಲಿದೆ ಕಾದು ನೋಡಬೇಕಿದೆ.

ಶೋಭಾ ಶೆಟ್ಟಿ ಹಾಗೂ ರಂಜಿತ್ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಲಿದ್ದಾರೆ ಎಂಬುದು ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಮಾತ್ರವೇ ಹರಿದಾಡುತ್ತಿರುವ ಸುದ್ದಿ ಆಗಿದ್ದು, ಕಲರ್ಸ್ ವಾಹಿನಿ ಈ ಬಗ್ಗೆ ಯಾವುದೇ ಹೇಳಿಕೆ ಅಥವಾ ಪ್ರೋಮೋ ಬಿಡುಗಡೆ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್