AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ ಇನ್ನೂ ಇಬ್ಬರು ಆಟಗಾರರು ಬರುತ್ತಿದ್ದಾರೆ. ಯಾರದು?

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?
ಮಂಜುನಾಥ ಸಿ.
|

Updated on: Nov 17, 2024 | 8:56 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತು ಒಳ್ಳೆ ಆಟ ಆಡುತ್ತಿದ್ದಾರೆ. ಲಾಯರ್ ಜಗದೀಶ್ ಮತ್ತು ರಂಜಿತ್ ನಿಯಮ ಮುರಿದು ಹೊರ ಹೋದ ಕಾರಣಕ್ಕೆ ವೈಲ್ಡ್ ಕಾರ್ಡ್ ಮೂಲಕ ಹನುಮಂತು ಅನ್ನು ಒಳಗೆ ಕರೆದುಕೊಳ್ಳಲಾಗಿತ್ತು. ಆದರೆ ಈಗ ಮತ್ತೆ ಇಬ್ಬರು ಸೆಲೆಬ್ರಿಟಿಗಳು ವೈಲ್ಡ್ ಕಾರ್ಡ್ ಮೂಲಕ ಬಿಗ್​ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಶೋಭಾ ಶೆಟ್ಟಿ ಮತ್ತು ರಂಜಿತ್ ಅವರುಗಳು ಈ ಬಾರಿ ವೈಲ್ಡ್ ಕಾರ್ಡ್​ ಮೂಲಕ ಬಿಗ್​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂದಹಾಗೆ ಈ ಶೋಭಾ ಶೆಟ್ಟಿಗೆ ಬಿಗ್​ಬಾಸ್ ಹೊಸದೇನೂ ಅಲ್ಲ. ಈ ಹಿಂದೆ ತೆಲುಗು ಬಿಗ್​ಬಾಸ್ ಸೀಸನ್ 07 ರಲ್ಲಿ ಶೋಭಾ ಶೆಟ್ಟಿ ಭಾಗಿಯಾಗಿದ್ದರು. ಅಲ್ಲಿ ತಮ್ಮ ಜಗಳ, ಕಿರಿಕಿರಿಗಳಿಂದಾಗಿಯೇ ಜನಪ್ರಿಯ ಆಗಿದ್ದರು ಶೋಭಾ ಶೆಟ್ಟಿ.

ಶೋಭಾ ಶೆಟ್ಟಿ ನಟಿಯಾಗಿದ್ದು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ವ್ಲಾಗರ್ ಸಹ ಆಗಿರುವ ಶೋಭಾ ಶೆಟ್ಟಿ ಯೂಟ್ಯೂಬ್ ಚಾನೆಲ್ ಹೊಂದಿದ್ದು ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ವಿಡಿಯೋ ಮಾಡಿ ವ್ಲಾಗ್ ರೂಪದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡುತ್ತಿರುವ ರಂಜಿತ್ ಸಹ ನಟರಾಗಿದ್ದು, ಕಿರುತೆರೆ ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಹಳೆ ವರ್ತೂರು ಸಂತೋಷ್ ಅನ್ನು ನೆನಪಿಸಿಕೊಂಡ ಸುದೀಪ್

ಈಗಾಗಲೇ ಈ ಸೀಸನ್​ನಲ್ಲಿ ಹನುಮಂತು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಮನೆ ಪ್ರವೇಶಿಸಿದ್ದಾರೆ. ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವಿನಾಶ್ ಮತ್ತು ಪವಿ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಇಬ್ಬರೂ ಆರಂಭದಲ್ಲಿ ಭರವಸೆ ಮೂಡಿಸಿದ್ದರಾದರೂ ಅಷ್ಟೇನೂ ಚೆನ್ನಾಗಿ ಆಡಲಿಲ್ಲ. ಇಬ್ಬರೂ ಸಹ ಬಂದಷ್ಟೆ ವೇಗವಾಗಿ ಮನೆಯಿಂದ ಎಲಿಮಿನೇಟ್ ಆದರು. ಈಗ ಬರಲಿರುವ ಶೋಭಾ ಶೆಟ್ಟಿ ಹಾಗೂ ರಂಜಿತ್ ಕತೆ ಏನಾಗಲಿದೆ ಕಾದು ನೋಡಬೇಕಿದೆ.

ಶೋಭಾ ಶೆಟ್ಟಿ ಹಾಗೂ ರಂಜಿತ್ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಲಿದ್ದಾರೆ ಎಂಬುದು ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಮಾತ್ರವೇ ಹರಿದಾಡುತ್ತಿರುವ ಸುದ್ದಿ ಆಗಿದ್ದು, ಕಲರ್ಸ್ ವಾಹಿನಿ ಈ ಬಗ್ಗೆ ಯಾವುದೇ ಹೇಳಿಕೆ ಅಥವಾ ಪ್ರೋಮೋ ಬಿಡುಗಡೆ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!