AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ಬಾಯ್​ಫ್ರೆಂಡ್ ವಿಚಾರ ರಿವೀಲ್ ಮಾಡಿದ ಶಿಶಿರ್

ಬಿಗ್ ಬಾಸ್ ಮನೆಗೆ ಶೋಭಾ ಶೆಟ್ಟಿ ಅವರ ಆಗಮವಾಗಿದೆ. ಶಿಶಿರ್ ಅವರು ಶೋಭಾ ಅವರಿಗೆ ಹೊರಗೆ ಬಾಯ್‌ಫ್ರೆಂಡ್ ಇರುವುದನ್ನು ಬಹಿರಂಗಪಡಿಸಿದ್ದಾರೆ. ಶೋಭಾ ಮತ್ತು ಶಿಶಿರ್ ನಡುವೆ ಈ ಮೊದಲೇ ಪರಿಚಯ ಇದೆ. ಶಿಶಿರ್ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ಬಾಯ್​ಫ್ರೆಂಡ್ ವಿಚಾರ ರಿವೀಲ್ ಮಾಡಿದ ಶಿಶಿರ್
ಶೋಭಾ
ರಾಜೇಶ್ ದುಗ್ಗುಮನೆ
|

Updated on: Nov 19, 2024 | 8:53 AM

Share

ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ಅವರ ಆಗಮನ ಆಗಿದೆ. ಅವರು ನೋಡೋಕೆ ಫ್ಲವರ್ ರೀತಿ ಇದ್ದರೂ ಅವರು ಫೈಯರ್ ಆಗುತ್ತಾರೆ. ಅವರು ಒಮ್ಮೆ ಧ್ವನಿ ಎತ್ತಿದರೆ ಎಲ್ಲರೂ ಸೈಲೆಂಟ್ ಆಗೋದು ಪಕ್ಕಾ. ಆ ರೀತಿಯಲ್ಲಿ ಅವರ ಆಟ ಆಡುತ್ತಾರೆ. ಇಷ್ಟು ದಿನ ಶಿಶಿರ್ ಅವರು ಐಶ್ವರ್ಯಾ ಜೊತೆ ಇದ್ದರು. ತ್ರಿವಿಕ್ರಂ ಭವ್ಯಾ ಜೊತೆ ಇದ್ದರು. ಇಬ್ಬರೂ ಶೋಭಾ ಜೊತೆ ಆಪ್ತತೆ ಬೆಳೆಸಿಕೊಳ್ಳುವ ಪ್ರಯತ್ನ ಮಾಡುತ್ತಾರಾ ಎನ್ನುವ ಪ್ರಶ್ನೆ ಬಂತು. ಇದಕ್ಕೆ ಉತ್ತರ ಸಿಕ್ಕಿದೆ. ಶೋಭಾಗೆ ಈಗಾಗಲೇ ಬಾಯ್​ಫ್ರೆಂಡ್ ಇರುವ ವಿಚಾರವನ್ನು ಶಿಶಿರ್ ರಿವೀಲ್ ಮಾಡಿದ್ದಾರೆ.

ಶೋಭಾ ಶೆಟ್ಟಿ ಅವರು ದೊಡ್ಮನೆಗೆ ಬರುತ್ತಿದ್ದಂತೆ ಶಿಶಿರ್ ಜೊತೆ ಉತ್ತಮವಾಗಿ ಮಾತನಾಡಿದರು. ಇಬ್ಬರೂ ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ಈ ಮೊದಲು ಕೆಲಸ ಮಾಡಿದ್ದರಿಂದ ಇಬ್ಬರ ಮಧ್ಯೆ ಒಳ್ಳೆಯ ಪರಿಚಯ ಇದೆ. ಈ ಕಾರಣದಿಂದಲೇ ಇಬ್ಬರೂ ಹಗ್ ಮಾಡಿಕೊಂಡು ಪರಸ್ಪರ ವಿಶ್ ಮಾಡಿದರು. ಇದನ್ನು ನೋಡಿದ ಮಂಜು ಅವರು ಶಿಶಿರ್​ನ ಕಾಲೆಳೆದರು.

ಶಿಶಿರ್ ಮುಖ ನೋಡಿಕೊಂಡು ಭವಿಷ್ಯ ಹೇಳೋಕೆ ಆರಂಭಿಸಿದರು ಮಂಜು. ‘ಯಾವಾಗಲೂ ಇಲ್ಲದಿರೋ ಕಳೆ ಈಗ ಕಾಣುತ್ತಿದೆ. ಯಾವಾಗೂ ಇಲ್ಲದ ಧ್ವನಿ ಈಗ ಬರ್ತಿದೆ. ಜೋರಾಗಿ ಸ್ವಾಗತ ಮಾಡಿದ್ದಾರೆ. ರವಿಚಂದ್ರನ್ ರೀತಿ ಬಣ್ಣದ ಡ್ರೆಸ್ ಹಾಕಿದ್ದಾರೆ’ ಎಂದರು ಮಂಜು. ಇದನ್ನು ಕೇಳಿ ಶಿಶಿರ್ ಒಂದು ಸೀಕ್ರೆಟ್ ರಿವೀಲ್ ಮಾಡಿದರು. ‘ಅವರಿಗೆ ಹೊರಗೆ ಹುಡುಗ ಇದ್ದಾನೆ, ಮದುವೆ ಆಗ್ತಿದ್ದಾರೆ’ ಎಂದರು. ಆದರೆ, ಅವರ ಬಾಯ್​ಫ್ರೆಂಡ್ ಯಾರು ಎಂದು ಹೇಳಿಲ್ಲ. ಆ ಬಳಿಕ ತ್ರಿವಿಕ್ರಂ ಬಳಿ, ‘ಮೀನು ನಿನ್ನ ಕಡೆ ಬರ್ತಿದೆ’ ಎಂದರು.

ಇದನ್ನೂ ಓದಿ: ಕ್ಯಾಪ್ಟನ್ ಆದರೂ ಭವ್ಯಾ ಗೌಡಗೆ ಇಲ್ಲ ಅಧಿಕಾರ; ಎಲ್ಲವನ್ನೂ ಕಸಿದುಕೊಂಡ ಶೋಭಾ ಶೆಟ್ಟಿ

ಯಶ್ವಂತ್ ರೆಡ್ಡಿ ಅವರನ್ನು ಶೋಭಾ ಪ್ರೀತಿಸುತ್ತಿದ್ದಾರೆ. ಇಬ್ಬರೂ ವಿವಾಹ ಆಗಲಿದ್ದಾರೆ. ‘ಕಾರ್ತಿಕ ದೀಪಂ’ ಧಾರಾವಾಹಿಯಲ್ಲಿ ಆದಿತ್ಯ ಪಾತ್ರ ಮಾಡಿದ್ದರು ಯಶ್ವಂತ್ ರೆಡ್ಡಿ. ಇದರಲ್ಲಿ ಶೋಭಾ ಕೂಡ ನಟಿಸಿದ್ದರು. ಆ ಸಂದರ್ಭದಲ್ಲೇ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?