AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್​ನಿಂದ ಕನ್ನಡತಿ ಶೋಭಾ ಶೆಟ್ಟಿ ಔಟ್; ಊಹೆಗೂ ಮೀರಿ ಸಂಭಾವನೆ ಪಡೆದ ನಟಿ

ಶೋಭಾ ಶೆಟ್ಟಿ ಅವರು ಮೂಲತಃ ಕರ್ನಾಟಕದವರು. ತೆಲುಗು ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಗೇಮ್​ ವಿಚಾರದಲ್ಲಿ ಅವರು ಶೇ.100 ಪರ್ಸೆಂಟ್ ಕೊಟ್ಟು ಆಡಿದ್ದಾರೆ. ಆದರೆ, ಮಾಡಿದ ಕೆಲವು ತಪ್ಪಿನಿಂದ ಅವರಿಗೆ ಹಿನ್ನಡೆ ಆಗಿದೆ.

ತೆಲುಗು ಬಿಗ್ ಬಾಸ್​ನಿಂದ ಕನ್ನಡತಿ ಶೋಭಾ ಶೆಟ್ಟಿ ಔಟ್; ಊಹೆಗೂ ಮೀರಿ ಸಂಭಾವನೆ ಪಡೆದ ನಟಿ
ಶೋಭಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Dec 11, 2023 | 1:00 PM

Share

‘ತೆಲುಗು ಬಿಗ್ ಬಾಸ್ ಸೀಸನ್ 7’ರಲ್ಲಿ ಕರ್ನಾಟಕದ ಶೋಭಾ ಶೆಟ್ಟಿ ಎಲ್ಲರ ಗಮನ ಸೆಳೆದರು. ಅವರು 14 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲೇ ಇದ್ದರು. ಈಗ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ. ಕಳೆದ ವೀಕೆಂಡ್ ಎಪಿಸೋಡ್​ನಲ್ಲಿ ಶೋಭಾ (Shobha Shetty) ಅವರು ಕಡಿಮೆ ವೋಟ್ ಪಡೆದು ಬಿಗ್ ಬಾಸ್​ನಿಂದ ಹೊರ ಬಿದ್ದಿದ್ದಾರೆ. ಅವರು ಪಡೆದ ಸಂಭಾವನೆ ವಿಚಾರ ಈಗ ಸಾಕಷ್ಟು ಸುದ್ದಿ ಆಗುತ್ತಿದೆ.

ಶೋಭಾ ಶೆಟ್ಟಿ ಅವರು ಮೂಲತಃ ಕರ್ನಾಟಕದವರು. ತೆಲುಗು ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಗೇಮ್​ ವಿಚಾರದಲ್ಲಿ ಅವರು ಶೇ.100 ಪರ್ಸೆಂಟ್ ಕೊಟ್ಟು ಆಡಿದ್ದಾರೆ. ಆದರೆ, ಮಾಡಿದ ಕೆಲವು ತಪ್ಪಿನಿಂದ ಅವರಿಗೆ ಹಿನ್ನಡೆ ಆಯಿತು. ಅವರನ್ನು ಬಿಗ್ ಬಾಸ್​ನಿಂದ ಹೊರಗೆ ಕಳುಹಿಸುವಂತೆ ಆಗ್ರಹ ಕೇಳಿ ಬರುತ್ತಲೇ ಇತ್ತು. ಪ್ರತಿ ಬಾರಿ ನಾಮಿನೇಟ್ ಆದಾಗಲೂ ಅವರು ಬಚಾವ್ ಆಗಿದ್ದರು. ಆದರೆ, ಈಗ ದೊಡ್ಮನೆಯಿಂದ ಔಟ್ ಆಗಿದ್ದಾರೆ.

ಶೋಭಾ ಅವರು ಪ್ರತಿ ವಾರಕ್ಕೆ 2.25 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಶೋ ಪೂರ್ಣಗೊಂಡ ಬಳಿಕ ಅವರಿಗೆ ಸಿಕ್ಕಿದ್ದು 31.50 ಲಕ್ಷ ರೂಪಾಯಿ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಟ್ರೋಫಿ ಎತ್ತಲು ಸಾಧ್ಯವಾಗಿಲ್ಲ ಎನ್ನುವ ಬೇಸರ ಅವರನ್ನು ಕಾಡಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ವಿನ್ ಆಗೋದು ನಾನೇ’ ಎಂದ ವಿನಯ್; ಬೆಂಬಲ ಸೂಚಿಸಿದ ಸ್ನೇಹಿತ್​ಗೆ ವೀಕ್ಷಕರ ಪ್ರಶ್ನೆ

ವಿವಾದಗಳ ಮೂಲಕ ಸುದ್ದಿ ಆದರು

ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ನೆಗೆಟಿವಿಟಿ ಹರಡುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಇತ್ತು. ಅವರು ಮಾತನಾಡುವ ರೀತಿ ಸರಿ ಇಲ್ಲ, ಒರಟಾಗಿ ನಡೆದುಕೊಳ್ಳುತ್ತಾರೆ, ಕೂಗಾಡುತ್ತಾರೆ, ಇತರ ಸ್ಪರ್ಧಿಗಳನ್ನು ಪ್ರಚೋದಿಸುತ್ತಾರೆ, ಗ್ರೂಪಿಸಂ ಮಾಡುತ್ತಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂತು. ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಹಲವರು ಪೋಸ್ಟ್ ಹಾಕಿದ್ದರು. ಸ್ಟಾರ್ ಮಾ ವಾಹಿನಿಯವರು ಶೋಭಾ ಅವರನ್ನು ಎಲಿಮಿನೇಷನ್‌ನಿಂದ ಪಾರು ಮಾಡುತ್ತಿದ್ದಾರೆ ಎಂಬ ಆರೋಪವನ್ನು ಕೆಲವರು ಮಾಡಿದ್ದರು. ಶೋಭಾ ಶೆಟ್ಟಿ ಎಲಿಮಿನೇಷನ್ ಬಗ್ಗೆ ಹಲವು ಮೀಮ್​ಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ