AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್​ನಿಂದ ಕನ್ನಡತಿ ಶೋಭಾ ಶೆಟ್ಟಿ ಔಟ್; ಊಹೆಗೂ ಮೀರಿ ಸಂಭಾವನೆ ಪಡೆದ ನಟಿ

ಶೋಭಾ ಶೆಟ್ಟಿ ಅವರು ಮೂಲತಃ ಕರ್ನಾಟಕದವರು. ತೆಲುಗು ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಗೇಮ್​ ವಿಚಾರದಲ್ಲಿ ಅವರು ಶೇ.100 ಪರ್ಸೆಂಟ್ ಕೊಟ್ಟು ಆಡಿದ್ದಾರೆ. ಆದರೆ, ಮಾಡಿದ ಕೆಲವು ತಪ್ಪಿನಿಂದ ಅವರಿಗೆ ಹಿನ್ನಡೆ ಆಗಿದೆ.

ತೆಲುಗು ಬಿಗ್ ಬಾಸ್​ನಿಂದ ಕನ್ನಡತಿ ಶೋಭಾ ಶೆಟ್ಟಿ ಔಟ್; ಊಹೆಗೂ ಮೀರಿ ಸಂಭಾವನೆ ಪಡೆದ ನಟಿ
ಶೋಭಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Dec 11, 2023 | 1:00 PM

Share

‘ತೆಲುಗು ಬಿಗ್ ಬಾಸ್ ಸೀಸನ್ 7’ರಲ್ಲಿ ಕರ್ನಾಟಕದ ಶೋಭಾ ಶೆಟ್ಟಿ ಎಲ್ಲರ ಗಮನ ಸೆಳೆದರು. ಅವರು 14 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲೇ ಇದ್ದರು. ಈಗ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ. ಕಳೆದ ವೀಕೆಂಡ್ ಎಪಿಸೋಡ್​ನಲ್ಲಿ ಶೋಭಾ (Shobha Shetty) ಅವರು ಕಡಿಮೆ ವೋಟ್ ಪಡೆದು ಬಿಗ್ ಬಾಸ್​ನಿಂದ ಹೊರ ಬಿದ್ದಿದ್ದಾರೆ. ಅವರು ಪಡೆದ ಸಂಭಾವನೆ ವಿಚಾರ ಈಗ ಸಾಕಷ್ಟು ಸುದ್ದಿ ಆಗುತ್ತಿದೆ.

ಶೋಭಾ ಶೆಟ್ಟಿ ಅವರು ಮೂಲತಃ ಕರ್ನಾಟಕದವರು. ತೆಲುಗು ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಗೇಮ್​ ವಿಚಾರದಲ್ಲಿ ಅವರು ಶೇ.100 ಪರ್ಸೆಂಟ್ ಕೊಟ್ಟು ಆಡಿದ್ದಾರೆ. ಆದರೆ, ಮಾಡಿದ ಕೆಲವು ತಪ್ಪಿನಿಂದ ಅವರಿಗೆ ಹಿನ್ನಡೆ ಆಯಿತು. ಅವರನ್ನು ಬಿಗ್ ಬಾಸ್​ನಿಂದ ಹೊರಗೆ ಕಳುಹಿಸುವಂತೆ ಆಗ್ರಹ ಕೇಳಿ ಬರುತ್ತಲೇ ಇತ್ತು. ಪ್ರತಿ ಬಾರಿ ನಾಮಿನೇಟ್ ಆದಾಗಲೂ ಅವರು ಬಚಾವ್ ಆಗಿದ್ದರು. ಆದರೆ, ಈಗ ದೊಡ್ಮನೆಯಿಂದ ಔಟ್ ಆಗಿದ್ದಾರೆ.

ಶೋಭಾ ಅವರು ಪ್ರತಿ ವಾರಕ್ಕೆ 2.25 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಶೋ ಪೂರ್ಣಗೊಂಡ ಬಳಿಕ ಅವರಿಗೆ ಸಿಕ್ಕಿದ್ದು 31.50 ಲಕ್ಷ ರೂಪಾಯಿ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಟ್ರೋಫಿ ಎತ್ತಲು ಸಾಧ್ಯವಾಗಿಲ್ಲ ಎನ್ನುವ ಬೇಸರ ಅವರನ್ನು ಕಾಡಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ವಿನ್ ಆಗೋದು ನಾನೇ’ ಎಂದ ವಿನಯ್; ಬೆಂಬಲ ಸೂಚಿಸಿದ ಸ್ನೇಹಿತ್​ಗೆ ವೀಕ್ಷಕರ ಪ್ರಶ್ನೆ

ವಿವಾದಗಳ ಮೂಲಕ ಸುದ್ದಿ ಆದರು

ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ನೆಗೆಟಿವಿಟಿ ಹರಡುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಇತ್ತು. ಅವರು ಮಾತನಾಡುವ ರೀತಿ ಸರಿ ಇಲ್ಲ, ಒರಟಾಗಿ ನಡೆದುಕೊಳ್ಳುತ್ತಾರೆ, ಕೂಗಾಡುತ್ತಾರೆ, ಇತರ ಸ್ಪರ್ಧಿಗಳನ್ನು ಪ್ರಚೋದಿಸುತ್ತಾರೆ, ಗ್ರೂಪಿಸಂ ಮಾಡುತ್ತಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂತು. ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಹಲವರು ಪೋಸ್ಟ್ ಹಾಕಿದ್ದರು. ಸ್ಟಾರ್ ಮಾ ವಾಹಿನಿಯವರು ಶೋಭಾ ಅವರನ್ನು ಎಲಿಮಿನೇಷನ್‌ನಿಂದ ಪಾರು ಮಾಡುತ್ತಿದ್ದಾರೆ ಎಂಬ ಆರೋಪವನ್ನು ಕೆಲವರು ಮಾಡಿದ್ದರು. ಶೋಭಾ ಶೆಟ್ಟಿ ಎಲಿಮಿನೇಷನ್ ಬಗ್ಗೆ ಹಲವು ಮೀಮ್​ಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ