AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್​ ಕಾನ್ಫಿಡೆನ್ಸ್​ನಿಂದ ಬಿಗ್​ ಬಾಸ್​ನಲ್ಲಿ ಎಡವುತ್ತಿದ್ದಾರಾ ಶೋಭಾ ಶೆಟ್ಟಿ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದವರು ಶೋಭಾ ಶೆಟ್ಟಿ ಹಾಗೂ ರಜತ್. ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಅದೇ ಜೋಶ್​ನಲ್ಲಿ ಶೋಭಾ ಶೆಟ್ಟಿ ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಆದರೆ, ಅವರು ಸೋಲುತ್ತಿದ್ದಾರೆ.

ಓವರ್​ ಕಾನ್ಫಿಡೆನ್ಸ್​ನಿಂದ ಬಿಗ್​ ಬಾಸ್​ನಲ್ಲಿ ಎಡವುತ್ತಿದ್ದಾರಾ ಶೋಭಾ ಶೆಟ್ಟಿ?
ಶೋಭಾ
ರಾಜೇಶ್ ದುಗ್ಗುಮನೆ
|

Updated on:Nov 22, 2024 | 6:15 AM

Share

ಒಂದು ಬಿಗ್ ಬಾಸ್ ಸೀಸನ್​ನಲ್ಲಿ ಆಟ ಆಡಿ ಆ ಸ್ಪರ್ಧಿ ಮತ್ತೆ ಬಿಗ್ ಬಾಸ್​ಗೆ ಬಂದರೆ ಅವರಿಗೆ ಆಟ ಸುಲಭ ಎಂಬುದು ಅನೇಕರ ಅಭಿಪ್ರಾಯ. ಶೋಭಾ ಶೆಟ್ಟಿ ವಿಚಾರದಲ್ಲಿ ಅನೇಕರು ಹೀಗೆಯೇ ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಶೋಭಾ ಶೆಟ್ಟಿ ಅವರು ಮೊದಲ ವಾರವೇ ಸುಸ್ತಾಗಿದ್ದಾರೆ. ಇದಕ್ಕೆ ಓವರ್ ಕಾನ್ಫಿಡೆನ್ಸ್ ಕಾರಣ ಇರಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದವರು ಶೋಭಾ ಶೆಟ್ಟಿ ಹಾಗೂ ರಜತ್. ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಅವರು ಅಲ್ಲಿ ಸಖತ್ ಅಗ್ರೆಸ್ ಆಗಿ ಆಡಿದ್ದರು. ಅವರ ಆಟ ನೋಡಿ ಅನೇಕರಿಗೆ ಅಚ್ಚರಿ ಆಗಿತ್ತು. ಹುಡುಗಿಯರು ಹೀಗೂ ಆಡಬಹುದಾ ಎಂದು ತೋರಿಸಿಕೊಟ್ಟಿದ್ದರು.

ಅದೇ ಜೋಶ್​ನಲ್ಲಿ ಶೋಭಾ ಶೆಟ್ಟಿ ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ರಿಯಾಲಿಟಿ ಶೋ ಒಂದೇ ಆದರೂ ಆಟಗಾರರು, ಆಟದ ಫಾರ್ಮ್ಯಾಟ್ ಸಂಪೂರ್ಣವಾಗಿ ಬದಲಾಗಿದೆ. ಅದರಲ್ಲೂ ಶೋಭಾ ಅವರು ವೈಲ್ಡ್ ಕಾರ್ಡ್ ಮೂಲಕ ಬಂದಿರುವುದರಿಂದ ಅವರಿಗೆ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ: ಮೊದಲ ಆಟದಲ್ಲೇ ಭವ್ಯಾ ಎದುರು ಸೋತು ಅಳುತ್ತಾ ಕುಳಿತ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಅವರು ತುಂಬಾನೇ ಓವರ್ ಕಾನ್ಫಿಡೆನ್ಸ್​ನಿಂದ ಆಟ ಆಡುತ್ತಿದ್ದಾರೆ ಎಂದು ಅನೇಕರಿಗೆ ಅನಿಸಿದೆ. ಈ ಓವರ್ ಕಾನ್ಫಿಡೆನ್ಸ್​ನಿಂದಲೇ ಅವರಿಗೆ ಹಿನ್ನಡೆ ಆಗುತ್ತಿದೆ. ಅವರ ನಾಯಕತ್ವದಲ್ಲಿ ಮೊದಲ ಟಾಸ್ಕ್​ನ ಅವರು ಸೋತಿದ್ದಾರೆ. ಇದರಿಂದ ಅವರಿಗೆ ಸಾಕಷ್ಟು ಬೇಸರ ಆಗಿದ್ದು, ಕಣ್ಣೀರು ಹಾಕಿದ್ದಾರೆ. ಆ ಬಳಿಕ ಅವರು ಎರಡು ಬಾರಿ ಪೆಟ್ಟು ಮಾಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಶೋಭಾ ಶೆಟ್ಟಿ ಅವರು ತುಂಬಾನೇ ಓವರ್ ಕಾನ್ಫಿಡೆನ್ಸ್​ನಿಂದ ಆಡುತ್ತಿರುವುದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:14 am, Fri, 22 November 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ