Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೇನು ಅಲ್ಲಾಡಿಸಿದೆ ಹೇಳಿ’; ಮಂಜುಗೆ ನೇರ ಪ್ರಶ್ನೆ ಇಟ್ಟ ಶೋಭಾ ಶೆಟ್ಟಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿರುವ ಶೋಭಾ ಶೆಟ್ಟಿ ಅವರ ಆಟಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮಂಜು ಮತ್ತು ಶೋಭಾ ನಡುವೆ ನಾಯಕತ್ವದ ವಿಚಾರದಲ್ಲಿ ಜಗಳ ನಡೆದಿದ್ದು, ಶೋಭಾ ಅವರ ವರ್ತನೆಗೆ ಮಂಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿವಾದವು ದೊಡ್ಡಮನೆಯ ವಾತಾವರಣದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

‘ನಾನೇನು ಅಲ್ಲಾಡಿಸಿದೆ ಹೇಳಿ’; ಮಂಜುಗೆ ನೇರ ಪ್ರಶ್ನೆ ಇಟ್ಟ ಶೋಭಾ ಶೆಟ್ಟಿ
ಶೋಭಾ-ಮಂಜು
Follow us
ರಾಜೇಶ್ ದುಗ್ಗುಮನೆ
|

Updated on: Nov 20, 2024 | 7:19 AM

ಶೋಭಾ ಶೆಟ್ಟಿ ಅವರು ಬಿಗ್ ಬಾಸ್​ನಲ್ಲಿ ಉತ್ತಮ ಆಟ ಆಡುತ್ತಿದ್ದಾರೆ. ಅವರ ಆಟಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಅವರು ದೊಡ್ಮನೆ ವಾತಾವರಣಕ್ಕೆ ಬೇಗ ಹೊಂದಿಕೊಂಡಿದ್ದಾರೆ. ಈ ಮಧ್ಯೆ ಮಂಜು ಹಾಗೂ ಶೋಭಾ ಮಧ್ಯೆ ಕಿರಿಕ್ ಆಗಿದೆ. ಮಂಜು ಆಡಿದ ಮಾತಿಗೆ ಶೋಭಾ ಸಖತ್ ಸಿಟ್ಟಾಗಿದ್ದಾರೆ. ಈ ಎಪಿಸೋಡ್ ಭರ್ಜರಿ ಚರ್ಚೆ ಹುಟ್ಟುಹಾಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಭವ್ಯಾ ಕ್ಯಾಪ್ಟನ್ ಆದರು. ಈ ವಾರದ ಟಾಸ್ಕ್​ಗೆ ಒಂದು ತಂಡದ ಕ್ಯಾಪ್ಟನ್ ಆಗಿ ಭವ್ಯಾ ನೇಮಕ ಗೊಂಡಿದ್ದಾರೆ. ಕ್ಯಾಪ್ಟನ್ ಆಗಿರುವುದಕ್ಕೆ ಅವರಿಗೆ ಸಿಕ್ಕ ವಿಶೇಷ ಅಧಿಕಾರ ಇದು. ಮತ್ತೊಂದು ತಂಡಕ್ಕೆ ಕ್ಯಾಪ್ಟನ್​ನ ಆಯ್ಕೆ ಮಾಡುವ ಪ್ರಕ್ರಿಯೆ ನಡೆದಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಶೋಭಾ ಹಾಗೂ ರಜತ್ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಅವಕಾಶವನ್ನು ಬಿಗ್ ಬಾಸ್ ನೀಡಿದರು. ಆಗ ಮಂಜು ಅವರು ಶೋಭಾಗೆ ನಾಯಕಿ ಆಗುವ ಅರ್ಹತೆ ಇಲ್ಲ ಎಂದರು.

‘ಬಿಗ್ ಬಾಸ್ ನೀಡಿದ ನಿಯಮಗಳಿಗೆ ಯಾರೂ ಕೈ ಹಾಕೋಕೆ ಹೋಗಲ್ಲ. ಆದರೆ, ಶೋಭಾ ಅವರು ಅದನ್ನು ಅಲ್ಲಾಡಿಸಿದರು ಎಂದು ನನಗೆ ವೈಯಕ್ತಿಕವಾಗಿ ಅನಿಸಿತು’ ಎಂದರು ಮಂಜು. ಇದಕ್ಕೆ ಶೋಭಾ ಉತ್ತರಿಸಿದ್ದಾರೆ. ‘ಅಲ್ಲಾಡಿಸಿದ್ದು ಅಂದ್ರೆ ಏನು? ನಾನು ಏನನ್ನು ಅಲ್ಲಾಡಿಸಿದೆ? ನನಗೆ ಈ ಬಗ್ಗೆ ಕ್ಲ್ಯಾರಿಟಿ ಬೇಕು’ ಎಂದು ಶೋಭಾ ಪಟ್ಟು ಹಿಡಿದು ಕುಳಿತರು. ಈ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮಧ್ಯೆ ಮಾತಿನ ಫೈಟ್ ಜೋರಾಯಿತು.

ಇದನ್ನೂ ಓದಿ: ‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್

‘ಸುಮ್ಮನೆ ಕುಳಿತುಕೊಳ್ಳಿ’ ಎಂದು ಮಂಜು ಹೇಳಿದರು. ‘ನಿಮ್ಮ ಮಾತು ಕೇಳೋಕೆ ಬಂದಿಲ್ಲ. ಬಿಗ್ ಬಾಸ್ ಹೇಳಿದ್ರೆ ಮಾತ್ರ ಕೂರೋದು. ಕ್ಲ್ಯಾರಿಫಿಕೇಷನ್ ಕೊಡ್ತೀನಿ’ ಎಂದರು ಶೋಭಾ. ಇವರ ಫೈಟ್​ ನೋಡಿ ಮನೆ ಮಂದಿ ತಲೆಕೆಡಿಸಿಕೊಂಡರು. ಶೋಭಾ ಅವರ ಏರುಧ್ವನಿಯನ್ನು ನೋಡಿ ಹನುಮಂತ ಹಾಗೂ ಧನರಾಜ್ ಅವರು ಶಾಕ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ