AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೇನು ಅಲ್ಲಾಡಿಸಿದೆ ಹೇಳಿ’; ಮಂಜುಗೆ ನೇರ ಪ್ರಶ್ನೆ ಇಟ್ಟ ಶೋಭಾ ಶೆಟ್ಟಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿರುವ ಶೋಭಾ ಶೆಟ್ಟಿ ಅವರ ಆಟಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮಂಜು ಮತ್ತು ಶೋಭಾ ನಡುವೆ ನಾಯಕತ್ವದ ವಿಚಾರದಲ್ಲಿ ಜಗಳ ನಡೆದಿದ್ದು, ಶೋಭಾ ಅವರ ವರ್ತನೆಗೆ ಮಂಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿವಾದವು ದೊಡ್ಡಮನೆಯ ವಾತಾವರಣದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

‘ನಾನೇನು ಅಲ್ಲಾಡಿಸಿದೆ ಹೇಳಿ’; ಮಂಜುಗೆ ನೇರ ಪ್ರಶ್ನೆ ಇಟ್ಟ ಶೋಭಾ ಶೆಟ್ಟಿ
ಶೋಭಾ-ಮಂಜು
ರಾಜೇಶ್ ದುಗ್ಗುಮನೆ
|

Updated on: Nov 20, 2024 | 7:19 AM

Share

ಶೋಭಾ ಶೆಟ್ಟಿ ಅವರು ಬಿಗ್ ಬಾಸ್​ನಲ್ಲಿ ಉತ್ತಮ ಆಟ ಆಡುತ್ತಿದ್ದಾರೆ. ಅವರ ಆಟಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಅವರು ದೊಡ್ಮನೆ ವಾತಾವರಣಕ್ಕೆ ಬೇಗ ಹೊಂದಿಕೊಂಡಿದ್ದಾರೆ. ಈ ಮಧ್ಯೆ ಮಂಜು ಹಾಗೂ ಶೋಭಾ ಮಧ್ಯೆ ಕಿರಿಕ್ ಆಗಿದೆ. ಮಂಜು ಆಡಿದ ಮಾತಿಗೆ ಶೋಭಾ ಸಖತ್ ಸಿಟ್ಟಾಗಿದ್ದಾರೆ. ಈ ಎಪಿಸೋಡ್ ಭರ್ಜರಿ ಚರ್ಚೆ ಹುಟ್ಟುಹಾಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಭವ್ಯಾ ಕ್ಯಾಪ್ಟನ್ ಆದರು. ಈ ವಾರದ ಟಾಸ್ಕ್​ಗೆ ಒಂದು ತಂಡದ ಕ್ಯಾಪ್ಟನ್ ಆಗಿ ಭವ್ಯಾ ನೇಮಕ ಗೊಂಡಿದ್ದಾರೆ. ಕ್ಯಾಪ್ಟನ್ ಆಗಿರುವುದಕ್ಕೆ ಅವರಿಗೆ ಸಿಕ್ಕ ವಿಶೇಷ ಅಧಿಕಾರ ಇದು. ಮತ್ತೊಂದು ತಂಡಕ್ಕೆ ಕ್ಯಾಪ್ಟನ್​ನ ಆಯ್ಕೆ ಮಾಡುವ ಪ್ರಕ್ರಿಯೆ ನಡೆದಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಶೋಭಾ ಹಾಗೂ ರಜತ್ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಅವಕಾಶವನ್ನು ಬಿಗ್ ಬಾಸ್ ನೀಡಿದರು. ಆಗ ಮಂಜು ಅವರು ಶೋಭಾಗೆ ನಾಯಕಿ ಆಗುವ ಅರ್ಹತೆ ಇಲ್ಲ ಎಂದರು.

‘ಬಿಗ್ ಬಾಸ್ ನೀಡಿದ ನಿಯಮಗಳಿಗೆ ಯಾರೂ ಕೈ ಹಾಕೋಕೆ ಹೋಗಲ್ಲ. ಆದರೆ, ಶೋಭಾ ಅವರು ಅದನ್ನು ಅಲ್ಲಾಡಿಸಿದರು ಎಂದು ನನಗೆ ವೈಯಕ್ತಿಕವಾಗಿ ಅನಿಸಿತು’ ಎಂದರು ಮಂಜು. ಇದಕ್ಕೆ ಶೋಭಾ ಉತ್ತರಿಸಿದ್ದಾರೆ. ‘ಅಲ್ಲಾಡಿಸಿದ್ದು ಅಂದ್ರೆ ಏನು? ನಾನು ಏನನ್ನು ಅಲ್ಲಾಡಿಸಿದೆ? ನನಗೆ ಈ ಬಗ್ಗೆ ಕ್ಲ್ಯಾರಿಟಿ ಬೇಕು’ ಎಂದು ಶೋಭಾ ಪಟ್ಟು ಹಿಡಿದು ಕುಳಿತರು. ಈ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮಧ್ಯೆ ಮಾತಿನ ಫೈಟ್ ಜೋರಾಯಿತು.

ಇದನ್ನೂ ಓದಿ: ‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್

‘ಸುಮ್ಮನೆ ಕುಳಿತುಕೊಳ್ಳಿ’ ಎಂದು ಮಂಜು ಹೇಳಿದರು. ‘ನಿಮ್ಮ ಮಾತು ಕೇಳೋಕೆ ಬಂದಿಲ್ಲ. ಬಿಗ್ ಬಾಸ್ ಹೇಳಿದ್ರೆ ಮಾತ್ರ ಕೂರೋದು. ಕ್ಲ್ಯಾರಿಫಿಕೇಷನ್ ಕೊಡ್ತೀನಿ’ ಎಂದರು ಶೋಭಾ. ಇವರ ಫೈಟ್​ ನೋಡಿ ಮನೆ ಮಂದಿ ತಲೆಕೆಡಿಸಿಕೊಂಡರು. ಶೋಭಾ ಅವರ ಏರುಧ್ವನಿಯನ್ನು ನೋಡಿ ಹನುಮಂತ ಹಾಗೂ ಧನರಾಜ್ ಅವರು ಶಾಕ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು