AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

‘ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ’ ಎಂದು ಶೋಭಾ ಶೆಟ್ಟಿ ಪೋಸ್ಟ್ ಆರಂಭಿಸಿದ್ದಾರೆ.

ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ
ಶೋಭಾ-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 03, 2024 | 9:25 AM

Share

ಶೋಭಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರು ಕೇವಲ ಎರಡು ವಾರಕ್ಕೆ ಹೊರಕ್ಕೆ ಬಂದಿದ್ದಾರೆ. ಇದಕ್ಕಾಗಿ ಅವರು ಅನಾರೋಗ್ಯದ ಕಾರಣ ನೀಡುತ್ತಿದ್ದಾರೆ. ಆಡಬೇಕು ಎಂದುಕೊಂಡರೂ ಆರೋಗ್ಯ ಸಹಕರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಅವರು ಸುದೀರ್ಘ ಪೋಸ್ಟ್ ಹಾಕಿದ್ದಾರೆ. ಸುದೀಪ್​ಗೆ ಧನ್ಯವಾದ ಹಾಕಿದ್ದಾರೆ.

‘ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ. ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನಾನು ಈ ನಿರ್ಧಾರ ಮಾಡಿರುವೆ’ ಎಂದು ಪತ್ರ ಆರಂಭಿಸಿದ್ದಾರೆ ಶೋಭಾ ಶೆಟ್ಟಿ.

‘ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ ಹಾಗು ನಿನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು’ ಎಂದಿದ್ದಾರೆ ಅವರು.

‘ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ’ ಎಂದು ಶೋಭಾ ಅವರು ಭರವಸೆ ನೀಡಿದ್ದಾರೆ. ಈ ಪೋಸ್ಟ್​ಗೆ ‘ಪ್ರಯಾಣವು ಅನಿರೀಕ್ಷಿತ ತಿರುವು ಪಡೆಯಿತು. ಆದರೆ ಎಲ್ಲದಕ್ಕೂ ಒಂದು ಕಾರಣವಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ

ಈ ಪೋಸ್ಟ್​ಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ನಿಮಗೋಸ್ಕರ ಕನ್ನಡ ಬಿಗ್ ಬಾಸ್ ನೋಡುತ್ತಾ ಇದ್ದೆ ಶೋಭಾ ಅವರೇ. ಆರೋಗ್ಯದ ಬಗ್ಗೆ ಎಚ್ಚರಿಕೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಆಟಕ್ಕಿಂತ ಆರೋಗ್ಯ ಮುಖ್ಯ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Tue, 3 December 24

Follow Us
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್