AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುಗೆ ಬಗ್ಗದ ಶೋಭಾ ಶೆಟ್ಟಿ ಹನುಮಂತನ ಒಂದೇ ಮಾತಿಗೆ ಸೈಲೆಂಟ್

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ಹನುಮಂತ, ತಮ್ಮ ಪ್ರಭಾವಶಾಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೋಭಾ ಮತ್ತು ಮಂಜು ನಡುವೆ ಜಗಳ ಆಯಿತು. ಆದರೆ, ಹನುಮಂತ ಅವರು ಅಭಿಪ್ರಾಯ ತಿಳಿಸಿದಾಗ ಶೋಭಾ ಸುಮ್ಮನಾದರು.

ಮಂಜುಗೆ ಬಗ್ಗದ ಶೋಭಾ ಶೆಟ್ಟಿ ಹನುಮಂತನ ಒಂದೇ ಮಾತಿಗೆ ಸೈಲೆಂಟ್
ಶೋಭಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Nov 20, 2024 | 11:50 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತನ ಆಟಕ್ಕೆ ಮರುಳಾಗದವರೇ ಇಲ್ಲ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಯಾರನ್ನಾದರೂ ಮಾತಿನಲ್ಲಿ ಸೋಲಿಸಬಲ್ಲ ಶಕ್ತಿ ಅವರಿಗೆ ಇದೆ. ಅವರು ಇಡುವ ಪಾಯಿಂಟ್ ಎಲ್ಲರಿಗೂ ಇಷ್ಟ ಆಗುತ್ತಿದೆ. ಮಂಜು ಜೊತೆ ಜೋರು ಜಗಳವಾಡಿದ ಶೋಭಾ, ಹನುಮಂತನ ಮಾತಿಗೆ ಸೈಲೆಂಟ್ ಆಗಿದ್ದಾರೆ. ಈ ವಿಚಾರವನ್ನು ಧನರಾಜ್ ಅವರು ಓಪನ್ ಆಗಿ ಮಾತನಾಡಿದ್ದಾರೆ.

ಇತ್ತೀಚೆಗೆ ರಜತ್ ಹಾಗೂ ಶೋಭಾ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದರು. ಸರಿಯಾಗಿ 50ನೇ ದಿನಕ್ಕೆ ಇವರನ್ನು ಕರೆದು ತರಲಾಗಿದೆ. ಶೋಭಾ ಶೆಟ್ಟಿ ಹಾಗೂ ರಜತ್ ಮಧ್ಯೆ ಯಾರು ನಾಯಕತ್ವದ ರೇಸ್​ನಲ್ಲಿ ಇರಬೇಕು ಎಂದು ಮನೆಯವರು ಆಯ್ಕೆ ಮಾಡಬೇಕಿತ್ತು. ಈ ಆಯ್ಕೆ ಮಾಡುವಾಗ ಮಂಜು ಅವರು ಶೋಭಾಗೆ ತಂಡದ ನಾಯಕತ್ವ ಪಡೆಯುವ ಅರ್ಹತೆ ಇಲ್ಲ ಎಂದರು. ಇದು ಶೋಭಾ ಅವರ ಸಿಟ್ಟಿಗೆ ಕಾರಣ ಆಯಿತು. ಅವರು ಮಂಜು ವಿರುದ್ಧ ತಿರುಗಿಬಿದ್ದರು.

ಮಂಜು ಹಾಗೂ ಶೋಭಾ ಮಧ್ಯೆ ದೊಡ್ಡ ಜಗಳವೇ ನಡೆದು ಹೋಗಿದೆ. ನಂತರ ಎಲ್ಲಾ ಸ್ಪರ್ಧಿಗಳು ಕಾರಣಗಳನ್ನು ನೀಡುತ್ತಾ ಹೋದರು. ಹನುಮಂತ ಕೂಡ ಶೋಭಾ ಅವರು ತಂಡದ ನಾಯಕತ್ವ ವಹಿಸಿಕೊಳ್ಳಲು ಅನರ್ಹರು ಎಂದರು. ‘ರಜತ್ ಅವರು ತಲೆ ಓಡಿಸುತ್ತಾರೆ. ಅವರು ಆಟದಲ್ಲಿ ಚೆನ್ನಾಗಿ ಇದ್ದಾರೆ. ನೀವು ಆಡ್ತೀರಾ ಎಂಬುದು ಗೊತ್ತಾಗಿಲ್ಲ’ ಎಂದರು ಹನುಮಂತ. ಇದಕ್ಕೆ ಶೋಭಾ ಯಾವುದೇ ತಕರಾರು ತೆಗೆದಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಶೋಭಾ ಶೆಟ್ಟಿ ಬಾಯ್​ಫ್ರೆಂಡ್ ವಿಚಾರ ರಿವೀಲ್ ಮಾಡಿದ ಶಿಶಿರ್

ಆ ಬಳಿಕ ಮಾತನಾಡಿದ ಧನರಾಜ್ ಅವರು, ‘ಶೋಭಾ ಅವರ ಬಾಯಿಯನ್ನೇ ಮುಚ್ಚಿಸಿದರಲ್ಲ. ಮಂಜು ಬಂದಾಗ ಬಾಯಿ ಮುಚ್ಚಿಲ್ಲ, ಗೌತಮಿ ಬಂದಾಗ ಸುಮ್ಮನೆ ಇರಲಿಲ್ಲ. ಆದರೆ, ನೀವು ಬಂದಾಗ ಮಾತ್ರ ಸೈಲೆಂಟ್ ಆದ್ರಲ್ಲ’ ಎಂದರು. ‘ಅವರ ಮಾತಿಗೆ ಇಡೀ ಮನೆ ಸೈಲೆಂಟ್ ಆಗಿದೆ’ ಎಂದು ಹನುಮಂತ ಅಭಿಪ್ರಾಯಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು