AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಕೊನೆ ಆಯ್ತು ಅಕ್ಕ-ತಂಗಿ ಬದುಕು; ಹಾರಿ ಹೋಯ್ತು ನಟಿಯರಿಬ್ಬರ ಜೀವ

ಅಮನ್​ದೀಪ್ ಅವರಿಗೆ ಹಲವು ದಿನಗಳ ಹಿಂದೆ ಜಾಂಡಿಸ್ ಆಗಿತ್ತು. ಅವರಿಗೆ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಇದಾದ ಬೆನ್ನಲ್ಲೇ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಸೋಹಿ ಕೂಡ ಕೊನೆಯುಸಿರು ಎಳೆದಿದ್ದಾರೆ. ಇವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಎರಡೂ ಸಾವುಗಳಿಂದ ಕುಟುಂಬ ಶಾಕ್​ಗೆ ಒಳಗಾಗಿದೆ.

ಒಂದೇ ದಿನ ಕೊನೆ ಆಯ್ತು ಅಕ್ಕ-ತಂಗಿ ಬದುಕು; ಹಾರಿ ಹೋಯ್ತು ನಟಿಯರಿಬ್ಬರ ಜೀವ
ಡಾಲಿ-ಅಮನ್​ದೀಪ್
ರಾಜೇಶ್ ದುಗ್ಗುಮನೆ
|

Updated on: Mar 08, 2024 | 10:29 AM

Share

ಹಿಂದಿ ಕಿರುತೆರೆ ಲೋಕಕ್ಕೆ ಶಾಕ್​ ಆಗುವಂಥ ಘಟನೆ ಒಂದು ನಡೆದಿದೆ. ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದ ಸಹೋದರಿಯರಾದ ಡಾಲಿ ಸೋಹಿ (Dolly Sohi) ಹಾಗೂ ಅಮನ್​ದೀಪ್​ ಸೋಹಿ ಇಬ್ಬರೂ ಕೆಲವೇ ಗಂಟೆಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಒಬ್ಬರು ಜಾಂಡಿಸ್​ಗೆ ಮೃತಪಟ್ಟರೆ ಮತ್ತೊಬ್ಬರು ಗರ್ಭಕಂಠ ಕ್ಯಾನ್ಸರ್​ನಿಂದ ಕೊನೆಯುಸಿರು ಎಳೆದಿದ್ದಾರೆ. ಈ ವಿಚಾರ ಶಾಕಿಂಗ್ ಎನಿಸಿದೆ.

ಅಮನ್​ದೀಪ್ ಅವರಿಗೆ ಹಲವು ದಿನಗಳ ಹಿಂದೆ ಜಾಂಡಿಸ್ ಆಗಿತ್ತು. ಅವರಿಗೆ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಇದಾದ ಬೆನ್ನಲ್ಲೇ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಸೋಹಿ ಕೂಡ ಕೊನೆಯುಸಿರು ಎಳೆದಿದ್ದಾರೆ. ಇವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಎರಡೂ ಸಾವುಗಳಿಂದ ಕುಟುಂಬ ಶಾಕ್​ಗೆ ಒಳಗಾಗಿದ್ದು, ಇದರಿಂದ ಚೇತರಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ದೇವರು ನೀಡಲಿ ಎಂದು ಫ್ಯಾನ್ಸ್ ಕೋರಿದ್ದಾರೆ.

‘ನಮ್ಮ ಪ್ರೀತಿಯ ಅಮನ್​ದೀಪ್ ಸೋಹಿ ಅವರು ಇಂದು ಸ್ವರ್ಗಸ್ಥರಾಗಿದ್ದಾರೆ. ನಾವು ಅವರನ್ನು ಕಳೆದುಕೊಂಡು ಶಾಕ್​ಗೆ ಒಳಗಾಗಿದ್ದೇವೆ. ಇಂದು (ಮಾರ್ಚ್ 8) ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಯಲಿದೆ’ ಎಂದು ಡಾಲಿ ಸೋಹಿ ಅವರ ಸಹೋದರ ಮನು ಗುರುವಾರ ಹೇಳಿದ್ದರು. ಇದಾದ ಬೆನ್ನಲ್ಲೇ ಡಾಲಿ ಸಾವನಪ್ಪಿದ್ದಾರೆ.

ಅಮನ್​ದೀಪ್ ಅವರು ಗುರುವಾರ (ಮಾರ್ಚ್ 7) ಮೃತಪಟ್ಟರು. ‘ಅಮನ್​ದೀಪ್ ಮೃತಪಟ್ಟಿದ್ದಾರೆ ಅನ್ನೋದು ನಿಜ. ಅವರಿಗೆ ಜಾಂಡಿಸ್ ಆಗಿತ್ತು. ವೈದ್ಯರ ಬಳಿ ಹೆಚ್ಚಿನ ಮಾಹಿತಿ ಕೇಳುವ ತಾಕತ್ತು ನಮಗೆ ಇಲ್ಲ’ ಎಂದಿದ್ದಾರೆ ಮನು. ಡಾಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿರಲಿಲ್ಲ. ಆದರೆ, ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದರು. 2023ರಲ್ಲಿ ಅವರಿಗೆ ಗರ್ಭಕಂಠ ಕ್ಯಾನ್ಸ್ ಇರೋದು ಪತ್ತೆ ಆಗಿತ್ತು.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿರೋ ಟಾಪ್​ ಐದು ಕನ್ನಡದ ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಡಾಲಿ ಸೋಹಿ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. 2000ರಲ್ಲಿ ಪ್ರಸಾರ ಆರಂಭಿಸಿದ ‘ಕಲಾಶ್’ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದರು. 2022ರಲ್ಲಿ ಪ್ರಸಾರ ಕಂಡ ‘ಸಿಂಧೂರ್​ ಕಿ ಕಿಮತ್’ ಅವರ ನಟನೆಯ ಕೊನೆಯ ಧಾರಾವಾಹಿ. ಅಮನ್​ದೀಪ್​ ಅವರು ಕೂಡ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ