AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿಯಲ್ಲಿ ದೊಡ್ಡ ತಿರುವು; ಮುಚ್ಚಿಟ್ಟ ಸತ್ಯ ಕೊನೆಗೂ ಗೊತ್ತಾಯ್ತು

ಸೀತಾ ರಾಮ ಧಾರಾವಾಹಿಯಲ್ಲಿ ಒಂದು ದೊಡ್ಡ ತಿರುವು ಉಂಟಾಗಿದೆ. ಸುಬ್ಬಿ ಮತ್ತು ಸಿಹಿ ಅವಳಿ ಸಹೋದರಿಯರು ಎಂಬುದು ಈಗ ಬಯಲಾಗಿದೆ. ಸುಬ್ಬಿಯನ್ನು ಬೆಳೆಸಿದ ತಾತ, ಸುಬ್ಬಿ ಸೀತಾಳ ಮಗಳು ಎಂದು ಬಹಿರಂಗಪಡಿಸಿದ್ದಾನೆ. ಈ ಸತ್ಯ ತಿಳಿದು ಸುಬ್ಬಿ ಖುಷಿಪಟ್ಟಿದ್ದಾಳೆ ಆದರೆ ತನ್ನ ತಾತ ಮಾಡಿದ ರೀತಿಗೆ ಬೇಸರಗೊಂಡಿದ್ದಾಳೆ.

‘ಸೀತಾ ರಾಮ’ ಧಾರಾವಾಹಿಯಲ್ಲಿ ದೊಡ್ಡ ತಿರುವು; ಮುಚ್ಚಿಟ್ಟ ಸತ್ಯ ಕೊನೆಗೂ ಗೊತ್ತಾಯ್ತು
ಸಿಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 18, 2025 | 10:17 AM

Share

‘ಸೀತಾ ರಾಮ’ ಧಾರಾವಾಹಿ (Seetha Raama Serial) ಹಲವು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿ ಒಂದು ಪ್ರಮುಖ ಘಟ್ಟ ತಲುಪಿದೆ. ‘ಸೀತಾ ರಾಮ’  ಧಾರಾವಾಹಿಯಲ್ಲಿ ಸಿಹಿ ಬದಲು ಸುಬ್ಬಿಯನ್ನು ಕರೆತಂದಿದ್ದು ಗೊತ್ತೇ ಇದೆ. ಸಿಹಿ ಸತ್ತು ಹೋಗಿದ್ದಾಳೆ. ಆ ಸ್ಥಾನವನ್ನು ಸುಬ್ಬಿ ತುಂಬಿದ್ದಾಳೆ. ಇಬ್ಬರೂ ಅವಳಿ ಜವಳಿ. ಆದರೆ, ಈ ವಿಚಾರ ಸುಬ್ಬಿಗೆ ಗೊತ್ತಿರಲೇ ಇಲ್ಲ. ಈಗ ಸುಬ್ಬಿಗೆ ಸತ್ಯ ಗೊತ್ತಾಗುವ ಸಮಯ. ಆಕೆಯನ್ನು ಈ ಮೊದಲು ಸಾಕಿದ್ದ ತಾತ ಎಲ್ಲವನ್ನೂ ಹೇಳಿದ್ದಾನೆ.

ಸುಬ್ಬಿ ಶ್ರೀರಾಮ್ ದೇಸಾಯಿ ಮನೆಯಲ್ಲಿ ಇದ್ದಾಳೆ. ಸೀತಾಳ ಮಗಳಾಗಿ ಅವಳು ನಾಟಕ ಮಾಡುತ್ತಿದ್ದಾಳೆ. ಆದರೆ, ಸೀತಾಳೆ ತನ್ನ ತಾಯಿ ಎಂಬುದು ಆಕೆಗೆ ಹೇಗೆ ಗೊತ್ತಾಗಲು ಸಾಧ್ಯ ನೀವೇ ಹೇಳಿ. ಆದರೆ, ಈಗ ಸತ್ಯ ಹೊರ ಬರುವ ಸಮಯ. ಸುಬ್ಬಿ ಎದುರು ಮುಚ್ಚಿಟ್ಟಿದ್ದ ಸತ್ಯ ಈಗ ಹೊರ ಬಿದ್ದಿದೆ. ಸುಬ್ಬಿ ಎದುರು ಆಕೆಯ ತಾತ ನಿಜವಾದ ವಿಚಾರ ಹೇಳಿದ್ದಾನೆ.

ಇದನ್ನೂ ಓದಿ
Image
ಪ್ರಿಯಾಂಕಾ ಪತಿ ನಿಕ್ ಜೋನಸ್​ನ ಭೇಟಿ ಮಾಡಿದ ಸಿತಾರಾ ಕುಟುಂಬ
Image
ಪೂಜಾ ಹೆಗ್ಡೆಗೆ ಕರ್ನಾಟಕದ ಕನೆಕ್ಷನ್ ಹೇಗೆ? ನಿಜಕ್ಕೂ ಅವರು ಇಲ್ಲಿಯವರಾ?
Image
ವೆಬ್ ಸೀರಿಸ್​ಗೆ ಗುಡ್ ಬೈ ಹೇಳಿದ ಸಮಂತಾ; ಹುಟ್ಟಿಕೊಂಡ ಅಸಮಾಧಾನ ಏನು?
Image
ಸ್ಪರ್ಧೆ ಬೇಡ ಎಂಬ ನಿರ್ಧಾರ; ಅಂದುಕೊಂಡಿದ್ದಕ್ಕಿಂತ ಮೊದಲೇ ಆಮಿರ್ ಸಿನಿಮಾ

‘ನಾನು ಯಾರಿಂದ ನಿನ್ನ ದೂರ ಮಾಡಿದ್ದೀನೋ ಅವರ ಹತ್ತಿರವೇ ಹೋಗಿ ಸೇರಿಕೊಂಡಿದ್ದೀಯಾ. ಸೀತಾಗೆ ಇಬ್ಬರು ಮಕ್ಕಳಿದ್ದರು. ಒಂದು ಮಗುನ ನಾನು ಕದ್ದುಕೊಂಡು ಬಂದೆ. ಅದೇ ನೀನು. ಮತ್ತೆ ಸೀತಾ ಬಳಿಯೇ ಹೋಗಿದ್ದೀಯಾ. ನೀನು ಸೀತಾ ಮನೆಗೆ ಹೋಗಿದ್ದು ನಂಗೆ ಗೊತ್ತಾದ ತಕ್ಷಣ ನನ್ನ ಬಂಡವಾಳ ಹೊರ ಬರುತ್ತದೆ ಎಂದುಕೊಂಡೆ. ಇದಕ್ಕಾಗಿ ನಿನ್ನ ಬೇರೆಯವರಿಗೆ ದತ್ತು ಕೊಡಬೇಕು ಎಂದುಕೊಂಡೆ. ನಿನ್ನ ಸಣ್ಣ ವಯಸ್ಸಲ್ಲೇ ಮಾರುವವನಿದ್ದೆ. ಆದರೆ, ನಿನ್ನ ಮುಖ ನೋಡಿ ಮಾರಲು ಮನಸ್ಸೇ ಬಂದಿಲ್ಲ’ ಎಂದು ಸುಬ್ಬಿಯನ್ನು ಸಾಕಿದ್ದ ತಾತ ಹೇಳಿದ.

View this post on Instagram

A post shared by Zee Kannada (@zeekannada)

‘ನಾನು-ಸಿಹಿ ಅಕ್ಕ ತಂಗಿನಾ’ ಎಂದು ಸುಬ್ಬಿ ಖುಷಿಪಟ್ಟಳು. ಅಲ್ಲದೆ, ತನ್ನ ತಾತ ಈ ರೀತಿ ಮಾಡಿದ್ದನ್ನಲ್ಲಾ ಎಂಬುದನ್ನು ತಿಳಿದು ಆಕೆ ಬೇಸರ ಮಾಡಿಕೊಂಡಳು. ‘ನನ್ನ ಮುಖವನ್ನು ಯಾವಾಗಲೂ ನೋಡೋಕೆ ಬರಬೇಡಿ’ ಎಂದು ಹೇಳಿ ಸುಬ್ಬಿ ಹೊರಟು ಹೋದಳು. ಆಕೆ ಸದ್ಯ ನಿಜವಾದ ವಿಚಾರ ತಿಳಿದು ಖುಷಿಯಾಗಿದ್ದಾಳೆ. ಇನ್ನುಮುಂದೆ ಆಕೆ ಸೀತಾಳನ್ನು ನೋಡುವ ರೀತಿ ಬದಲಾಗಬಹುದು. ಸಣ್ಣ ವಯಸ್ಸಿನಿಂದ ತಾಯಿಯನ್ನು ನೋಡಬೇಕು ಎಂಬ ಅವಳ ಆಸೆ ಈಡೇರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!