AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಶಿಶಿರ್ ಶಾಸ್ತ್ರಿ, ಸಂಜನಾ ಬುರ್ಲಿ ಹೊಸ ಧಾರಾವಾಹಿ ‘ಶ್ರೀ ಗಂಧದ ಗುಡಿ’

‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಹೊಸ ಧಾರಾವಾಹಿ ಪ್ರಸಾರಕ್ಕೆ ದಿನಾಂಕ ನಿಗದಿ ಆಗಿದೆ. ‘ಶ್ರೀ ಗಂಧದ ಗುಡಿ’ ಶೀರ್ಷಿಕೆಯ ಈ ಸೀರಿಯಲ್ ಅಕ್ಟೋಬರ್ 6ರಿಂದ ಶುರುವಾಗಲಿದೆ. ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಈ ಧಾರಾವಾಹಿಯಲ್ಲಿ ಒಂದು ಡಿಫರೆಂಟ್ ಕಥೆ ಇದೆ. ಮನೆಗೆ ಬಂದ ಸೊಸೆ ಮನಸ್ಥಿತಿ ಮತ್ತು ಮನೆಯ ಸ್ಥಿತಿ ಬದಲಾಯಿಸ್ತಾಳಾ ಎಂಬ ಕೌತುಕ ಇದೆ.

ಬಿಗ್ ಬಾಸ್ ಶಿಶಿರ್ ಶಾಸ್ತ್ರಿ, ಸಂಜನಾ ಬುರ್ಲಿ ಹೊಸ ಧಾರಾವಾಹಿ ‘ಶ್ರೀ ಗಂಧದ ಗುಡಿ’
Shree Gandhadagudi Serial Team
ಮದನ್​ ಕುಮಾರ್​
|

Updated on: Sep 29, 2025 | 6:24 PM

Share

ಗಂಧದ ಗುಡಿ ಎಂಬುದು ಸಿಕ್ಕಾಪಟ್ಟೆ ಜನಪ್ರಿಯ ಶೀರ್ಷಿಕೆ. ಈಗ ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ‘ಶ್ರೀ ಗಂಧದ ಗುಡಿ, ಪ್ರೀತಿಯ ಕುಡಿ’ ಎಂಬ ಹೊಸ ಸೀರಿಯಲ್ ಪ್ರಸಾರಕ್ಕೆ ಅಣಿಯಾಗಿದೆ. ಇಂಥ ಶೀರ್ಷಿಕೆ ಇಡಲು ಕಾರಣ ಕೂಡ ಇದೆ. ಕರುನಾಡ ತಾಯಿ ಎಲ್ಲರನ್ನೂ ತನ್ನ ಮಕ್ಕಳಂತೆ ನೋಡುತ್ತಾಳೆ. ಅವಳು ನೆಲೆಸಿದ ನಾಡು ಶ್ರೀ ಗಂಧದ ಗುಡಿ. ಇದೇ ಕಾನ್ಸೆಪ್ಟ್ ಇರುವ ಧಾರಾವಾಹಿಗೆ ‘ಶ್ರೀ ಗಂಧದ ಗುಡಿ’ (Shree Gandhadagudi) ಎಂದು ಟೈಟಲ್ ಇಡಲಾಗಿದೆ. ಅಕ್ಟೋಬರ್ 6ರಿಂದ ಪ್ರತಿ ರಾತ್ರಿ 8 ಗಂಟೆಗೆ ಈ ಧಾರಾವಾಹಿ ಪ್ರಸಾರ ಆಗಲಿದೆ. ಶಿಶಿರ್ ಶಾಸ್ತ್ರಿ (Shishir Shastry), ಸಂಜನಾ ಬುರ್ಲಿ ಮುಂತಾದವರು ನಟಿಸಿದ್ದಾರೆ.

‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಕಥೆ ಏನು ಎಂಬ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ. ‘ಶ್ರೀಗಂಧದ ಗುಡಿ’ ಎಂಬುದು ಹೆಣ್ಣು ದಿಕ್ಕಿಲ್ಲದ, ಗಂಡಸರೇ ಒಟ್ಟಾಗಿ ಬದುಕುತ್ತಿರುವ ಮನೆ. ಆ ಮನೆಗೆ ಬರುವ ಸೊಸೆ, ಮನೆ ಸ್ಥಿತಿ ಮತ್ತು ಮನಸ್ಥಿತಿಯನ್ನು ಬದಲಾಯಿಸ್ತಾಳಾ ಎಂಬ ಕತೆಯನ್ನು ಈ ಕೌಟುಂಬಿಕ ಧಾರಾವಾಹಿ ಹೇಳಲಿದೆ.

4 ಗಂಡುಮಕ್ಕಳ ತಂದೆ ನಟರಾಜ. ಆತ ಡಾ. ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿ. ಆ ಕಾರಣದಿಂದಲೇ ತನ್ನ ಮಕ್ಕಳಿಗೆ ಮುತ್ತುರಾಜ, ಕಂಠೀರವ, ಸತ್ಯ ಹರಿಶ್ಚಂದ್ರ, ಮಯೂರ ಎಂದು ಹೆಸರಿಟ್ಟಿದ್ದಾನೆ. ಈ 4 ಗಂಡು ಮಕ್ಕಳು ಒಬ್ಬೊಬ್ಬರು ಒಂದೊಂದು ದಿಕ್ಕು. ಒಬ್ಬೊಬ್ಬರದ್ದು ಒಂದೊಂದು ಹಾದಿ. ತಂದೆ ನಟರಾಜ ಕುಡುಕ. ಗೊತ್ತು ಗುರಿಯಿಲ್ಲದ ಬೇಜವಾಬ್ದಾರಿಯ ಮನುಷ್ಯ.

ನಟರಾಜ ಸಂಪಾದಿಸಿರುವುದು ಕೆಟ್ಟ ಹೆಸರು ಮಾತ್ರ. ಅವನಿಂದ ಮನೆಯ ಮಕ್ಕಳಿಗೂ ಕೆಟ್ಟ ಹೆಸರು. ಇಂಥ ಮನೆಗೆ ಯಾವ ಹೆಣ್ಣು ಕೂಡ ಬರಲು ಸಾಧ್ಯವಿಲ್ಲ. ಬಂದರೆ ಬದುಕೋದು ಅಸಾಧ್ಯ ಎಂದು ಊರಿನ ಜನರು ಮಾತಾಡಿಕೊಳ್ಳುತ್ತಾರೆ. ಈ ಮನೆಗೆ ಹುಡುಗಿಯೊಬ್ಬಳು ಬರುತ್ತಾಳೆ! ಬಂದ ಮೇಲೆ ಅದೇ ಮನೆಯಲ್ಲಿ ಯಾಕೆ ಉಳಿಯುತ್ತಾಳೆ? ಉಳಿದ ಮೇಲೆ ಆ ಮನೆಯನ್ನು ಹೇಗೆ ಸರಿ ಮಾಡುತ್ತಾಳೆ ಎಂಬುದು ಕೌತುಕ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಜೊತೆಯಾಗಿ ಸುತ್ತಾಡಿದ ಬಿಗ್ ಬಾಸ್ ಶಿಶಿರ್, ಐಶ್ವರ್ಯಾ

‘ಕಥಾ ಕ್ರಿಯೇಷನ್ಸ್’ ಬ್ಯಾನರ್ ಮೂಲಕ ಪರೀಕ್ಷಿತ್ ಎಂ.ಎಸ್, ಪ್ರದೀಪ್ ಆಜ್ರಿ ಅವರು ಈ ಧಾರಾವಾಹಿ ನಿರ್ಮಾಣ ಮಾಡಿದ್ದಾರೆ. ಈ ಧಾರಾವಾಹಿಗೆ ಪ್ರಕಾಶ್ ಮುಚ್ಚಳಗುಡ್ಡ ಅವರ ನಿರ್ದೇಶನ ಇರಲಿದೆ. ಶಿಶಿರ್ ಶಾಸ್ತ್ರಿ, ಸಂಜನಾ ಬುರ್ಲಿ, ಭವಿಷ್, ಕರಿಸುಬ್ಬು, ಅಶ್ವಥ್ ನೀನಾಸಂ, ಗಗನ್ ದೀಪ್, ಜಯಂತ್ ಮುಂತಾದವರು ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ