AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​, ಸಿನಿಮಾ ಬಳಿಕ ಶ್ರೀಮಹದೇವ್ ಇನ್ನೊಂದು ಪ್ರಯತ್ನ; ಹೊಸಬರ ಜತೆ ‘Saturday ನೈಟಲಿ’​ ಸಾಂಗ್​

ನಟ ಶ್ರೀಮಹದೇವ್​ ಅವರು ಇದೇ ಮೊದಲ ಬಾರಿಗೆ ಮ್ಯೂಸಿಕ್​ ವಿಡಿಯೋದಲ್ಲಿ ನಟಿಸಿದ್ದಾರೆ. ‘ಪ್ರಣವ್​ ಆಡಿಯೋ’ ಮೂಲಕ ಈ ಹಾಡು ರಿಲೀಸ್​ ಆಗಿದೆ.

ಸೀರಿಯಲ್​, ಸಿನಿಮಾ ಬಳಿಕ ಶ್ರೀಮಹದೇವ್ ಇನ್ನೊಂದು ಪ್ರಯತ್ನ; ಹೊಸಬರ ಜತೆ ‘Saturday ನೈಟಲಿ’​ ಸಾಂಗ್​
ಪೂಜಾ, ಶ್ರೀಮಹದೇವ್​. ‘Saturday ನೈಟಲಿ’ ಹಾಡು ಬಿಡುಗಡೆ ಕಾರ್ಯಕ್ರಮ
Follow us
TV9 Web
| Updated By: ಮದನ್​ ಕುಮಾರ್​

Updated on: May 09, 2022 | 4:10 PM

ನಟ ಶ್ರೀಮಹದೇವ್​ (Shri Mahadev) ಅವರು ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ‘ಚಿಟ್ಟೆ ಹೆಜ್ಜೆ’, ‘ಶ್ರೀರಸ್ತು ಶುಭಮಸ್ತು’, ‘ಇಷ್ಟ ದೇವತೆ’ ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾಗಿದೆ. ಹಾಗಂತ ಅವರು ಕೇವಲ ಕಿರುತೆರೆಗೆ ಮಾತ್ರ ಸೀಮಿತ ಆಗಿಲ್ಲ. ಸಿನಿಮಾರಂಗದಲ್ಲೂ ನಟಿಸಿ ಪ್ರೇಕ್ಷಕರ ಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಮೇಘನಾ ರಾಜ್​ ಜೊತೆ ಅವರು ನಟಿಸಿದ್ದ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಶ್ರೀಮಹದೇವ್​ ನಟನೆಯ ‘ಗಜಾನನ ಆ್ಯಂಡ್​ ಗ್ಯಾಂಗ್​’ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ನಡುವೆಯೇ ಅವರು ಇನ್ನೊಂದು ಹೊಸ ಪ್ರಯತ್ನ ಮಾಡಿದ್ದಾರೆ. ಹೊಸ ತಂಡದ ಜೊತೆ ಸೇರಿಕೊಂಡು ಒಂದು ಮ್ಯೂಸಿಕ್​ ವಿಡಿಯೋ (ಆಲ್ಬಂ ಸಾಂಗ್​) ಮಾಡಿದ್ದಾರೆ. ಇದಕ್ಕೆ ‘Saturday ನೈಟಲಿ’ (Saturday Nightly) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಹಾಡನ್ನು ಬಿಡುಗಡೆ ಮಾಡಲಾಯಿತು. ಇದೇ ಮೊದಲ ಬಾರಿಗೆ ಮ್ಯೂಸಿಕ್​ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶ್ರೀಮಹದೇವ್​ ಅವರು ಹೊಸ ಹುರುಪಿನೊಂದಿಗೆ ಕ್ಯಾಮೆರಾ ಎದುರಿಸಿದ್ದಾರೆ. ‘ಪ್ರಣವ್​ ಆಡಿಯೋ’ (Pranav Audio) ಮೂಲಕ ಈ ಹಾಡು ಬಿಡುಗಡೆ ಆಗಿದೆ.

​ಸಿನಿಮಾ ಗೀತೆಗಳು ಮಾತ್ರವಲ್ಲದೇ ಈ ರೀತಿ ಮ್ಯೂಸಿಕ್​ ವಿಡಿಯೋಗಳು ಕೂಡ ಜನರನ್ನು ಭರಪೂರ ರಂಜಿಸುತ್ತವೆ. ಆ ಉದ್ದೇಶದಿಂದ ಅನೇಕ ಆಡಿಯೋ ಕಂಪನಿಗಳು ಕಾರ್ಯಾರಂಭ ಮಾಡುತ್ತಿವೆ. ಆ ಸಾಲಿಗೆ ‘ಸಂತೃಪ್ತಿ ಕಂಬೈನ್ಸ್’ ಅವರ ‘ಪ್ರಣವ್ ಆಡಿಯೋ’ ಕಂಪನಿ ಸಹ ಸೇರ್ಪಡೆ ಆಗಿವೆ. ಈ ಆಡಿಯೋ ಕಂಪನಿಯ ಮೊದಲ ಹೆಜ್ಜೆಯಾಗಿ ‘Saturday ನೈಟಲಿ’ ಹಾಡು ಬಿಡುಗಡೆ ಆಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಹಾಗೂ ಸಮರ್ಥನಂ ಸಂಸ್ಥೆಯ ಮಹಂತೇಶ್ ಮುಖ್ಯ ಅತಿಥಿಗಳಾಗಿ ಬಂದು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಈ ಹಾಡಿನಲ್ಲಿ ಶ್ರೀ ಮಹದೇವ್​ ಅವರಿಗೆ ಜೋಡಿಯಾಗಿ ಹೊಸ ನಟಿ ಪೂಜಾ ಅವರು ಹೆಜ್ಜೆ ಹಾಕಿದ್ದಾರೆ. ಶ್ರೀ ಮಹದೇವ್​ ಅವರಿಂದ ಅನೇಕ ವಿಷಯಗಳನ್ನು ಕಲಿತಿರುವುದಾಗಿ ಪೂಜಾ ಹೇಳಿದ್ದಾರೆ. ಸಿದ್ದಾರ್ಥ್ ಹಾಡು ಬರೆದು ನಿರ್ಮಾಣ ಮಾಡಿದ್ದಾರೆ.  ಪ್ರೇಮ್ ಭರತ್ ಸಂಗೀತ, ನಾಗರಾಜ್ ಛಾಯಾಗ್ರಹಣ, ಶ್ರೇಯಸ್​ ಭೈರವ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದೆ. ಈ ಗೀತೆಯನ್ನು ಅನಿರುದ್ಧ್ ಶಾಸ್ತ್ರಿ ಹಾಡಿದ್ದಾರೆ.

ಇದನ್ನೂ ಓದಿ
Image
64ನೇ ಗ್ರ್ಯಾಮಿ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾರತದ ರಿಕ್ಕಿ ಕೇಜ್​ಗೆ ಪ್ರಶಸ್ತಿ; ಇಲ್ಲಿದೆ ವಿಜೇತರ ಪೂರ್ತಿ ಪಟ್ಟಿ
Image
ಮತ್ತೆ ಸದ್ದು ಮಾಡಿದ ಸಮಂತಾ; ಒಂದು ಗಂಟೆಯಲ್ಲಿ 20 ಲಕ್ಷ ವೀಕ್ಷಣೆ ಕಂಡ ವಿಡಿಯೋ ಸಾಂಗ್​
Image
ಚಂದನ್​ ಶೆಟ್ಟಿ ಹೊಸ ಸಾಂಗ್​ ‘ಲಕ ಲಕ ಲ್ಯಾಂಬೋರ್ಗಿನಿ’ ಹೇಗಿದೆ? ಒಂದೇ ದಿನಕ್ಕೆ ಮಿಲಿಯನ್​ ವೀಕ್ಷಣೆ
Image
ವಿಜಯ್​ ಪ್ರಕಾಶ್ ಕಂಠದಲ್ಲಿ ಮೂಡಿಬಂತು ‘ಆರಾಮ್ಸೆ’ ಮ್ಯೂಸಿಕ್​ ವಿಡಿಯೋ; ಏನಿದರ ವಿಶೇಷ?

‘Saturday ನೈಟಲಿ’ ಹಾಡಿಗೆ ನಿರ್ದೇಶನ ಮಾಡಿರುವ ರವಿಕುಮಾರ್​ ಸೇರಿದಂತೆ ಇದಕ್ಕಾಗಿ ಕೆಲಸ ಮಾಡಿರುವ ಬಹುತೇಕ ಎಲ್ಲರೂ ಹೊಸಬರು. ಮುಂದೆ ಸಿನಿಮಾ ನಿರ್ದೇಶನ ಮಾಡುವ ಗುರಿಯನ್ನು ರವಿಕುಮಾರ್​ ಇಟ್ಟುಕೊಂಡಿದ್ದಾರೆ. ಅದೇ ರೀತಿ ಸಿನಿಮಾ ನಿರ್ಮಾಪಕನಾಗುವ ಕನಸು ಸಿದ್ದಾರ್ಥ್​ ಅವರಿಗೆ ಇದೆ. ಹವ್ಯಾಸಕ್ಕಾಗಿ ಹಾಡುಗಳಿಗೆ ಸಾಹಿತ್ಯ ಬರೆಯುವ ಅವರು ಈಗ ಮೊದಲ ಹಾಡನ್ನು ಹೊರತಂದಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆ ಮತ್ತು ಚರ್ಚ್​ ರಸ್ತೆಯಲ್ಲಿ ಈ ಹಾಡಿನ ಶೂಟಿಂಗ್​ ಮಾಡಲಾಗಿದೆ.

‘ವಿರೂಪಾಕ್ಷ ಅವರು ಹೊಸ ಆಡಿಯೋ ಕಂಪನಿ ಮಾಡಿದ್ದಕ್ಕೆ ಅಭಿನಂದನೆಗಳು. ಇದರಿಂದ ತಮ್ಮಂಥ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಹಾಯ ಆಗುತ್ತದೆ. ನನ್ನ ‘ಇರುವುದೆಲ್ಲವ ಬಿಟ್ಟು’ ಚಿತ್ರದ ಹಾಡುಗಳನ್ನು ಕೂಡ ಉಮೇಶ್​ ಬಣಕಾರ್​ ಅವರು ಬಿಡುಗಡೆ ಮಾಡಿದ್ದರು. ಈಗ ಮತ್ತೆ ಅವರಿಂದ ನನ್ನ ಮೊದಲ ಆಲ್ಬಂ ಸಾಂಗ್​ ರಿಲೀಸ್​ ಆಗಿದೆ. ಈ ಹೊಸಬರ ತಂಡಕ್ಕೆ ತುಂಬ ಪ್ಯಾಷನ್​ ಇದೆ ಎಂಬುದು ಗೊತ್ತಾಯಿತು. ಹಾಗಾಗಿ ಈ ಟೀಮ್​ ಜೊತೆ ಕೆಲಸ ಮಾಡಲು ಒಪ್ಪಿಕೊಂಡೆ. ಯಾವುದೇ ಕೆಲಸ ಒಬ್ಬರಿಂದ ಸಾಧ್ಯವಾಗಲ್ಲ. ಇಡೀ ಟೀಮ್​ನಿಂದ ಇದೆಲ್ಲವೂ ಸಾಧ್ಯವಾಗಿದೆ. ಪ್ರೇಮ್​ ಭರತ್ ಅವರ ಸಂಗೀತ ನನಗೆ ಇಷ್ಟ ಆಯಿತು. ನಾನು ಒಪ್ಪಿಕೊಳ್ಳಲು ಇದು ಕೂಡ ಒಂದು ಮುಖ್ಯ ಕಾರಣ’ ಎಂದಿದ್ದಾರೆ ಶ್ರೀ ಮಹದೇವ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ