AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ಶ್ರುತಿ ಹಾಸನ್​ ಹೆಗಲೇರಲಿದೆ ಬಿಗ್​ ಬಾಸ್​ ನಿರೂಪಣೆ?

ಕಳೆದ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಮಲ್​ ಹಾಸನ್​ ಅವರು ಈ ಸೀಸನ್​ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿದ್ದರು. ಸಿನಿಮಾ ಕೆಲಸ, ಪ್ರವಾಸದ ಮಧ್ಯೆಯೂ ಅವರು ‘ಬಿಗ್​ ಬಾಸ್​’ ಶೂಟಿಂಗ್​ ತಪ್ಪಿಸುತ್ತಿರಲಿಲ್ಲ.

ಖ್ಯಾತ ನಟಿ ಶ್ರುತಿ ಹಾಸನ್​ ಹೆಗಲೇರಲಿದೆ ಬಿಗ್​ ಬಾಸ್​ ನಿರೂಪಣೆ?
ಶ್ರುತಿ ಹಾಸನ್
TV9 Web
| Edited By: |

Updated on: Nov 23, 2021 | 4:41 PM

Share

ನಟ ಕಮಲ್​ ಹಾಸನ್​ (Kamal Hassan) ಅವರಿಗೆ ಕೊವಿಡ್​ (Covid 19) ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರಿಗೆ ಅನಾರೋಗ್ಯ ಆಗಿರುವುದರಿಂದ ‘ವಿಕ್ರಮ್​’ ಸಿನಿಮಾ ಕೆಲಸಗಳು ವಿಳಂಬವಾಗಿದೆ. ಇದರ ಜತೆಗೆ ‘ತಮಿಳು ಬಿಗ್​ ಬಾಸ್​ 5’ ನಿರೂಪಣೆ ಯಾರು ಮಾಡಲಿದ್ದಾರೆ ಎನ್ನುವ ಪ್ರಶ್ನೆಯೂ ಮೂಡಿದೆ. ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ವಾಹಿನಿ ಅವರು ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಮಲ್​ ಹಾಸನ್​ ಅವರು ಈ ಸೀಸನ್​ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿದ್ದರು. ಸಿನಿಮಾ ಕೆಲಸ, ಪ್ರವಾಸದ ಮಧ್ಯೆಯೂ ಅವರು ‘ಬಿಗ್​ ಬಾಸ್​’ ಶೂಟಿಂಗ್​ ತಪ್ಪಿಸುತ್ತಿರಲಿಲ್ಲ. ಇದು ನಡೆದುಕೊಂಡು ಬಂದೇ ಇತ್ತು. ಆದರೆ, ಈ ಬಾರಿ ಕಮಲ್​ ಹಾಸನ್​ಗೆ ಕೊವಿಡ್​ ಕಾಣಿಸಿಕೊಂಡಿದೆ. ಇದರಿಂದ ಚೇತರಿಸಿಕೊಳ್ಳೋಕೆ ಎರಡು ವಾರವಾದರೂ ಬೇಕು. ಕೊರೊನಾದಿಂದ ಗುಣಮುಖರಾದರೂ ಏಕಾಏಕಿ ಸಿನಿಮಾ ಕೆಲಸಗಳಿಗೆ ತೆರಳೋಕೆ ಸಾಧ್ಯವಾಗುವುದಿಲ್ಲ. ಸ್ವಲ್ಪ ವಿಶ್ರಾಂತಿ ಪಡೆಯಬೇಕಾಗುತ್ತದೆ. ಹೀಗಾಗಿ, ಬಿಗ್​ ಬಾಸ್​ ನಿರೂಪಣೆಯಿಂದ ಕೆಲ ಕಾಲ ದೂರ ಉಳಿಯುವುದು ಅವರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕೆ ವಾಹಿನಿಯವರು ಪರ್ಯಾಯ ವ್ಯವಸ್ಥೆ ಹುಡುಕಿದ್ದಾರೆ.

ಕಮಲ್​ ಹಾಸನ್​ ಮಗಳು ಶ್ರುತಿ ಹಾಸನ್​ಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿದೆ ಎನ್ನಲಾಗುತ್ತಿದೆ. ಕಮಲ್​ ಹಾಸನ್​ ಬರುವವರೆಗೂ ಶ್ರುತಿ ಅವರೇ ಬಿಗ್​ ಬಾಸ್​ ನಿರೂಪಣೆ ನೋಡಿಕೊಳ್ಳುತ್ತಾರೆ ಎನ್ನಲಾಗುತ್ತಿದೆ. ಶ್ರುತಿ ಅವರು ಸ್ಟಾರ್​ ನಟನ ಮಗಳಾದರೂ ತಮ್ಮದೇ ಟ್ಯಾಲೆಂಟ್​ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಹೀಗಾಗಿ, ಶ್ರುತಿಗೆ ಮಣೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಾಹಿನಿ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ.

ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಕಮಲ್​ ಹಾಸನ್​ ಆರೋಗ್ಯ ಸ್ಥಿತಿ ಈಗ ಹೇಗಿದೆ? ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ ವೈದ್ಯರು

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್