AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ಶ್ರುತಿ ಹಾಸನ್​ ಹೆಗಲೇರಲಿದೆ ಬಿಗ್​ ಬಾಸ್​ ನಿರೂಪಣೆ?

ಕಳೆದ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಮಲ್​ ಹಾಸನ್​ ಅವರು ಈ ಸೀಸನ್​ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿದ್ದರು. ಸಿನಿಮಾ ಕೆಲಸ, ಪ್ರವಾಸದ ಮಧ್ಯೆಯೂ ಅವರು ‘ಬಿಗ್​ ಬಾಸ್​’ ಶೂಟಿಂಗ್​ ತಪ್ಪಿಸುತ್ತಿರಲಿಲ್ಲ.

ಖ್ಯಾತ ನಟಿ ಶ್ರುತಿ ಹಾಸನ್​ ಹೆಗಲೇರಲಿದೆ ಬಿಗ್​ ಬಾಸ್​ ನಿರೂಪಣೆ?
ಶ್ರುತಿ ಹಾಸನ್
TV9 Web
| Edited By: |

Updated on: Nov 23, 2021 | 4:41 PM

Share

ನಟ ಕಮಲ್​ ಹಾಸನ್​ (Kamal Hassan) ಅವರಿಗೆ ಕೊವಿಡ್​ (Covid 19) ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರಿಗೆ ಅನಾರೋಗ್ಯ ಆಗಿರುವುದರಿಂದ ‘ವಿಕ್ರಮ್​’ ಸಿನಿಮಾ ಕೆಲಸಗಳು ವಿಳಂಬವಾಗಿದೆ. ಇದರ ಜತೆಗೆ ‘ತಮಿಳು ಬಿಗ್​ ಬಾಸ್​ 5’ ನಿರೂಪಣೆ ಯಾರು ಮಾಡಲಿದ್ದಾರೆ ಎನ್ನುವ ಪ್ರಶ್ನೆಯೂ ಮೂಡಿದೆ. ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ವಾಹಿನಿ ಅವರು ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಮಲ್​ ಹಾಸನ್​ ಅವರು ಈ ಸೀಸನ್​ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿದ್ದರು. ಸಿನಿಮಾ ಕೆಲಸ, ಪ್ರವಾಸದ ಮಧ್ಯೆಯೂ ಅವರು ‘ಬಿಗ್​ ಬಾಸ್​’ ಶೂಟಿಂಗ್​ ತಪ್ಪಿಸುತ್ತಿರಲಿಲ್ಲ. ಇದು ನಡೆದುಕೊಂಡು ಬಂದೇ ಇತ್ತು. ಆದರೆ, ಈ ಬಾರಿ ಕಮಲ್​ ಹಾಸನ್​ಗೆ ಕೊವಿಡ್​ ಕಾಣಿಸಿಕೊಂಡಿದೆ. ಇದರಿಂದ ಚೇತರಿಸಿಕೊಳ್ಳೋಕೆ ಎರಡು ವಾರವಾದರೂ ಬೇಕು. ಕೊರೊನಾದಿಂದ ಗುಣಮುಖರಾದರೂ ಏಕಾಏಕಿ ಸಿನಿಮಾ ಕೆಲಸಗಳಿಗೆ ತೆರಳೋಕೆ ಸಾಧ್ಯವಾಗುವುದಿಲ್ಲ. ಸ್ವಲ್ಪ ವಿಶ್ರಾಂತಿ ಪಡೆಯಬೇಕಾಗುತ್ತದೆ. ಹೀಗಾಗಿ, ಬಿಗ್​ ಬಾಸ್​ ನಿರೂಪಣೆಯಿಂದ ಕೆಲ ಕಾಲ ದೂರ ಉಳಿಯುವುದು ಅವರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕೆ ವಾಹಿನಿಯವರು ಪರ್ಯಾಯ ವ್ಯವಸ್ಥೆ ಹುಡುಕಿದ್ದಾರೆ.

ಕಮಲ್​ ಹಾಸನ್​ ಮಗಳು ಶ್ರುತಿ ಹಾಸನ್​ಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿದೆ ಎನ್ನಲಾಗುತ್ತಿದೆ. ಕಮಲ್​ ಹಾಸನ್​ ಬರುವವರೆಗೂ ಶ್ರುತಿ ಅವರೇ ಬಿಗ್​ ಬಾಸ್​ ನಿರೂಪಣೆ ನೋಡಿಕೊಳ್ಳುತ್ತಾರೆ ಎನ್ನಲಾಗುತ್ತಿದೆ. ಶ್ರುತಿ ಅವರು ಸ್ಟಾರ್​ ನಟನ ಮಗಳಾದರೂ ತಮ್ಮದೇ ಟ್ಯಾಲೆಂಟ್​ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಹೀಗಾಗಿ, ಶ್ರುತಿಗೆ ಮಣೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಾಹಿನಿ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ.

ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಕಮಲ್​ ಹಾಸನ್​ ಆರೋಗ್ಯ ಸ್ಥಿತಿ ಈಗ ಹೇಗಿದೆ? ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ ವೈದ್ಯರು

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್