AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​
ನಟಿ ಶುಭಾ ಪೂಂಜಾ
TV9 Web
| Edited By: |

Updated on: Jul 26, 2021 | 5:06 PM

Share

ಕಳೆದ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ​  ಕಿಚ್ಚ ಸುದೀಪ್​ ಟ್ವಿಸ್ಟ್​ ಒಂದನ್ನು ನೀಡಿದ್ದರು. ‘ಈ ವಾರ ಯಾರೂ ಬಿಗ್​ ಬಾಸ್​ನಿಂದ ಹೊರ ಹೋಗುತ್ತಿಲ್ಲ. ಆದರೆ, ಶನಿವಾರದೊಳಗೆ ಒಬ್ಬರು ಬಿಗ್​ ಬಾಸ್​ ಮನೆಯಿಂದ ಔಟ್​ ಆಗುತ್ತಾರೆ’ ಎಂದಿದ್ದರು! ಇದಾದ ಮರುದಿನವೇ ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ. ಇದು ಉಳಿದ ಸ್ಪರ್ಧಿಗಳಿಗೆ ಆತಂಕ ಮೂಡಿಸಿದೆ.

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ. ಹೀಗೆ ಎಲಿಮಿನೇಟ್​ ಆಗುವ ಸ್ಪರ್ಧಿ ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಬಹುದು ಎಂದು ಸುದೀಪ್​ ಹೇಳಿದ್ದರು.

ಈ ವಿಚಾರದ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿತ್ತು. ‘ಕಳೆದ ಸೀಸನ್​ನಲ್ಲಿ ಹರೀಶ್​ ರಾಜ್​ ಅವರನ್ನು ಕ್ರೇನ್ ಮೂಲಕ ಬಿಗ್​ ಬಾಸ್​ ಮನೆಯಿಂದ ಹೊರಗೆ ಕರೆತರಲಾಗಿತ್ತು’ ಎಂದು ಚಕ್ರವರ್ತಿ ಹಳೆಯ ಸೀಸನ್​ ಘಟನೆಯನ್ನು ವಿವರಿಸಿದರು. ಈ ಬಾರಿಯೂ  ಅದೇರೀತಿ  ಆಗಬಹುದು ಎಂದು ಕೆಲವರು ಅನುಮಾನ ಹೊರ ಹಾಕಿದರು. ಇದಾದ ಮರುದಿನವೇ ಶುಭಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ.

ಹಾಗಂತ ಅವರು ಎಲಿಮಿನೇಷನ್​ ಆಗಿಲ್ಲ. ಬದಲಿಗೆ ಅಡಗಿ ಕೂತಿದ್ದಾರೆ. ಸುದೀಪ್​ ಕಡೆಯಿಂದ ವಿಶೇಷ ಆದೇಶ ಬಂದ ಬೆನ್ನಲ್ಲೇ ಶುಭಾ ಅವರು ‘ನಾನು ಮನೆಯಲ್ಲಿ ಅಡಗುತ್ತೇನೆ. ಈ ಮೂಲಕ ಸ್ಪರ್ಧಿಗಳಿಗೆ ಶಾಕ್​ ನೀಡುತ್ತೇನೆ ’ಎಂದು ಶಮಂತ್​ ಬಳಿ ಹೇಳಿಕೊಂಡಿದ್ದರು. ಈಗ ಹಾಗೆಯೇ ಮಾಡಿದ್ದಾರೆ. ಅವರು ಕಾಣೆ ಆಗಿದ್ದಾರೆ ಎಂದು ತಿಳಿದ ಮನೆ ಮಂದಿ ಶುಭಾಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಕೆಲವರು ಶುಭಾ ಅವರೇ ಎಲಿಮಿನೇಟ್​ ಆಗಿದ್ದಾರೆ ಎನ್ನುವ ಭಯದಲ್ಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!