AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​
ನಟಿ ಶುಭಾ ಪೂಂಜಾ
TV9 Web
| Edited By: |

Updated on: Jul 26, 2021 | 5:06 PM

Share

ಕಳೆದ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ​  ಕಿಚ್ಚ ಸುದೀಪ್​ ಟ್ವಿಸ್ಟ್​ ಒಂದನ್ನು ನೀಡಿದ್ದರು. ‘ಈ ವಾರ ಯಾರೂ ಬಿಗ್​ ಬಾಸ್​ನಿಂದ ಹೊರ ಹೋಗುತ್ತಿಲ್ಲ. ಆದರೆ, ಶನಿವಾರದೊಳಗೆ ಒಬ್ಬರು ಬಿಗ್​ ಬಾಸ್​ ಮನೆಯಿಂದ ಔಟ್​ ಆಗುತ್ತಾರೆ’ ಎಂದಿದ್ದರು! ಇದಾದ ಮರುದಿನವೇ ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ. ಇದು ಉಳಿದ ಸ್ಪರ್ಧಿಗಳಿಗೆ ಆತಂಕ ಮೂಡಿಸಿದೆ.

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ. ಹೀಗೆ ಎಲಿಮಿನೇಟ್​ ಆಗುವ ಸ್ಪರ್ಧಿ ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಬಹುದು ಎಂದು ಸುದೀಪ್​ ಹೇಳಿದ್ದರು.

ಈ ವಿಚಾರದ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿತ್ತು. ‘ಕಳೆದ ಸೀಸನ್​ನಲ್ಲಿ ಹರೀಶ್​ ರಾಜ್​ ಅವರನ್ನು ಕ್ರೇನ್ ಮೂಲಕ ಬಿಗ್​ ಬಾಸ್​ ಮನೆಯಿಂದ ಹೊರಗೆ ಕರೆತರಲಾಗಿತ್ತು’ ಎಂದು ಚಕ್ರವರ್ತಿ ಹಳೆಯ ಸೀಸನ್​ ಘಟನೆಯನ್ನು ವಿವರಿಸಿದರು. ಈ ಬಾರಿಯೂ  ಅದೇರೀತಿ  ಆಗಬಹುದು ಎಂದು ಕೆಲವರು ಅನುಮಾನ ಹೊರ ಹಾಕಿದರು. ಇದಾದ ಮರುದಿನವೇ ಶುಭಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ.

ಹಾಗಂತ ಅವರು ಎಲಿಮಿನೇಷನ್​ ಆಗಿಲ್ಲ. ಬದಲಿಗೆ ಅಡಗಿ ಕೂತಿದ್ದಾರೆ. ಸುದೀಪ್​ ಕಡೆಯಿಂದ ವಿಶೇಷ ಆದೇಶ ಬಂದ ಬೆನ್ನಲ್ಲೇ ಶುಭಾ ಅವರು ‘ನಾನು ಮನೆಯಲ್ಲಿ ಅಡಗುತ್ತೇನೆ. ಈ ಮೂಲಕ ಸ್ಪರ್ಧಿಗಳಿಗೆ ಶಾಕ್​ ನೀಡುತ್ತೇನೆ ’ಎಂದು ಶಮಂತ್​ ಬಳಿ ಹೇಳಿಕೊಂಡಿದ್ದರು. ಈಗ ಹಾಗೆಯೇ ಮಾಡಿದ್ದಾರೆ. ಅವರು ಕಾಣೆ ಆಗಿದ್ದಾರೆ ಎಂದು ತಿಳಿದ ಮನೆ ಮಂದಿ ಶುಭಾಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಕೆಲವರು ಶುಭಾ ಅವರೇ ಎಲಿಮಿನೇಟ್​ ಆಗಿದ್ದಾರೆ ಎನ್ನುವ ಭಯದಲ್ಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ