AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಂತೆ ವರ್ತಿಸಬೇಡಿ, ಅದು ಕ್ಯೂಟ್​ ಅಲ್ಲ, ಕಿರಿಕಿರಿ; ಶುಭಾಗೆ ಮನವಿ ಮಾಡಿದ ವೀಕ್ಷಕರು

ಶುಭಾ ಪೂಂಜಾ ಅವರು ಹೇಗೆ? ಅವರು ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎಂಬ ಬಗ್ಗೆ ವೀಕ್ಷಕರಿಗೆ ಗೊತ್ತಿರಲಿಲ್ಲ. ಅವರನ್ನು ಕೇವಲ ಸಿನಿಮಾದಲ್ಲಿ ನೋಡಿದವರಿಗೆ ಬಿಗ್​ ಬಾಸ್​ ಮನೆಯಲ್ಲಿ ಬೇರೆಯದೇ ಶುಭಾ ಪೂಂಜಾ ಪರಿಚಯವಾದರು.

ಮಕ್ಕಳಂತೆ ವರ್ತಿಸಬೇಡಿ, ಅದು ಕ್ಯೂಟ್​ ಅಲ್ಲ, ಕಿರಿಕಿರಿ; ಶುಭಾಗೆ ಮನವಿ ಮಾಡಿದ ವೀಕ್ಷಕರು
ಶುಭಾ ಫೂಂಜಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 30, 2021 | 2:34 PM

Share

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಸಣ್ಣ ಮಗುವಿನಂತೆ ವರ್ತಿಸುತ್ತಿದ್ದಾರೆ. ಸಣ್ಣ ಮಕ್ಕಳ  ಧ್ವನಿಯಲ್ಲಿ ಮಾತನಾಡುತ್ತಾರೆ. ಅವರ ನಡೆ ಕೂಡ ಹಾಗೆಯೇ ಇದೆ. ಇದು ಅನೇಕರಿಗೆ ಕಿರಿಕಿರಿ ಉಂಟು ಮಾಡಿದೆ. ಸಾಕಷ್ಟು ಟ್ರೋಲ್​ ಪೇಜ್​ಗಳು ಈ ಬಗ್ಗೆ ಮೀಮ್​ಗಳನ್ನು ಮಾಡಿ ಹರಿದುಬಿಡುತ್ತಿವೆ. ಅಷ್ಟೇ ಅಲ್ಲ, ಮಕ್ಕಳಂತೆ ಆಡಬೇಡಿ, ಅದು ಕ್ಯೂಟ್​ ಅಲ್ಲ ಕಿರಿಕಿರಿ ಎಂದು ಮನವಿ ಮಾಡಿದ್ದಾರೆ.

ಶುಭಾ ಪೂಂಜಾ ಅವರು ಹೇಗೆ? ಅವರು ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎಂಬ ಬಗ್ಗೆ ವೀಕ್ಷಕರಿಗೆ ಗೊತ್ತಿರಲಿಲ್ಲ. ಅವರನ್ನು ಕೇವಲ ಸಿನಿಮಾದಲ್ಲಿ ನೋಡಿದವರಿಗೆ ಬಿಗ್​ ಬಾಸ್​ ಮನೆಯಲ್ಲಿ ಬೇರೆಯದೇ ಶುಭಾ ಪೂಂಜಾ ಪರಿಚಯವಾದರು. ಶುಭಾ ಈ ರೀತಿಯೂ ನಡೆದುಕೊಳ್ಳುತ್ತಾರಾ ಎಂದು ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಇನ್ನು, ಶುಭಾ ಪೂಂಜಾ ಬಗ್ಗೆ ನಾನು ತಪ್ಪು ತಿಳಿದುಕೊಂಡಿದ್ದೆ ಎಂದು ರಘು ಗೌಡ ಕ್ಷಮೆ ಕೇಳಿದ್ದರು. ಈ ಎಲ್ಲಾ ಬೆಳವಣಿಗೆ ಮಧ್ಯೆ ಶುಭಾ ಮಕ್ಕಳಂತೆ ವರ್ತಿಸೋದು ಹೆಚ್ಚಾಗಿದೆ.

ಬಿಗ್​ ಬಾಸ್​ ಫಿನಾಲೆಗೆ 10 ದಿನ ಮಾತ್ರ ಬಾಕಿ ಉಳಿದಿದೆ. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ಯಾವುದೇ ಟಾಸ್ಕ್​ ನೀಡುತ್ತಿಲ್ಲ. ಲಕ್ಸುರಿ ಬಜೆಟ್​ ಪಡೆಯೋಕೆ ಒಂದೆರಡು ಟಾಸ್ಕ್​ ಬಿಟ್ಟು ಮತ್ತಿನ್ನೇನನ್ನೂ ಬಿಗ್​ ಬಾಸ್​ ನೀಡುತ್ತಿಲ್ಲ. ಹೀಗಾಗಿ, ಎಲ್ಲಾ ಸ್ಪರ್ಧಿಗಳಿಗೆ ಹೆಚ್ಚಿನ ಸಮಯ ಸಿಗುತ್ತಿದೆ. ಈ ಸಂದರ್ಭದಲ್ಲಿ ಶುಭಾ ಚಿಕ್ಕ ಮಕ್ಕಳಂತೆ ವರ್ತಿಸೋದು ಜಾಸ್ತಿ ಆಗಿದೆ.

ಮಂಜು ಪಾವಗಡಗೆ ಶುಭಾ ಹೆಚ್ಚೆಚ್ಚು ಹಿಂಸೆ ಕೊಡುತ್ತಿದ್ದಾರೆ. ಅರ್ಥವಾಗದ ಭಾಷೆಯಲ್ಲಿ ಅವರು ಮಾತನಾಡುತ್ತಿದ್ದಾರೆ. ಇದು ಒಂದು ವರ್ಗದ ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ, ‘ದಯವಿಟ್ಟು ಮಕ್ಕಳಂತೆ ಆಡಬೇಡಿ’ ಎಂದು ಕೆಲವರು ಕೋರಿದ್ದಾರೆ. ಇನ್ನೂ ಕೆಲವರು ಶುಭಾ ಅವರನ್ನು ಬೆಂಬಲಿಸಿದ್ದಾರೆ. ‘ಇಷ್ಟೊಂದು ದಿನ ನಾಟಕ ಮಾಡಿಕೊಂಡು ಇರೋಕೆ ಸಾಧ್ಯವಿಲ್ಲ. ಅವರು ಇರೋದೇ ಹಾಗೆ’ ಎಂದು ಕೆಲವರು ಅಭಿಪ್ರಾಯ ಹೊರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಇದನ್ನೂ ಓದಿ: ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ