AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​
ಶುಭಾ ಪೂಂಜಾ
TV9 Web
| Edited By: |

Updated on: Jul 24, 2021 | 7:25 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಸಮೀಪವಾಗಿದೆ. ಹೀಗಾಗಿ, ಮನೆಯಲ್ಲಿ ಕಠಿಣ ಸ್ಪರ್ಧೆ ಏರ್ಪಡುತ್ತಿದೆ. ಫಿನಾಲೆಗೆ ಬರಬೇಕು ಎನ್ನುವ ಕಾರಣಕ್ಕೆ ಸ್ಪರ್ಧಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದರ ಜತೆಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸಾಕಷ್ಟು ಅಚ್ಚರಿಗಳು ಎದುರಾಗುತ್ತಿವೆ. ಈಗ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕಿಂಗ್​ ಸುದ್ದಿಯೊಂದು ಸಿಕ್ಕಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಆದರೆ, ಫಿನಾಲೆ ಸಮೀಪವಾಗುತ್ತಿದ್ದಂತೆಯೇ ಇದು ಸಹಾಯಕ್ಕೆ ಬರುತ್ತಿಲ್ಲ. ಅವರು ಟಾಸ್ಕ್​ನಲ್ಲಿ ಡಲ್​ ಆಗಿರುವುದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ‘ನಾನಾ ನೀನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಅಡಿಯಲ್ಲಿ ಸಾಕಷ್ಟು ಟಾಸ್ಕ್​ಗಳನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಐದು ಸದಸ್ಯರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದರು. ದಿವ್ಯಾ ಉರುಡುಗ ಕ್ಯಾಪ್ಟನ್​ ಕೂಡ ಆದರು.

ಆದರೆ, ಶುಭಾ ಒಟ್ಟಾರೆ ಟಾಸ್ಕ್​ನಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಈ ವಿಚಾರದಲ್ಲಿ ಶುಭಾಗೆ ಶಾಕ್​ ನೀಡಿದ್ದಾರೆ ಬಿಗ್​ ಬಾಸ್. ‘ಶುಭಾ ನೀವು ಕಡಿಮೆ ಅಂಕ ಪಡೆದು ಕೊನೆಯ ಸ್ಥಾನದಲ್ಲಿದ್ದೀರಿ. ಹೀಗಾಗಿ, ಈ ವಾರ ಎಲಿಮಿನೇಷ್​ನಿಂದ ಸೇವ್​ ಆದರೂ ನೀವು ಕಡಿಮೆ ಅಂಕ ಹೊಂದಿದ್ದರಿಂದ ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್  ಆಗುತ್ತೀರಿ’ ಎಂದರು ಬಿಗ್​ ಬಾಸ್​.

ಕಳೆದ ವಾರ ದಿವ್ಯಾ ಉರುಡುಗ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?