AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​
ಶುಭಾ ಪೂಂಜಾ
TV9 Web
| Edited By: |

Updated on: Jul 24, 2021 | 7:25 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಸಮೀಪವಾಗಿದೆ. ಹೀಗಾಗಿ, ಮನೆಯಲ್ಲಿ ಕಠಿಣ ಸ್ಪರ್ಧೆ ಏರ್ಪಡುತ್ತಿದೆ. ಫಿನಾಲೆಗೆ ಬರಬೇಕು ಎನ್ನುವ ಕಾರಣಕ್ಕೆ ಸ್ಪರ್ಧಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದರ ಜತೆಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸಾಕಷ್ಟು ಅಚ್ಚರಿಗಳು ಎದುರಾಗುತ್ತಿವೆ. ಈಗ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕಿಂಗ್​ ಸುದ್ದಿಯೊಂದು ಸಿಕ್ಕಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಆದರೆ, ಫಿನಾಲೆ ಸಮೀಪವಾಗುತ್ತಿದ್ದಂತೆಯೇ ಇದು ಸಹಾಯಕ್ಕೆ ಬರುತ್ತಿಲ್ಲ. ಅವರು ಟಾಸ್ಕ್​ನಲ್ಲಿ ಡಲ್​ ಆಗಿರುವುದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ‘ನಾನಾ ನೀನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಅಡಿಯಲ್ಲಿ ಸಾಕಷ್ಟು ಟಾಸ್ಕ್​ಗಳನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಐದು ಸದಸ್ಯರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದರು. ದಿವ್ಯಾ ಉರುಡುಗ ಕ್ಯಾಪ್ಟನ್​ ಕೂಡ ಆದರು.

ಆದರೆ, ಶುಭಾ ಒಟ್ಟಾರೆ ಟಾಸ್ಕ್​ನಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಈ ವಿಚಾರದಲ್ಲಿ ಶುಭಾಗೆ ಶಾಕ್​ ನೀಡಿದ್ದಾರೆ ಬಿಗ್​ ಬಾಸ್. ‘ಶುಭಾ ನೀವು ಕಡಿಮೆ ಅಂಕ ಪಡೆದು ಕೊನೆಯ ಸ್ಥಾನದಲ್ಲಿದ್ದೀರಿ. ಹೀಗಾಗಿ, ಈ ವಾರ ಎಲಿಮಿನೇಷ್​ನಿಂದ ಸೇವ್​ ಆದರೂ ನೀವು ಕಡಿಮೆ ಅಂಕ ಹೊಂದಿದ್ದರಿಂದ ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್  ಆಗುತ್ತೀರಿ’ ಎಂದರು ಬಿಗ್​ ಬಾಸ್​.

ಕಳೆದ ವಾರ ದಿವ್ಯಾ ಉರುಡುಗ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ