AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ಹೀರೋ ಸಿದ್ಧಾಂತ್​ ಸೂರ್ಯವಂಶಿ

Siddhaanth Vir Surryavanshi Death: ಸಿದ್ಧಾಂತ್ ವೀರ್ ಸುರ್ಯವಂಶಿ ಅವರು ಅಕಾಲಿಕ ಮರಣ ಹೊಂದಿದ್ದಾರೆ. ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದರು. ನಂತರ ಅವರು ಮೃತಪಟ್ಟರು ಎಂದು ವರದಿ ಆಗಿದೆ.

ಜಿಮ್​ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ಹೀರೋ ಸಿದ್ಧಾಂತ್​ ಸೂರ್ಯವಂಶಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 11, 2022 | 5:24 PM

ಜಿಮ್ (Gym)ಮಾಡುವಾಗ ಕುಸಿದು ಬಿದ್ದು ಮೃತಪಟ್ಟ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿದೆ. ಚಿತ್ರರಂಗದ ಅನೇಕರು ಇದೇ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈಗ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ (Siddhaanth Vir Surryavanshi) ಅವರು ಅಕಾಲಿಕ ಮರಣ ಹೊಂದಿದ್ದಾರೆ. ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದರು. ನಂತರ ಅವರು ಮೃತಪಟ್ಟರು ಎಂದು ವರದಿ ಆಗಿದೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಕಿರುತೆರೆ ಹಾಗೂ ಹಿರಿತೆರೆಯ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರರಂಗದ ಅನೇಕರು ಅಕಾಲಿಕ ಮರಣ ಹೊಂದುತ್ತಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಸಿದ್ಧಾಂತ್ ಅವರು ಮುಂಬೈನ ಜಿಮ್ ಒಂದರಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಅವರ ನಿಧನದ ವಿಚಾರವನ್ನು ಆಪ್ತರು ಹಾಗೂ ಕುಟುಂಬದವರು ಖಚಿತಪಡಿಸಿದ್ದಾರೆ. ಸಿದ್ಧಾಂತ್ ಸಾವಿನಿಂದ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.

ಸಿದ್ಧಾಂತ್ ಅವರು ಪತ್ನಿ ಅಲೇಸಿಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಲೇಸಿಯಾ ಅವರು ಮಾಡೆಲಿಂಗ್ ಜಗತ್ತಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಪತಿಯ ಅಕಾಲಿಕ ಮರಣ ಸುದ್ದಿ ಅವರಿಗೆ ಶಾಕ್ ನೀಡಿದೆ. ಅಲೇಸಿಯಾ ರಷ್ಯಾ ಮೂಲದವರು. ಅವರಿಗೆ ಇದು ಎರಡನೇ ಮದುವೆ ಆಗಿತ್ತು. 2017ರಲ್ಲಿ ಅಲೇಸಿಯಾ ಹಾಗೂ ಸಿದ್ಧಾಂತ್ ಮದುವೆ ಆದರು. 2000-2015ರವರೆಗೆ ಇರಾ ಎಂಬುವವರ ಜತೆ ಸಿದ್ಧಾಂತ್ ಸಂಸಾರ ನಡೆಸಿದ್ದರು.

2001ರಿಂದ ಸಿದ್ಧಾಂತ್ ಅವರು ಕಿರುತೆರೆ ಲೋಕದ ನಂಟು ಹೊಂದಿದ್ದಾರೆ. ‘ಕಸೌಟಿ ಜಿಂದಗಿ ಕೇ’. ‘ಮಮತಾ’, ಸೇರಿ ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಅದ್ದೂರಿಯಾಗಿ ನಡೆಯಿತು ನಾಮಕರಣ ಶಾಸ್ತ್ರ; ಅವಳಿ ಮಕ್ಕಳ ಹೆಸರು ರಿವೀಲ್ ಮಾಡಿದ ನಟಿ ಅಮೂಲ್ಯ

ಸಿದ್ಧಾಂತ್ ಅವರನ್ನು ಕಳೆದುಕೊಂಡ ಕಿರುತೆರೆ ಲೋಕ ಬಡವಾಗಿದೆ. ಕಿರುತೆರೆ ಲೋಕದ ಸಾಕಷ್ಟು ಮಂದಿ ಸಿದ್ಧಾಂತ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ‘ಬಹುಬೇಗನೆ ನೀವು ನಮ್ಮನ್ನು ಬಿಟ್ಟು ಹೋದಿರಿ’ ಎಂದು ಅನೇಕರು ಬರೆದುಕೊಂಡಿದ್ದಾರೆ.

Published On - 3:37 pm, Fri, 11 November 22

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ