ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 04, 2021 | 3:30 PM

ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಬಿಗ್​ ಬಾಸ್​ ಸೀಸನ್​ 13ರಲ್ಲಿ ಪರಸ್ಪರ ಪರಿಚಯವಾದರು. ಇಬ್ಬರ ನಡುವೆ ಬಿಗ್​ ಬಾಸ್​ ಮನೆಯಲ್ಲೇ ಆಪ್ತತೆ ಬೆಳೆಯಿತು. ಇವರ ನಡುವೆ ಪ್ರೀತಿ ಇದೆ ಎಂದು ಹೇಳಲಾಗುತ್ತಿದೆಯಾದರೂ ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಸಿದ್ದಾರ್ಥ್​ ಮೃತಪಟ್ಟ ನಂತರದಲ್ಲಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ವಿಶೇಷ ಎಂದರೆ, ಸಿದ್ದಾರ್ಥ್​ ಮತ್ತು ಶೆಹನಾಜ್​ ಡಿಸೆಂಬರ್​ನಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದರು ಎನ್ನಲಾಗಿದೆ. ಆದರೆ, ಇದಕ್ಕೂ ಕೆಲ ತಿಂಗಳು ಮೊದಲೇ ದುರಂತ ನಡೆದಿದೆ.

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಈ ಜೋಡಿ ನೋಡಿ ಅಭಿಮಾನಿಗಳಿಗೂ ಸಾಕಷ್ಟು ಖುಷಿಯಾಗಿತ್ತು. ಇವರಿಬ್ಬರೂ ಮದುವೆ ಯಾವಾಗ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಆದರೆ, ಆ ದಿನ ಬರಲೇ ಇಲ್ಲ. ಮದುವೆಗೂ ಮೊದಲೇ ಸಿದ್ದಾರ್ಥ್​ ಮೃತಪಟ್ಟಿರುವುದು ದುರಂತ.

ಶೀಘ್ರವೇ ಎಂಗೇಜ್​ಮೆಂಟ್ ಮಾಡಿಕೊಂಡು ವರ್ಷಾಂತ್ಯಕ್ಕೆ ಮದುವೆ ಆಗುವ ಆಲೋಚನೆ ಇವರದ್ದಾಗಿತ್ತು. ಕೊವಿಡ್​ ಈಗ ಕಡಿಮೆ ಆಗಿದೆ. ಹೀಗಾಗಿ, ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ಇವರ ಆಲೋಚನೆ ಆಗಿತ್ತು. ಈ ಕಾರಣಕ್ಕೆ ಮುಂಬೈನ ಸ್ಟಾರ್​ ಹೋಟೆಲ್​ ಬುಕ್​ ಮಾಡುವ ಪ್ರಕ್ರಿಯೆಯನ್ನು ಕೂಡ ಕುಟುಂಬದವರು ಆರಂಭಿಸಿದ್ದರು. ಈ ವಿಚಾರ ಕುಟುಂಬದ ಕೆಲ ಸದಸ್ಯರಿಗೆ ಮಾತ್ರ ಗೊತ್ತಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವರ್ಷಾಂತ್ಯಕ್ಕೆ ಇವರ ಮದುವೆ ನೆರವೇರುತ್ತಿತ್ತು. ಆದರೆ, ಸಿದ್ದಾರ್ಥ್​ ವಿಧಿಯ ಕೈವಾಡಕ್ಕೆ ಸಿಲುಕಿದರು.

ಶೆಹನಾಜ್​ ಹಾಗೂ ಸಿದ್ದಾರ್ಥ್​ ಪರಸ್ಪರ ಪ್ರೀತಿಸುತ್ತಿದ್ದರು. ಸಿದ್ದಾರ್ಥ್​ ಅವರನ್ನು ಕಳೆದುಕೊಂಡಿದ್ದು ಶೆಹನಾಜ್​ಗೆ ಸಾಕಷ್ಟು ಆಘಾತ ನೀಡಿದೆ. ಈ ಶಾಕ್​ನಿಂದ ಹೊರ ಬರೋಕೆ ಅವರಿಗೆ ಅನೇಕ ತಿಂಗಳುಗಳೇ ಬೇಕಾಗಬಹುದು. ಇನ್ನು, ಶುಕ್ರವಾರ (ಸೆಪ್ಟೆಂಬರ್​ 4) ಸಿದ್ದಾರ್ಥ್​ ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಶೆಹನಾಜ್​ ಕಾಣಿಸಿಕೊಂಡಿದ್ದರು. ತುಂಬಾನೇ ಅತ್ತಿದ್ದರಿಂದ ಅವರ ಕಣ್ಣುಗಳು ಊದಿಕೊಂಡಿದ್ದವು.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ