AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 04, 2021 | 3:30 PM

Share

ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಬಿಗ್​ ಬಾಸ್​ ಸೀಸನ್​ 13ರಲ್ಲಿ ಪರಸ್ಪರ ಪರಿಚಯವಾದರು. ಇಬ್ಬರ ನಡುವೆ ಬಿಗ್​ ಬಾಸ್​ ಮನೆಯಲ್ಲೇ ಆಪ್ತತೆ ಬೆಳೆಯಿತು. ಇವರ ನಡುವೆ ಪ್ರೀತಿ ಇದೆ ಎಂದು ಹೇಳಲಾಗುತ್ತಿದೆಯಾದರೂ ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಸಿದ್ದಾರ್ಥ್​ ಮೃತಪಟ್ಟ ನಂತರದಲ್ಲಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ವಿಶೇಷ ಎಂದರೆ, ಸಿದ್ದಾರ್ಥ್​ ಮತ್ತು ಶೆಹನಾಜ್​ ಡಿಸೆಂಬರ್​ನಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದರು ಎನ್ನಲಾಗಿದೆ. ಆದರೆ, ಇದಕ್ಕೂ ಕೆಲ ತಿಂಗಳು ಮೊದಲೇ ದುರಂತ ನಡೆದಿದೆ.

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಈ ಜೋಡಿ ನೋಡಿ ಅಭಿಮಾನಿಗಳಿಗೂ ಸಾಕಷ್ಟು ಖುಷಿಯಾಗಿತ್ತು. ಇವರಿಬ್ಬರೂ ಮದುವೆ ಯಾವಾಗ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಆದರೆ, ಆ ದಿನ ಬರಲೇ ಇಲ್ಲ. ಮದುವೆಗೂ ಮೊದಲೇ ಸಿದ್ದಾರ್ಥ್​ ಮೃತಪಟ್ಟಿರುವುದು ದುರಂತ.

ಶೀಘ್ರವೇ ಎಂಗೇಜ್​ಮೆಂಟ್ ಮಾಡಿಕೊಂಡು ವರ್ಷಾಂತ್ಯಕ್ಕೆ ಮದುವೆ ಆಗುವ ಆಲೋಚನೆ ಇವರದ್ದಾಗಿತ್ತು. ಕೊವಿಡ್​ ಈಗ ಕಡಿಮೆ ಆಗಿದೆ. ಹೀಗಾಗಿ, ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ಇವರ ಆಲೋಚನೆ ಆಗಿತ್ತು. ಈ ಕಾರಣಕ್ಕೆ ಮುಂಬೈನ ಸ್ಟಾರ್​ ಹೋಟೆಲ್​ ಬುಕ್​ ಮಾಡುವ ಪ್ರಕ್ರಿಯೆಯನ್ನು ಕೂಡ ಕುಟುಂಬದವರು ಆರಂಭಿಸಿದ್ದರು. ಈ ವಿಚಾರ ಕುಟುಂಬದ ಕೆಲ ಸದಸ್ಯರಿಗೆ ಮಾತ್ರ ಗೊತ್ತಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವರ್ಷಾಂತ್ಯಕ್ಕೆ ಇವರ ಮದುವೆ ನೆರವೇರುತ್ತಿತ್ತು. ಆದರೆ, ಸಿದ್ದಾರ್ಥ್​ ವಿಧಿಯ ಕೈವಾಡಕ್ಕೆ ಸಿಲುಕಿದರು.

ಶೆಹನಾಜ್​ ಹಾಗೂ ಸಿದ್ದಾರ್ಥ್​ ಪರಸ್ಪರ ಪ್ರೀತಿಸುತ್ತಿದ್ದರು. ಸಿದ್ದಾರ್ಥ್​ ಅವರನ್ನು ಕಳೆದುಕೊಂಡಿದ್ದು ಶೆಹನಾಜ್​ಗೆ ಸಾಕಷ್ಟು ಆಘಾತ ನೀಡಿದೆ. ಈ ಶಾಕ್​ನಿಂದ ಹೊರ ಬರೋಕೆ ಅವರಿಗೆ ಅನೇಕ ತಿಂಗಳುಗಳೇ ಬೇಕಾಗಬಹುದು. ಇನ್ನು, ಶುಕ್ರವಾರ (ಸೆಪ್ಟೆಂಬರ್​ 4) ಸಿದ್ದಾರ್ಥ್​ ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಶೆಹನಾಜ್​ ಕಾಣಿಸಿಕೊಂಡಿದ್ದರು. ತುಂಬಾನೇ ಅತ್ತಿದ್ದರಿಂದ ಅವರ ಕಣ್ಣುಗಳು ಊದಿಕೊಂಡಿದ್ದವು.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ