AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
TV9 Web
| Edited By: |

Updated on: Sep 04, 2021 | 3:30 PM

Share

ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಬಿಗ್​ ಬಾಸ್​ ಸೀಸನ್​ 13ರಲ್ಲಿ ಪರಸ್ಪರ ಪರಿಚಯವಾದರು. ಇಬ್ಬರ ನಡುವೆ ಬಿಗ್​ ಬಾಸ್​ ಮನೆಯಲ್ಲೇ ಆಪ್ತತೆ ಬೆಳೆಯಿತು. ಇವರ ನಡುವೆ ಪ್ರೀತಿ ಇದೆ ಎಂದು ಹೇಳಲಾಗುತ್ತಿದೆಯಾದರೂ ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಸಿದ್ದಾರ್ಥ್​ ಮೃತಪಟ್ಟ ನಂತರದಲ್ಲಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ವಿಶೇಷ ಎಂದರೆ, ಸಿದ್ದಾರ್ಥ್​ ಮತ್ತು ಶೆಹನಾಜ್​ ಡಿಸೆಂಬರ್​ನಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದರು ಎನ್ನಲಾಗಿದೆ. ಆದರೆ, ಇದಕ್ಕೂ ಕೆಲ ತಿಂಗಳು ಮೊದಲೇ ದುರಂತ ನಡೆದಿದೆ.

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಈ ಜೋಡಿ ನೋಡಿ ಅಭಿಮಾನಿಗಳಿಗೂ ಸಾಕಷ್ಟು ಖುಷಿಯಾಗಿತ್ತು. ಇವರಿಬ್ಬರೂ ಮದುವೆ ಯಾವಾಗ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಆದರೆ, ಆ ದಿನ ಬರಲೇ ಇಲ್ಲ. ಮದುವೆಗೂ ಮೊದಲೇ ಸಿದ್ದಾರ್ಥ್​ ಮೃತಪಟ್ಟಿರುವುದು ದುರಂತ.

ಶೀಘ್ರವೇ ಎಂಗೇಜ್​ಮೆಂಟ್ ಮಾಡಿಕೊಂಡು ವರ್ಷಾಂತ್ಯಕ್ಕೆ ಮದುವೆ ಆಗುವ ಆಲೋಚನೆ ಇವರದ್ದಾಗಿತ್ತು. ಕೊವಿಡ್​ ಈಗ ಕಡಿಮೆ ಆಗಿದೆ. ಹೀಗಾಗಿ, ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ಇವರ ಆಲೋಚನೆ ಆಗಿತ್ತು. ಈ ಕಾರಣಕ್ಕೆ ಮುಂಬೈನ ಸ್ಟಾರ್​ ಹೋಟೆಲ್​ ಬುಕ್​ ಮಾಡುವ ಪ್ರಕ್ರಿಯೆಯನ್ನು ಕೂಡ ಕುಟುಂಬದವರು ಆರಂಭಿಸಿದ್ದರು. ಈ ವಿಚಾರ ಕುಟುಂಬದ ಕೆಲ ಸದಸ್ಯರಿಗೆ ಮಾತ್ರ ಗೊತ್ತಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವರ್ಷಾಂತ್ಯಕ್ಕೆ ಇವರ ಮದುವೆ ನೆರವೇರುತ್ತಿತ್ತು. ಆದರೆ, ಸಿದ್ದಾರ್ಥ್​ ವಿಧಿಯ ಕೈವಾಡಕ್ಕೆ ಸಿಲುಕಿದರು.

ಶೆಹನಾಜ್​ ಹಾಗೂ ಸಿದ್ದಾರ್ಥ್​ ಪರಸ್ಪರ ಪ್ರೀತಿಸುತ್ತಿದ್ದರು. ಸಿದ್ದಾರ್ಥ್​ ಅವರನ್ನು ಕಳೆದುಕೊಂಡಿದ್ದು ಶೆಹನಾಜ್​ಗೆ ಸಾಕಷ್ಟು ಆಘಾತ ನೀಡಿದೆ. ಈ ಶಾಕ್​ನಿಂದ ಹೊರ ಬರೋಕೆ ಅವರಿಗೆ ಅನೇಕ ತಿಂಗಳುಗಳೇ ಬೇಕಾಗಬಹುದು. ಇನ್ನು, ಶುಕ್ರವಾರ (ಸೆಪ್ಟೆಂಬರ್​ 4) ಸಿದ್ದಾರ್ಥ್​ ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಶೆಹನಾಜ್​ ಕಾಣಿಸಿಕೊಂಡಿದ್ದರು. ತುಂಬಾನೇ ಅತ್ತಿದ್ದರಿಂದ ಅವರ ಕಣ್ಣುಗಳು ಊದಿಕೊಂಡಿದ್ದವು.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ