AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ.

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 04, 2021 | 3:30 PM

Share

ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಬಿಗ್​ ಬಾಸ್​ ಸೀಸನ್​ 13ರಲ್ಲಿ ಪರಸ್ಪರ ಪರಿಚಯವಾದರು. ಇಬ್ಬರ ನಡುವೆ ಬಿಗ್​ ಬಾಸ್​ ಮನೆಯಲ್ಲೇ ಆಪ್ತತೆ ಬೆಳೆಯಿತು. ಇವರ ನಡುವೆ ಪ್ರೀತಿ ಇದೆ ಎಂದು ಹೇಳಲಾಗುತ್ತಿದೆಯಾದರೂ ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಸಿದ್ದಾರ್ಥ್​ ಮೃತಪಟ್ಟ ನಂತರದಲ್ಲಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ವಿಶೇಷ ಎಂದರೆ, ಸಿದ್ದಾರ್ಥ್​ ಮತ್ತು ಶೆಹನಾಜ್​ ಡಿಸೆಂಬರ್​ನಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದರು ಎನ್ನಲಾಗಿದೆ. ಆದರೆ, ಇದಕ್ಕೂ ಕೆಲ ತಿಂಗಳು ಮೊದಲೇ ದುರಂತ ನಡೆದಿದೆ.

ಸಿದ್ದಾರ್ಥ್​ ಹಾಗೂ ಶೆಹನಾಜ್​ ನಡುವೆ ಆಪ್ತತೆ ಇತ್ತು. ಇಬ್ಬರೂ ಪ್ರೀತಿಸುತ್ತಿದ್ದ ವಿಚಾರ ಮನೆ ಮಂದಿಗೂ ಗೊತ್ತಿತ್ತು ಎನ್ನಲಾಗಿದೆ. ಮನೆಯವರು ಕೂಡ ಇವರ ಪ್ರೀತಿಗೆ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಈ ಜೋಡಿ ನೋಡಿ ಅಭಿಮಾನಿಗಳಿಗೂ ಸಾಕಷ್ಟು ಖುಷಿಯಾಗಿತ್ತು. ಇವರಿಬ್ಬರೂ ಮದುವೆ ಯಾವಾಗ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಆದರೆ, ಆ ದಿನ ಬರಲೇ ಇಲ್ಲ. ಮದುವೆಗೂ ಮೊದಲೇ ಸಿದ್ದಾರ್ಥ್​ ಮೃತಪಟ್ಟಿರುವುದು ದುರಂತ.

ಶೀಘ್ರವೇ ಎಂಗೇಜ್​ಮೆಂಟ್ ಮಾಡಿಕೊಂಡು ವರ್ಷಾಂತ್ಯಕ್ಕೆ ಮದುವೆ ಆಗುವ ಆಲೋಚನೆ ಇವರದ್ದಾಗಿತ್ತು. ಕೊವಿಡ್​ ಈಗ ಕಡಿಮೆ ಆಗಿದೆ. ಹೀಗಾಗಿ, ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ಇವರ ಆಲೋಚನೆ ಆಗಿತ್ತು. ಈ ಕಾರಣಕ್ಕೆ ಮುಂಬೈನ ಸ್ಟಾರ್​ ಹೋಟೆಲ್​ ಬುಕ್​ ಮಾಡುವ ಪ್ರಕ್ರಿಯೆಯನ್ನು ಕೂಡ ಕುಟುಂಬದವರು ಆರಂಭಿಸಿದ್ದರು. ಈ ವಿಚಾರ ಕುಟುಂಬದ ಕೆಲ ಸದಸ್ಯರಿಗೆ ಮಾತ್ರ ಗೊತ್ತಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವರ್ಷಾಂತ್ಯಕ್ಕೆ ಇವರ ಮದುವೆ ನೆರವೇರುತ್ತಿತ್ತು. ಆದರೆ, ಸಿದ್ದಾರ್ಥ್​ ವಿಧಿಯ ಕೈವಾಡಕ್ಕೆ ಸಿಲುಕಿದರು.

ಶೆಹನಾಜ್​ ಹಾಗೂ ಸಿದ್ದಾರ್ಥ್​ ಪರಸ್ಪರ ಪ್ರೀತಿಸುತ್ತಿದ್ದರು. ಸಿದ್ದಾರ್ಥ್​ ಅವರನ್ನು ಕಳೆದುಕೊಂಡಿದ್ದು ಶೆಹನಾಜ್​ಗೆ ಸಾಕಷ್ಟು ಆಘಾತ ನೀಡಿದೆ. ಈ ಶಾಕ್​ನಿಂದ ಹೊರ ಬರೋಕೆ ಅವರಿಗೆ ಅನೇಕ ತಿಂಗಳುಗಳೇ ಬೇಕಾಗಬಹುದು. ಇನ್ನು, ಶುಕ್ರವಾರ (ಸೆಪ್ಟೆಂಬರ್​ 4) ಸಿದ್ದಾರ್ಥ್​ ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಶೆಹನಾಜ್​ ಕಾಣಿಸಿಕೊಂಡಿದ್ದರು. ತುಂಬಾನೇ ಅತ್ತಿದ್ದರಿಂದ ಅವರ ಕಣ್ಣುಗಳು ಊದಿಕೊಂಡಿದ್ದವು.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ