‘ಭಗ್ನಪ್ರೇಮ ಒಂದು ಸಲ ಆದ್ರೆ ಹೇಳಬಹುದು’; ‘ವೀಕೆಂಡ್ ವಿತ್ ರಮೇಶ್​’ನಲ್ಲಿ ಸಿಹಿ-ಕಹಿ ಚಂದ್ರು ಬ್ರೇಕಪ್ ಸ್ಟೋರಿ

ವೀಕೆಂಡ್ ವಿತ್ ರಮೇಶ್ ಎಪಿಸೋಡ್​ನಲ್ಲಿ ಹಳೆಯ ಘಟನೆ ನೆನಪಿಸಿಕೊಳ್ಳಲಾಗುತ್ತದೆ. ಅದೇ ರೀತಿ ಸಿಹಿ-ಕಹಿ ಚಂದ್ರು ಅವರ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಾಗಿದೆ.

‘ಭಗ್ನಪ್ರೇಮ ಒಂದು ಸಲ ಆದ್ರೆ ಹೇಳಬಹುದು’; ‘ವೀಕೆಂಡ್ ವಿತ್ ರಮೇಶ್​’ನಲ್ಲಿ ಸಿಹಿ-ಕಹಿ ಚಂದ್ರು ಬ್ರೇಕಪ್ ಸ್ಟೋರಿ
ಸಿಹಿ-ಕಹಿ ಚಂದ್ರು
Follow us
|

Updated on: May 01, 2023 | 12:01 PM

ಸಿಹಿ-ಕಹಿ ಚಂದ್ರು ಅವರು ‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರ (Weekend With Ramesh) ಅತಿಥಿಯಾಗಿ ಬಂದಿದ್ದಾರೆ. ಕಳೆದ ವೀಕೆಂಡ್​ನಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಇಡೀ ಎಪಿಸೋಡ್ ಸಖತ್ ಫನ್ ಆಗಿತ್ತು. ಸಿಹಿ-ಕಹಿ ಚಂದ್ರು (Sihi Kahi Chandru) ಅವರು ಸದಾ ಹಸನ್ಮುಖಿ. ತೆರೆಮೇಲೆ ಹಾಗೂ ತೆರೆಹಿಂದೆ ಅವರು ಎಲ್ಲರನ್ನೂ ನಗಿಸುತ್ತಾರೆ. ವಿವಿಧ ತಿನಿಸು ತಿನ್ನೋದು ಎಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಅವರು ಕಾಲೇಜು ದಿನಗಳಲ್ಲಿ ಭಗ್ನಪ್ರೇಮಿ ಆಗಿದ್ದರಂತೆ! ಈ ವಿಚಾರವನ್ನು ಅವರ ಗ್ಯಾಂಗ್ ಸದಸ್ಯರು ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಸಿಹಿ-ಕಹಿ ಚಂದ್ರು ಮಾತನಾಡಿದ್ದಾರೆ.

ವೀಕೆಂಡ್ ವಿತ್ ರಮೇಶ್ ಎಪಿಸೋಡ್​ನಲ್ಲಿ ಹಳೆಯ ಘಟನೆ ನೆನಪಿಸಿಕೊಳ್ಳಲಾಗುತ್ತದೆ. ಕಾಲೇಜು ದಿನದ ಗೆಳೆಯರು ಬಂದು ಹಳೆ ಸ್ಟೋರಿಯನ್ನು ಹೇಳುತ್ತಾರೆ. ಅದೇ ರೀತಿ ಸಿಹಿ-ಕಹಿ ಚಂದ್ರು ಅವರ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಾಗಿದೆ. ‘ಕಾಲೇಜು ದಿನಗಳಲ್ಲಿ ಭಗ್ನಪ್ರೇಮಿಯಾಗಿ ಸಕ್ಕರೆ ಬೈಲಿನ ಕಲ್ಲಿನ ಬಂಡೆಮೇಲೆ ಬಿಯರ್ ಬಾಟಲಿ ಖಾಲಿ ಮಾಡಿದ್ದೆ’ ಎಂದು ಸಿಹಿ-ಕಹಿ ಚಂದ್ರು ಬಗ್ಗೆ ಗೆಳೆಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾಧಕರ ಕುರ್ಚಿಯಲ್ಲಿ ಸಿಹಿ-ಕಹಿ ಚಂದ್ರು, ಎಪಿಸೋಡ್​ ಪೂರಾ ಸಿಹಿಯೇ

ಸಿಹಿ-ಕಹಿ ಚಂದ್ರು ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಅವರು ಈ ಬಗ್ಗೆ ಯಾವುದೇ ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದಾರೆ. ‘ಭಗ್ನಪ್ರೇಮಿ ಒಂದು ಸಲ ಆದ್ರೆ ಹೇಳಬಹುದು. ಸಾಕಷ್ಟು ಬಾರಿ ಆಗಿದ್ದೇನೆ. ಪ್ರೇಮ ಮಾಡಿದ್ರೆ ಆಗಲ್ಲ ಅಂದ್ಕೊಂಡೆ. ಪ್ರೇಮ ಭಗ್ನ ಆದ್ರೆ ಕುಡಿಯಬಾರದು ಎಂದು ನಿರ್ಧರಿಸಿದೆ’ ಎಂದರು ಸಿಹಿ-ಕಹಿ ಚಂದ್ರು. ‘ಹಾಗಿದ್ರೆ ಒಂದು ಬಿಯರ್ ಬಾಟಲ್ ಅಲ್ಲ, ಕ್ರೇಟ್ ಖಾಲಿ ಆಗಿರಬೇಕು’ ಎಂದು ಕಾಲೆಳೆದರು ರಮೇಶ್ ಅರವಿಂದ್.

ಇದನ್ನೂ ಓದಿ:ಎಲ್ಲರಿಗೂ ಮನೆ, ಶಂಕರ್​ನಾಗ್ ಇದ್ದಿದ್ದರೆ ಗುಡಿಸಲುಗಳೇ ಇರುತ್ತಿರಲಿಲ್ಲ, ಶಂಕರ್​ನಾಗ್ ಐಡಿಯಾ ಬಿಚ್ಚಿಟ್ಟ ಸಿಹಿ-ಕಹಿ ಚಂದ್ರು 

ದೂರದರ್ಶನದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನಿಂದಲೇ ಪ್ರಸಾರವಾದ ಕನ್ನಡದ ಧಾರಾವಾಹಿಯಲ್ಲಿ ಸಿಹಿ-ಕಹಿಯಲ್ಲಿ ಚಂದ್ರು ನಟಿಸಿದರು. ಅಲ್ಲೇ ಗೀತಾ ಅವರ ಪರಿಚಯವಾಗಿ ಅದು ಪ್ರೇಮವಾಗಿ ಮದುವೆಯೂ ಆಯಿತು. ಅದಾದ ಬಳಿಕ ಒಂದರ ಹಿಂದೊಂದು ಸಿನಿಮಾಗಳು ಸಿಗಲು ಆರಂಭವಾದವು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ