AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ‘ಮಗಳು ಜಾನಕಿ’ಯಲ್ಲಿ ಜಡ್ಜ್​, ಇಂದು ಹೊಸ ಸೀರಿಯಲ್​ನಲ್ಲಿ ಡಾಕ್ಟರ್​; ಅರ್ಚನಾ ಉಡುಪ ಹೊಸ ಜರ್ನಿ

Kannada Serials: ಕಪ್ಪು ಮೈಬಣ್ಣವನ್ನು ಬಹುತೇಕರು ಜರಿಯುತ್ತಾರೆ. ಬಿಳಿ ತ್ವಚೆಯ ಮೇಲೆ ಎಲ್ಲರಿಗೂ ವ್ಯಾಮೋಹ. ಅಂಥ ಕಾನ್ಸೆಪ್ಟ್​​ಗೆ ಸವಾಲೊಡ್ಡುವಂತಹ ಕಥೆಯನ್ನು ‘ಲಕ್ಷಣ’ ಧಾರಾವಾಹಿ ಹೊಂದಿದೆ.

ಅಂದು ‘ಮಗಳು ಜಾನಕಿ’ಯಲ್ಲಿ ಜಡ್ಜ್​, ಇಂದು ಹೊಸ ಸೀರಿಯಲ್​ನಲ್ಲಿ ಡಾಕ್ಟರ್​; ಅರ್ಚನಾ ಉಡುಪ ಹೊಸ ಜರ್ನಿ
ಅಂದು ‘ಮಗಳು ಜಾನಕಿ’ಯಲ್ಲಿ ಜಡ್ಜ್​, ಇಂದು ಹೊಸ ಸೀರಿಯಲ್​ನಲ್ಲಿ ಡಾಕ್ಟರ್​; ಅರ್ಚನಾ ಉಡುಪ ಹೊಸ ಜರ್ನಿ
TV9 Web
| Edited By: |

Updated on: Aug 12, 2021 | 9:27 AM

Share

ಮೊದಲು ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಿ, ನಂತರ ಬೇರೊಂದು ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡ ಹಲವರು ಯಶಸ್ಸು ಕಂಡಿದ್ದಾರೆ. ಸಿಂಗರ್​ ಆಗಿದ್ದವರು ನಟನೆಗೆ ಬಂದು ಸಾಧನೆ ಮಾಡಿದ ಉದಾಹರಣೆಗಳೂ ಸಾಕಷ್ಟಿವೆ. ಈಗ ಗಾಯಕಿ ಅರ್ಚನಾ ಉಡುಪ (Archana Udupa) ಅವರು ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಗಾಯಕಿಯಾಗಿ ಮಿಂಚಿರುವ ಅವರು ಹಲವು ಸುಮಧುರ ಗೀತೆಗಳನ್ನು ನೀಡಿದ್ದಾರೆ. ಆದರೆ ಅವರಿಗೆ ನಟನೆ ಹೊಸದು. ಈ ಹಿಂದೆ ‘ಮಗಳು ಜಾನಕಿ’ ಸೀರಿಯಲ್​ನಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದ ಅರ್ಚನಾ ಈಗ ‘ಲಕ್ಷಣ’ ಸೀರಿಯಲ್​ನಲ್ಲೂ (Lakshana Kannada Serial) ಒಂದು ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ಸ್ವತಃ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಲಕ್ಷಣ ಧಾರಾವಾಹಿ ಆರಂಭ ಆಗಿದೆ. ಒಂದು ಡಿಫರೆಂಟ್ಸ್​ ಕಾನ್ಸೆಪ್ಟ್​ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಜಗನ್​ ಮತ್ತು ವಿಜಯಲಕ್ಷ್ಮೀ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸೀರಿಯಲ್​​ನಲ್ಲಿ ಅರ್ಚನಾ ಉಡುಪ ಅವರಿಗೆ ಡಾಕ್ಟರ್​ ಪಾತ್ರವನ್ನು ನೀಡಲಾಗಿದೆ.

‘ಇಷ್ಟು ವರ್ಷಗಳಲ್ಲಿ ನಟಿಸಲು ಬಹಳಷ್ಟು ಅವಕಾಶಗಳು ನನ್ನನ್ನು ಅರಸಿ ಬಂದಿದ್ದರೂ ಯಾಕೋ ಮನಸ್ಸು ಒಪ್ಪುತ್ತಿರಲಿಲ್ಲ. ಮಗಳು ಜಾನಕಿ ಧಾರಾವಾಹಿಯಲ್ಲಿ ಜಡ್ಜ್ ಆಗಿ ಒಂದು ಪುಟ್ಟ ಪಾತ್ರ ಮಾಡಿ ಸೀತಾರಾಮ್​ ಸರ್ ಹತ್ತಿರ ಸೈ ಅನ್ನಿಸಿಕೊಂಡಿದ್ದೆ ಕೂಡ. ಕೊನೆಗೂ ಮನಸ್ಸಿಗೆ ಹಿಡಿಸುವಂಥ ಚಂದದ ಒಂದು ಪಾತ್ರ ದೊರೆತು, ನಟನೆಗೆ ಇಳಿದದ್ದೂ ಆಯಿತು. ನನ್ನ ಹೊಸ ಅವತಾರವನ್ನು, ಪಾತ್ರವನ್ನು ನೋಡಿ, ಹೇಗಿತ್ತು ಎಂದು ತಿಳಿಸಿ. ಲಕ್ಷಣ ಎಂಬ ಹೊಚ್ಚಹೊಸ ಧಾರಾವಾಹಿಯಲ್ಲಿ ನಾನು ಡಾ. ತುಳಸಿಯಾಗಿ ಕಾಣಿಸಿಕೊಳ್ಳಲಿದ್ದೇನೆ’ ಎಂದು ಅರ್ಚನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕಲರ್ಸ್​ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9.30ಕ್ಕೆ ಹೊಸ ಧಾರಾವಾಹಿ ‘ಲಕ್ಷಣ’ ಪ್ರಸಾರ ಆಗುತ್ತಿದೆ. ಆ.9ರಿಂದ ಈ ಸೀರಿಯಲ್​ ಶುರುವಾಗಿದೆ. ಕಪ್ಪು ಮೈಬಣ್ಣವನ್ನು ಬಹುತೇಕರು ಜರಿಯುತ್ತಾರೆ. ಬಿಳಿ ತ್ವಚೆಯ ಮೇಲೆ ಎಲ್ಲರಿಗೂ ವ್ಯಾಮೋಹ. ಅಂಥ ಕಾನ್ಸೆಪ್ಟ್​​ಗೆ ಸವಾಲೊಡ್ಡುವಂತಹ ಕಥೆಯನ್ನು ‘ಲಕ್ಷಣ’ ಧಾರಾವಾಹಿ ಹೊಂದಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

(Singer Archana Udupa plays a major role in new serial Lakshana on Colors Kannada)

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!