AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆ ಮುಂದೆ ಹೋಗಿ ಹುಡುಗಿ ಕೇಳ್ತೀನಿ: ಹನುಮಂತ

ಹಳ್ಳಿ ಹೈದ ಹನುಮಂತ ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು ಎಂಬ ಅನಿಸಿಕೆ ಹಲವರಿಗೆ ಇದೆ. ಹನುಮಂತ ಅವರ ಆಟವನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಫಿನಾಲೆ ಟಿಕೆಟ್ ಪಡೆದು ನೇರವಾಗಿ ಕೊನೇ ವಾರಕ್ಕೆ ತಲುಪಿದ ಮೊದಲ ಸ್ಪರ್ಧಿ ಹನುಮಂತ. ಈಗ ಅವರು ತಮ್ಮ ಮುಂದಿನ ಗುರಿ ಏನು ಎಂಬುದನ್ನು ಹೇಳಿದ್ದಾರೆ.

ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆ ಮುಂದೆ ಹೋಗಿ ಹುಡುಗಿ ಕೇಳ್ತೀನಿ: ಹನುಮಂತ
Hanumantha
ಮದನ್​ ಕುಮಾರ್​
|

Updated on: Jan 17, 2025 | 10:30 PM

Share

ಸಿಂಗರ್ ಹನುಮಂತ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಅವರ ಆಟವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಟ್ರೋಫಿ ಹನುಮಂತ ಅವರ ಕೈಯಲ್ಲೇ ಇದೆ ಎಂಬ ರೀತಿಯಲ್ಲಿ ಕೆಲವರಿಗೆ ಕಾಣುತ್ತಿದೆ. ಅಷ್ಟರಮಟ್ಟಿಗೆ ಅನೇಕರು ಹನುಮಂತನ ಮೇಲೆ ಭರವಸೆ ಇಟ್ಟಿದ್ದಾರೆ. ಕಳೆದ ವಾರ ಹನುಮಂತ ಅವರು ತುಂಬ ಚೆನ್ನಾಗಿ ಆಡಿದರು. ಹಾಗಾಗಿ ಅವರಿಗೆ ಫಿನಾಲೆ ಟಿಕೆಟ್ ಸಿಕ್ಕಿತು. ಇನ್ನೇನು ಟ್ರೋಫಿ ಗೆಲ್ಲುವುದು ಮಾತ್ರ ಬಾಕಿ. ಒಂದು ವೇಳೆ ಟ್ರೋಫಿ ಗೆದ್ದರೆ ಹನುಮಂತನ ಮುಂದಿನ ನಡೆ ಏನಾಗಿರಲಿದೆ ಎಂಬುದನ್ನು ಅವರು ಹೇಳಿದ್ದಾರೆ.

ಧನರಾಜ್ ಆಚಾರ್ ಮತ್ತು ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತರಾಗಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಒಟ್ಟಿಗೆ ಕುಳಿತು ಮಾತನಾಡುತ್ತಾರೆ. ಈ ವಾರ ಹನುಮಂತ ಅವರು ಧನರಾಜ್ ಜೊತೆ ಒಂದು ವಿಷಯವನ್ನು ಚರ್ಚೆ ಮಾಡಿದ್ದಾರೆ. ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ತಾವು ಆಟ ಆಡಿರುವುದರ ಬಗ್ಗೆ ತಮಗೆ ನೆಮ್ಮದಿ ಇದೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಮುಂದಿನ ಪ್ಲ್ಯಾನ್ ಬಗ್ಗೆಯೂ ಮಾತನಾಡಿದ್ದಾರೆ.

‘ಇಷ್ಟು ದಿನ ಚೆನ್ನಾಗಿ ಆಡಿದ್ದೇನೆ. ಒಂದು ವೇಳೆ ಔಟ್ ಆದರೂ ಖುಷಿಯಿಂದ ಹೊರಗೆ ಹೋಗುತ್ತೇನೆ. ಗೆದ್ದರೆ ನಮ್ಮ ಅತ್ತೆ ಮನೆಯ ಮುಂದೆ ಹೋಗಿ ನಿಲ್ಲುತ್ತೇನೆ. ಹುಡುಗಿ ಯಾಕೆ ಕೊಡಲ್ಲ ಅಂತ ಕೇಳುತ್ತೇನೆ’ ಎಂದು ಹನುಮಂತ ಪ್ಲ್ಯಾನ್ ತಿಳಿಸಿದ್ದಾರೆ. ಅವರ ಆಸೆ ಈಡೇರುತ್ತೋ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಇದೆ. ಕೆಲವು ವಾರಗಳ ಹಿಂದೆ ಬಿಗ್ ಬಾಸ್ ಮನೆಗೆ ಹನುಮಂತ ಅವರ ತಂದೆ-ತಾಯಿ ಬಂದಿದ್ದರು. ಆಗ ತಮ್ಮ ಸೊಸೆ ಹೇಗೆ ಇರಬೇಕು ಎಂದು ಹನುಮಂತ ಅವರ ತಾಯಿ ಹೇಳಿದ್ದರು.

ಇದನ್ನೂ ಓದಿ: ಹನುಮಂತನ ಕೈಯಲ್ಲೇ ಇದೆಯಾ ‘ಬಿಗ್ ಬಾಸ್​ ಕನ್ನಡ 11’ ಟ್ರೋಫಿ?

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಹೆಚ್ಚೇನೂ ಕಿರಿಕ್ ಮಾಡಿಕೊಂಡಿಲ್ಲ. ಅವರನ್ನು ಯಾರೂ ಕೂಡ ದ್ವೇಷಿಸುತ್ತಿಲ್ಲ. ಹನುಮಂತ ತೆಗೆದುಕೊಳ್ಳುವ ನಿರ್ಧಾರಗಳು ಯಾವಾಗಲೂ ಅಚ್ಚರಿ ಮೂಡಿಸುತ್ತವೆ. ಎಂದಿಗೂ ಅವರು ಪಕ್ಷಪಾತ ಮಾಡಿಲ್ಲ. ಕಿಚ್ಚ ಸುದೀಪ್ ಅವರಿಂದಲೂ ಹನುಮಂತ ಶಹಭಾಷ್ ಎನಿಸಿಕೊಂಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಅವರಿಗೆ ವೀಕ್ಷಕರಿಂದ ಹೆಚ್ಚಿನ ವೋಟ್ ಬರುವ ನಿರೀಕ್ಷೆ ಇದೆ. ಫಿನಾಲೆ ವಾರದ ರೋಚಕತೆ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ