AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆ ಮುಂದೆ ಹೋಗಿ ಹುಡುಗಿ ಕೇಳ್ತೀನಿ: ಹನುಮಂತ

ಹಳ್ಳಿ ಹೈದ ಹನುಮಂತ ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು ಎಂಬ ಅನಿಸಿಕೆ ಹಲವರಿಗೆ ಇದೆ. ಹನುಮಂತ ಅವರ ಆಟವನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಫಿನಾಲೆ ಟಿಕೆಟ್ ಪಡೆದು ನೇರವಾಗಿ ಕೊನೇ ವಾರಕ್ಕೆ ತಲುಪಿದ ಮೊದಲ ಸ್ಪರ್ಧಿ ಹನುಮಂತ. ಈಗ ಅವರು ತಮ್ಮ ಮುಂದಿನ ಗುರಿ ಏನು ಎಂಬುದನ್ನು ಹೇಳಿದ್ದಾರೆ.

ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆ ಮುಂದೆ ಹೋಗಿ ಹುಡುಗಿ ಕೇಳ್ತೀನಿ: ಹನುಮಂತ
Hanumantha
ಮದನ್​ ಕುಮಾರ್​
|

Updated on: Jan 17, 2025 | 10:30 PM

Share

ಸಿಂಗರ್ ಹನುಮಂತ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಅವರ ಆಟವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಟ್ರೋಫಿ ಹನುಮಂತ ಅವರ ಕೈಯಲ್ಲೇ ಇದೆ ಎಂಬ ರೀತಿಯಲ್ಲಿ ಕೆಲವರಿಗೆ ಕಾಣುತ್ತಿದೆ. ಅಷ್ಟರಮಟ್ಟಿಗೆ ಅನೇಕರು ಹನುಮಂತನ ಮೇಲೆ ಭರವಸೆ ಇಟ್ಟಿದ್ದಾರೆ. ಕಳೆದ ವಾರ ಹನುಮಂತ ಅವರು ತುಂಬ ಚೆನ್ನಾಗಿ ಆಡಿದರು. ಹಾಗಾಗಿ ಅವರಿಗೆ ಫಿನಾಲೆ ಟಿಕೆಟ್ ಸಿಕ್ಕಿತು. ಇನ್ನೇನು ಟ್ರೋಫಿ ಗೆಲ್ಲುವುದು ಮಾತ್ರ ಬಾಕಿ. ಒಂದು ವೇಳೆ ಟ್ರೋಫಿ ಗೆದ್ದರೆ ಹನುಮಂತನ ಮುಂದಿನ ನಡೆ ಏನಾಗಿರಲಿದೆ ಎಂಬುದನ್ನು ಅವರು ಹೇಳಿದ್ದಾರೆ.

ಧನರಾಜ್ ಆಚಾರ್ ಮತ್ತು ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತರಾಗಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಒಟ್ಟಿಗೆ ಕುಳಿತು ಮಾತನಾಡುತ್ತಾರೆ. ಈ ವಾರ ಹನುಮಂತ ಅವರು ಧನರಾಜ್ ಜೊತೆ ಒಂದು ವಿಷಯವನ್ನು ಚರ್ಚೆ ಮಾಡಿದ್ದಾರೆ. ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ತಾವು ಆಟ ಆಡಿರುವುದರ ಬಗ್ಗೆ ತಮಗೆ ನೆಮ್ಮದಿ ಇದೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಮುಂದಿನ ಪ್ಲ್ಯಾನ್ ಬಗ್ಗೆಯೂ ಮಾತನಾಡಿದ್ದಾರೆ.

‘ಇಷ್ಟು ದಿನ ಚೆನ್ನಾಗಿ ಆಡಿದ್ದೇನೆ. ಒಂದು ವೇಳೆ ಔಟ್ ಆದರೂ ಖುಷಿಯಿಂದ ಹೊರಗೆ ಹೋಗುತ್ತೇನೆ. ಗೆದ್ದರೆ ನಮ್ಮ ಅತ್ತೆ ಮನೆಯ ಮುಂದೆ ಹೋಗಿ ನಿಲ್ಲುತ್ತೇನೆ. ಹುಡುಗಿ ಯಾಕೆ ಕೊಡಲ್ಲ ಅಂತ ಕೇಳುತ್ತೇನೆ’ ಎಂದು ಹನುಮಂತ ಪ್ಲ್ಯಾನ್ ತಿಳಿಸಿದ್ದಾರೆ. ಅವರ ಆಸೆ ಈಡೇರುತ್ತೋ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಇದೆ. ಕೆಲವು ವಾರಗಳ ಹಿಂದೆ ಬಿಗ್ ಬಾಸ್ ಮನೆಗೆ ಹನುಮಂತ ಅವರ ತಂದೆ-ತಾಯಿ ಬಂದಿದ್ದರು. ಆಗ ತಮ್ಮ ಸೊಸೆ ಹೇಗೆ ಇರಬೇಕು ಎಂದು ಹನುಮಂತ ಅವರ ತಾಯಿ ಹೇಳಿದ್ದರು.

ಇದನ್ನೂ ಓದಿ: ಹನುಮಂತನ ಕೈಯಲ್ಲೇ ಇದೆಯಾ ‘ಬಿಗ್ ಬಾಸ್​ ಕನ್ನಡ 11’ ಟ್ರೋಫಿ?

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಹೆಚ್ಚೇನೂ ಕಿರಿಕ್ ಮಾಡಿಕೊಂಡಿಲ್ಲ. ಅವರನ್ನು ಯಾರೂ ಕೂಡ ದ್ವೇಷಿಸುತ್ತಿಲ್ಲ. ಹನುಮಂತ ತೆಗೆದುಕೊಳ್ಳುವ ನಿರ್ಧಾರಗಳು ಯಾವಾಗಲೂ ಅಚ್ಚರಿ ಮೂಡಿಸುತ್ತವೆ. ಎಂದಿಗೂ ಅವರು ಪಕ್ಷಪಾತ ಮಾಡಿಲ್ಲ. ಕಿಚ್ಚ ಸುದೀಪ್ ಅವರಿಂದಲೂ ಹನುಮಂತ ಶಹಭಾಷ್ ಎನಿಸಿಕೊಂಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಅವರಿಗೆ ವೀಕ್ಷಕರಿಂದ ಹೆಚ್ಚಿನ ವೋಟ್ ಬರುವ ನಿರೀಕ್ಷೆ ಇದೆ. ಫಿನಾಲೆ ವಾರದ ರೋಚಕತೆ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು