AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ಹೊರಬರಲು ಹನುಮಂತ ನಿರ್ಧಾರ; ಧನರಾಜ್ ಪ್ರತಿಕ್ರಿಯೆ ಏನು?

ಬಿಗ್ ಬಾಸ್ ಮನೆಯಲ್ಲಿ ಹನುಮಂತ ಚೆನ್ನಾಗಿ ಆಡುತ್ತಿದ್ದಾರೆ. ಆದರೆ ಅವರಿಗೆ ಈಗ ಬಿಗ್ ಬಾಸ್ ಆಟ ಸಾಕು ಎನಿಸುತ್ತಿದೆ. ಅವರಿಗೆ ಉತ್ತಮ ವೋಟ್​ ಸಿಗುತ್ತಿದೆ. ಹಾಗಿದ್ದರೂ ಕೂಡ ಅವರು ಇಂಥ ನಿರ್ಧಾರಕ್ಕೆ ಬಂದಿದ್ದಾರೆ. ಹನುಮಂತ ಅವರಿಗೆ ಆಪ್ತ ಗೆಳೆಯ ಧನರಾಜ್​ ಬುದ್ಧಿ ಹೇಳಿದ್ದಾರೆ. ಮುಂದಿನ ಅವರ ನಿರ್ಧಾರ ಹೇಗಿರಲಿದೆ ಎಂಬ ಕೌತುಕ ಮೂಡಿದೆ.

ಬಿಗ್ ಬಾಸ್ ಮನೆಯಿಂದ ಹೊರಬರಲು ಹನುಮಂತ ನಿರ್ಧಾರ; ಧನರಾಜ್ ಪ್ರತಿಕ್ರಿಯೆ ಏನು?
Hanumantha, Kichcha Sudeep
ಮದನ್​ ಕುಮಾರ್​
|

Updated on: Jan 05, 2025 | 9:27 PM

Share

ಸಿಂಗರ್​ ಹನುಮಂತ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಬೇರೆ ಎಲ್ಲ ಸ್ಪರ್ಧಿಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಅವರನ್ನು ಇಷ್ಟಪಡುವ ವೀಕ್ಷಕರ ಸಂಖ್ಯೆ ದೊಡ್ಡದಿದೆ. ಪ್ರತಿ ವಾರ ಅವರಿಗೆ ಉತ್ತಮವಾಗಿ ವೋಟ್​ಗಳು ಬರುತ್ತಿವೆ. ಆದರೆ ಯಾಕೋ ಹನುಮಂತ ಅವರು ಬಿಗ್ ಬಾಸ್​ ಆಟವನ್ನು ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಭಾನುವಾರದ (ಜನವರಿ 5) ಸಂಚಿಕೆಯಲ್ಲಿ ಹನುಮಂತ ಅವರು ಈ ಕುರಿತು ಧನರಾಜ್​ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಧನರಾಜ್​ ಅವರು ಹನುಮಂತನಿಗೆ ಧೈರ್ಯ ತುಂಬಿದ್ದಾರೆ.

‘ಬಿಗ್ ಬಾಸ್​ಗೆ ನಾನು ನೇರವಾಗಿ ಹೇಳಿಬಿಡುತ್ತೇನೆ. ಕಷ್ಟ ಆಗುತ್ತಿದೆ ನನ್ನನ್ನು ಕಳಿಸಿ ಬಿಡಿ’ ಎಂದು ಹನುಮಂತ ಅವರು ಹೇಳಿದ್ದಾರೆ. ‘ನೀನು ಯಾಕೆ ಶೋಭಕ್ಕನ ಥರ ಆಡುತ್ತಿದ್ದೀಯ’ ಎಂದು ಧನರಾಜ್​ ಅವರು ಹೇಳಿದರು. ಯಾಕೆಂದರೆ, ಶೋಭಾ ಶೆಟ್ಟಿ ಕೂಡ ಇದೇ ರೀತಿ ಮಾತನಾಡಿ ಬಿಗ್ ಬಾಸ್​ ಮನೆಯಿಂದ ಹೊರಗೆ ಹೋಗಿದ್ದರು. ತಮ್ಮ ಮನಸ್ಸಿನ ಗೊಂದಲ ಏನು ಎಂಬುದನ್ನು ಹನುಮಂತ ವಿವರಿಸಿದ್ದಾರೆ.

‘ಶೋಭಕ್ಕನ ರೀತಿ ಏನೂ ಇಲ್ಲ. ನಾವು ಬಾಯಿ ಸತ್ತವರ ರೀತಿ ಇರೋಕೆ ಆಗಲ್ಲ. ಮಾತಾಡೋಕೆ ಬರುತ್ತಿಲ್ಲ. ತಲೆ ಸ್ವಿಚ್ ಆಫ್ ಆಗಿದೆ’ ಎಂದು ಹನುಮಂತ ಅವರು ತಮ್ಮ ನಿಜವಾದ ಸಮಸ್ಯೆ ಏನು ಎಂಬುದನ್ನು ವಿವರಿಸಿದ್ದಾರೆ. ಅದಕ್ಕೆ ಕೂಡ ಧನರಾಜ್ ಅವರು ಬುದ್ಧಿ ಹೇಳಿದ್ದಾರೆ.‘ಹಾಡಲ್ಲೇ ಉತ್ತರ ಕೊಡುತ್ತೀಯ ದೋಸ್ತಾ. ವಾರ ಪೂರ್ತಿ ಮಾತಾಡುವ ನೀನು ವೀಕೆಂಡ್ನಲ್ಲಿ ಯಾಕೆ ಮಾಡಲ್ಲ ಅಂತ ಅಷ್ಟೇ ಹೇಳಿದ್ದು’ ಎಂದಿದ್ದಾರೆ ಧನರಾಜ್. ‘ಸುದೀಪ್ ಸರ್ ಹತ್ತಿರ ಟ್ರೇನಿಂಗ್ ತೆಗೆದುಕೊಂಡು ನಾವು ಇಲ್ಲಿಗೆ ಬರಬೇಕಿತ್ತು’ ಎಂದಿದ್ದಾರೆ ಹನುಮಂತ.

ಇದನ್ನೂ ಓದಿ: ಹಳ್ಳಿಯಿಂದ ಬಂದ ಅಪ್ಪ, ಅಮ್ಮನಿಗೆ ಹೆಮ್ಮೆಯಿಂದ ಬಿಗ್ ಬಾಸ್ ಮನೆ ತೋರಿಸಿದ ಹನುಮಂತ

ಹನುಮಂತ ಅವರು ಹಳ್ಳಿಯಿಂದ ಬಂದವರು. ಅವರಿಗೆ ಸಿಟಿ ಜೀವನದ ಅಷ್ಟಾಗಿ ಪರಿಚಯ ಇಲ್ಲ. ವೈಲ್ಡ್​ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಬಂದಾಗ ಅವರಿಗೆ ಎಲ್ಲವೂ ಹೊಸದಾಗಿತ್ತು. ಆದರೆ ಈಗ ಅವರು ತುಂಬ ಹೊಂದಿಕೊಂಡಿದ್ದಾರೆ. ಟಾಸ್ಕ್​ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರ ಕಡೆಯಿಂದ ಭರ್ಜರಿ ಮನರಂಜನೆ ಕೂಡ ಸಿಗುತ್ತಿದೆ. ಆದರೂ ಸಹ ಫಿನಾಲೆ ಹತ್ತಿರ ಆಗುತ್ತಿರುವಾಗ ಅವರು ಆಟ ತೊರೆಯುವ ಬಗ್ಗೆ ಮಾತನಾಡಿರುವುದು ಅವರ ಅಭಿಮಾನಿಗಳಿಗೆ ಖಂಡಿತ ಬೇಸರ ತಂದಿರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್