AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Telugu: ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Bigg Boss Telugu: ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ
ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ
TV9 Web
| Edited By: |

Updated on: Aug 04, 2021 | 6:25 PM

Share

Bigg Boss Telugu: ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ.  ಸೆಪ್ಟೆಂಬರ್​ನಿಂದ ಹೊಸ ಸೀಸನ್​ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ. ಈ ಶೋನ ಸಂಭಾವ್ಯ ಪಟ್ಟಿ ಹರಿದಾಡಿತ್ತು. ಇದರಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಹೆಸರು ಕೂಡ ಹರಿದಾಡಿತ್ತು. ಆದರೆ, ಈಗ ಅವರು ಶೋನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ, ರಿಲೀಸ್​ ಆದ ಪ್ರೋಮೋದಲ್ಲಿ ‘ನಾವು ಅತಿ ಶೀಘ್ರದಲ್ಲಿ ಬರುತ್ತೇವೆ’ ಎಂದು ಮಾತ್ರ ಇದೆ. ಸ್ಟಾರ್​ ಮಾ ವಾಹಿನಿಯಲ್ಲಿ ತೆಲುಗು ಬಿಗ್​ ಬಾಸ್​ ಪ್ರಸಾರವಾಗಲಿದೆ.

ಬಿಗ್​ ಬಾಸ್ ಆರಂಭಕ್ಕೂ ಮುನ್ನ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗೋದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಆಗಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿತ್ತು.

ಈಗಾಗಲೇ ಆ್ಯಂಕರ್​ ರವಿ ಅವರು ತಾವು ಬಿಗ್​ ಬಾಸ್​ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈಗ ಮಂಗ್ಲಿ ಕೂಡ ಶೋ ಸೇರೋದು ಅನುಮಾನ ಎನ್ನಲಾಗುತ್ತಿದೆ. ಮಂಗ್ಲಿ ಅವರು ಇತ್ತೀಚೆಗೆ ‘ಬೋನಾಲು..’ ಸಾಂಗ್​ ರಿಲೀಸ್​ ಮಾಡಿದ್ದರು. ಆದರೆ, ಈ ಹಾಡು ಕಾಳಿ ದೇವಿಗೆ ಅವಮಾನ ಮಾಡುವಂತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬೆಜೆಪಿ ಶಾಸಕರು ಮಂಗ್ಲಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಈ ಕಾರಣಕ್ಕೆ ಮಂಗ್ಲಿ ಬಿಗ್​ ಬಾಸ್​ ಶೋನಲ್ಲಿ ಪಾಳ್ಗೊಳ್ಳುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!