AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಕನ್ನಡ ವಾಹಿನಿಯಲ್ಲಿ ಸಾಲು-ಸಾಲು ಮನರಂಜನೆ

Siri Kannada channel: ಕನ್ನಡದ 'ಸಿರಿ ಕನ್ನಡ' ವಾಹಿನಿಯು ಹಲವು ಹೊಸ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ.

ಸಿರಿಕನ್ನಡ ವಾಹಿನಿಯಲ್ಲಿ ಸಾಲು-ಸಾಲು ಮನರಂಜನೆ
ಸಿರಿ ಕನ್ನಡ
ಮಂಜುನಾಥ ಸಿ.
|

Updated on: Sep 16, 2023 | 10:27 PM

Share

ಕನ್ನಡದ ಜನಪ್ರಿಯ ಮನರಂಜನಾ (Entertaining) ಚಾನೆಲ್​ಗಳಲ್ಲಿ ಒಂದಾಗಿರುವ ಸಿರಿ ಕನ್ನಡ (Siri Kannada) ವಾಹನಿಯ ಹಲವು ಹೊಸ ಕಾರ್ಯಕ್ರಮಗಳನ್ನು ಹೊತ್ತು ಬಂದಿದೆ. ಕರ್ನಾಟಕದ ಹೆಸರಾಂತ ಹಾಸ್ಯ ದಿಗ್ಗಜರು ನಡೆಸಿಕೊಡುವ “ಹಾಸ್ಯ ದರ್ಬಾರ್ ಸೀಸನ್ 02” ಹಾಗೂ ತಾಯಿ – ಮಗು ಭಾಗವಹಿಸುವ “ಲಿಟಲ್ ಕಿಲಾಡೀಸ್” ಗೇಮ್ ಶೋ ಆರಂಭ ಆಗಿದೆ. ಹೊಸ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದೆ.

ಸಿರಿಕನ್ನಡ ವಾಹಿನಿಯ ರಾಜೇಶ್ ರಾಜಘಟ್ಟ‌, “ಹಾಸ್ಯ ದರ್ಬಾರ್ ಸೀಸನ್ 2” ನಲ್ಲಿ ಭಾಗಿಯಾಗಿರುವ ಎಲ್ಲಾ ಹಾಸ್ಯ ದಿಗ್ಗಜರು ಹಾಗೂ “ಲಿಟಲ್ ಕಿಲಾಡೀಸ್” ಕಾರ್ಯಕ್ರಮದ ನಿರ್ದೇಶಕ ಮಂಜೇಶ್ ಮಾಹಿತಿ ನೀಡಿದರು. ನಿರೂಪಕಿ ರಶ್ಮಿತಾ ಚಂಗಪ್ಪ ಹಾಜರಿದ್ದರು. ರಾಜೇಶ್ ರಾಜಘಟ್ಟ ಮಾತನಾಡಿ, ”ನಾಡಿನ ಪ್ರತಿಯೊಬ್ಬ ವೀಕ್ಷಕರನ್ನು ತಲುಪುವಂತಹ ಎರಡು ಜನಪ್ರಿಯ ಕಾರ್ಯಕ್ರಮಗಳು ನಮ್ಮ ವಾಹಿನಿಯಲ್ಲಿ ಆರಂಭವಾಗಿದೆ. ಅದರಲ್ಲಿ ನಾಡಿನ ಪ್ರಮುಖ ಹಾಸ್ಯ ದಿಗ್ಗಜರು ನಡೆಸಿಕೊಡುವ ‘ಹಾಸ್ಯ ದರ್ಬಾರ್ ಸೀಸನ್ 2’ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 8 ರಿಂದ 9 ರವರೆಗೂ ಪ್ರಸಾರವಾಗಲಿದೆ. ಹಾಗೂ ಮಕ್ಕಳು ಹಾಗೂ ಅಮ್ಮಂದಿರನ್ನು ಒಂದೇ ವೇದಿಕೆಯಲ್ಲಿ ಒಟ್ಟಾಗಿಸಿ ತಾಯಿ ಮಗುವಿನ ಭಾವುಕತೆ, ಹಾಸ್ಯ, ಆಟಗಳು, ಡ್ರಾಮಾ, ನಾಯಕತ್ವ ಗುಣ ಬೆಳೆಸುವ ಕ್ರಿಯೆಗಳನ್ನು ಈ ಆಟ ಒಳಗೊಂಡಿರಲಿದೆ” ಎಂದರು.

ಇದನ್ನೂ ಓದಿ:ಶುರು ಆಗ್ತಿದೆ ನೂರು ದಿನದ ಹಬ್ಬ: ಬಿಗ್​ಬಾಸ್ 10 ಪ್ರೋಮೋ ಬಿಡುಗಡೆ

” ಲಿಟಲ್ ಕಿಲಾಡೀಸ್” ಗೇಮ್ ಶೋ ಸೋಮವಾರದಿಂದ ಶುಕ್ರವಾರದ ವರೆಗೆ ಸಂಜೆ 6 ರಿಂದ 7 ಗಂಟೆಯವರೆಗೆ ಪ್ರಸಾರ ಆಗಲಿದೆ. ಕಿರುತೆರೆಯ ಜನಪ್ರಿಯ ನಟಿ ರಶ್ಮಿತಾ ಚಂಗಪ್ಪ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಈ ಎರಡು ಕಾರ್ಯಕ್ರಮಗಳು ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾಗಿದೆ ಹಾಗೂ ಉತ್ತಮವಾಗಿ ಮೂಡಿಬರುತ್ತಿದೆ ಮತ್ತು ಜನಮನ್ನಣೆ ಪಡೆದಿದೆ ಎಂದರು.

‘ಹಾಸ್ಯ ದರ್ಬಾರ್ ಸೀಸನ್ 2’ನಲ್ಲಿ ಹಿರೇಮಗಳೂರು ಕಣ್ಣನ್, ಮುಖ್ಯಮಂತ್ರಿ ಚಂದ್ರು, ರಿಚರ್ಡ್ ಲೂಯಿಸ್, ಪ್ರಾಣೇಶ್, ಪ್ರೊ .ಕೃಷ್ಣೇ ಗೌಡ, ಎಂ.ಎಸ್ ನರಸಿಂಹಮೂರ್ತಿ, ಮಿಮಿಕ್ರಿ ದಯಾನಂದ್, ಯಶವಂತ ಸರ್ ದೇಶಪಾಂಡೆ, ಗುಂಡುರಾವ್, ದುಂಡಿರಾಜ್, ನರಸಿಂಹ ಜೋಶಿ, ಮಹಾಮನೆ ಮುಂತಾದವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ “ಸಿರಿ ಕನ್ನಡ” ವಾಹಿನಿಯನ್ನು ಕೊಂಡಾಡಿದರು. ಗೌರಿಗಣೇಶ ಹಬ್ಬದ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಸಿರಿಕನ್ನಡ ವಾಹಿನಿ ಪ್ರಸಾರ ಮಾಡಲಿದೆ. “ಲಿಟಲ್ ಕಿಲಾಡೀಸ್” ಕಾರ್ಯಕ್ರಮದಲ್ಲಿ “ಟಗರು’ ಖ್ಯಾತಿಯ ಮಾನ್ವಿತಾ ಕಾಮತ್ ಎಲ್ಲರ ಮನರಂಜಿಸಲಿದ್ದಾರೆ. ಇನ್ನೂ ಕೆಲವು ಕಾರ್ಯಕ್ರಮಗಳು ಸಹ ಪ್ರಸಾರ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್