AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಕನ್ನಡ ವಾಹಿನಿಯಲ್ಲಿ ಸಾಲು-ಸಾಲು ಮನರಂಜನೆ

Siri Kannada channel: ಕನ್ನಡದ 'ಸಿರಿ ಕನ್ನಡ' ವಾಹಿನಿಯು ಹಲವು ಹೊಸ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ.

ಸಿರಿಕನ್ನಡ ವಾಹಿನಿಯಲ್ಲಿ ಸಾಲು-ಸಾಲು ಮನರಂಜನೆ
ಸಿರಿ ಕನ್ನಡ
ಮಂಜುನಾಥ ಸಿ.
|

Updated on: Sep 16, 2023 | 10:27 PM

Share

ಕನ್ನಡದ ಜನಪ್ರಿಯ ಮನರಂಜನಾ (Entertaining) ಚಾನೆಲ್​ಗಳಲ್ಲಿ ಒಂದಾಗಿರುವ ಸಿರಿ ಕನ್ನಡ (Siri Kannada) ವಾಹನಿಯ ಹಲವು ಹೊಸ ಕಾರ್ಯಕ್ರಮಗಳನ್ನು ಹೊತ್ತು ಬಂದಿದೆ. ಕರ್ನಾಟಕದ ಹೆಸರಾಂತ ಹಾಸ್ಯ ದಿಗ್ಗಜರು ನಡೆಸಿಕೊಡುವ “ಹಾಸ್ಯ ದರ್ಬಾರ್ ಸೀಸನ್ 02” ಹಾಗೂ ತಾಯಿ – ಮಗು ಭಾಗವಹಿಸುವ “ಲಿಟಲ್ ಕಿಲಾಡೀಸ್” ಗೇಮ್ ಶೋ ಆರಂಭ ಆಗಿದೆ. ಹೊಸ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದೆ.

ಸಿರಿಕನ್ನಡ ವಾಹಿನಿಯ ರಾಜೇಶ್ ರಾಜಘಟ್ಟ‌, “ಹಾಸ್ಯ ದರ್ಬಾರ್ ಸೀಸನ್ 2” ನಲ್ಲಿ ಭಾಗಿಯಾಗಿರುವ ಎಲ್ಲಾ ಹಾಸ್ಯ ದಿಗ್ಗಜರು ಹಾಗೂ “ಲಿಟಲ್ ಕಿಲಾಡೀಸ್” ಕಾರ್ಯಕ್ರಮದ ನಿರ್ದೇಶಕ ಮಂಜೇಶ್ ಮಾಹಿತಿ ನೀಡಿದರು. ನಿರೂಪಕಿ ರಶ್ಮಿತಾ ಚಂಗಪ್ಪ ಹಾಜರಿದ್ದರು. ರಾಜೇಶ್ ರಾಜಘಟ್ಟ ಮಾತನಾಡಿ, ”ನಾಡಿನ ಪ್ರತಿಯೊಬ್ಬ ವೀಕ್ಷಕರನ್ನು ತಲುಪುವಂತಹ ಎರಡು ಜನಪ್ರಿಯ ಕಾರ್ಯಕ್ರಮಗಳು ನಮ್ಮ ವಾಹಿನಿಯಲ್ಲಿ ಆರಂಭವಾಗಿದೆ. ಅದರಲ್ಲಿ ನಾಡಿನ ಪ್ರಮುಖ ಹಾಸ್ಯ ದಿಗ್ಗಜರು ನಡೆಸಿಕೊಡುವ ‘ಹಾಸ್ಯ ದರ್ಬಾರ್ ಸೀಸನ್ 2’ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 8 ರಿಂದ 9 ರವರೆಗೂ ಪ್ರಸಾರವಾಗಲಿದೆ. ಹಾಗೂ ಮಕ್ಕಳು ಹಾಗೂ ಅಮ್ಮಂದಿರನ್ನು ಒಂದೇ ವೇದಿಕೆಯಲ್ಲಿ ಒಟ್ಟಾಗಿಸಿ ತಾಯಿ ಮಗುವಿನ ಭಾವುಕತೆ, ಹಾಸ್ಯ, ಆಟಗಳು, ಡ್ರಾಮಾ, ನಾಯಕತ್ವ ಗುಣ ಬೆಳೆಸುವ ಕ್ರಿಯೆಗಳನ್ನು ಈ ಆಟ ಒಳಗೊಂಡಿರಲಿದೆ” ಎಂದರು.

ಇದನ್ನೂ ಓದಿ:ಶುರು ಆಗ್ತಿದೆ ನೂರು ದಿನದ ಹಬ್ಬ: ಬಿಗ್​ಬಾಸ್ 10 ಪ್ರೋಮೋ ಬಿಡುಗಡೆ

” ಲಿಟಲ್ ಕಿಲಾಡೀಸ್” ಗೇಮ್ ಶೋ ಸೋಮವಾರದಿಂದ ಶುಕ್ರವಾರದ ವರೆಗೆ ಸಂಜೆ 6 ರಿಂದ 7 ಗಂಟೆಯವರೆಗೆ ಪ್ರಸಾರ ಆಗಲಿದೆ. ಕಿರುತೆರೆಯ ಜನಪ್ರಿಯ ನಟಿ ರಶ್ಮಿತಾ ಚಂಗಪ್ಪ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಈ ಎರಡು ಕಾರ್ಯಕ್ರಮಗಳು ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾಗಿದೆ ಹಾಗೂ ಉತ್ತಮವಾಗಿ ಮೂಡಿಬರುತ್ತಿದೆ ಮತ್ತು ಜನಮನ್ನಣೆ ಪಡೆದಿದೆ ಎಂದರು.

‘ಹಾಸ್ಯ ದರ್ಬಾರ್ ಸೀಸನ್ 2’ನಲ್ಲಿ ಹಿರೇಮಗಳೂರು ಕಣ್ಣನ್, ಮುಖ್ಯಮಂತ್ರಿ ಚಂದ್ರು, ರಿಚರ್ಡ್ ಲೂಯಿಸ್, ಪ್ರಾಣೇಶ್, ಪ್ರೊ .ಕೃಷ್ಣೇ ಗೌಡ, ಎಂ.ಎಸ್ ನರಸಿಂಹಮೂರ್ತಿ, ಮಿಮಿಕ್ರಿ ದಯಾನಂದ್, ಯಶವಂತ ಸರ್ ದೇಶಪಾಂಡೆ, ಗುಂಡುರಾವ್, ದುಂಡಿರಾಜ್, ನರಸಿಂಹ ಜೋಶಿ, ಮಹಾಮನೆ ಮುಂತಾದವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ “ಸಿರಿ ಕನ್ನಡ” ವಾಹಿನಿಯನ್ನು ಕೊಂಡಾಡಿದರು. ಗೌರಿಗಣೇಶ ಹಬ್ಬದ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಸಿರಿಕನ್ನಡ ವಾಹಿನಿ ಪ್ರಸಾರ ಮಾಡಲಿದೆ. “ಲಿಟಲ್ ಕಿಲಾಡೀಸ್” ಕಾರ್ಯಕ್ರಮದಲ್ಲಿ “ಟಗರು’ ಖ್ಯಾತಿಯ ಮಾನ್ವಿತಾ ಕಾಮತ್ ಎಲ್ಲರ ಮನರಂಜಿಸಲಿದ್ದಾರೆ. ಇನ್ನೂ ಕೆಲವು ಕಾರ್ಯಕ್ರಮಗಳು ಸಹ ಪ್ರಸಾರ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ