AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ

ರತ್ನಮಾಲಾ ಜತೆ ಆದಿ (ರಕ್ಷಿತ್) ಕೂಡ ತೆರಳಿದ್ದಾನೆ ಎಂದು ಕಥೆಯಲ್ಲಿ ತೋರಿಸಲಾಗಿದೆ. ಆದರೆ, ಈಗ ರಕ್ಷಿತ್ ಅವರು ಧಾರಾವಾಹಿಯಿಂದಲೇ ಹೊರ ಬಿದ್ದಿದ್ದಾರೆ.

‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ
ರಕ್ಷಿತ್
TV9 Web
| Edited By: |

Updated on: Jul 18, 2022 | 3:35 PM

Share

ಸ್ಮೈಲ್​ ಗುರು ರಕ್ಷಿತ್ (Smileguru Rakshith) ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಆದಿ ಆಗಿ ಮಿಂಚಿದರು. ಹರ್ಷನ ಸಹೋದರನಾಗಿ, ಸಾನಿಯಾ ಗಂಡನಾಗಿ ಆದಿ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇತ್ತೀಚೆಗೆ ಅವರು ತೆರೆಮೇಲೆ ಕಾಣಿಸಿಕೊಳ್ಳುತ್ತಿರಲಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಈ ವಿಚಾರವನ್ನು ಈಗ ಸ್ವತಃ ರಕ್ಷಿತ್ ಖಚಿತಪಡಿಸಿದ್ದಾರೆ. ವೈಯಕ್ತಿಕ ಕಾರಣ ನೀಡಿ ಅವರು ಧಾರಾವಾಹಿಯಿಂದ ಹೊರ ಬಂದ ಬಗ್ಗೆ ಅವರು ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲೇ ‘ಕನ್ನಡ ಬಿಗ್ ಬಾಸ್ 9’ ಆರಂಭ ಆಗುತ್ತಿದೆ. ದೊಡ್ಮನೆ ಒಳಗೆ ಹೋಗೋಕೆ ಅವರು ‘ಕನ್ನಡತಿ’ ಧಾರಾವಾಹಿ ತೊರೆದರಾ ಎಂಬ ಪ್ರಶ್ನೆ ಮೂಡಿದೆ.

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷನ ತಾಯಿ ರತ್ನಮಾಲಾಗೆ ಅನಾರೋಗ್ಯ ಕಾಡಿದೆ. ರತ್ನಮಾಲಾಗೆ ಚಿಕಿತ್ಸೆ ನೀಡಲು ಅಮೆರಿಕಕ್ಕೆ ಕರೆದುಕೊಂಡು ಹೋಗಲಾಗಿದೆ. ರತ್ನಮಾಲಾ ಜತೆ ಆದಿ (ರಕ್ಷಿತ್) ಕೂಡ ತೆರಳಿದ್ದಾನೆ ಎಂದು ಕಥೆಯಲ್ಲಿ ತೋರಿಸಲಾಗಿದೆ. ಆದರೆ, ಈಗ ರಕ್ಷಿತ್ ಅವರು ಧಾರಾವಾಹಿಯಿಂದಲೇ ಹೊರ ಬಿದ್ದಿದ್ದಾರೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​
Image
‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

‘ಕನ್ನಡತಿ ಯಾವಾಗಲೂ ಮತ್ತು ಎಂದೆಂದಿಗೂ ವಿಶೇಷ. ವೈಯಕ್ತಿಕ ಕಾರಣಗಳಿಂದ ನಾನು ಈ ಧಾರಾವಾಹಿಯಿಂದ ಹೊರ ಬಂದಿದ್ದೇನೆ. 6 ವರ್ಷಗಳ ಕಾಲ ನಿರಂತರವಾಗಿ ಕೆಲಸ ನೀಡಿದ್ದಕ್ಕೆ ಕಲರ್ಸ್​ ಕನ್ನಡಕ್ಕೆ ಧನ್ಯವಾದ. ನನ್ನನ್ನು ಸಹಿಸಿಕೊಂಡಿದ್ದಕ್ಕೆ ಪರಮೇಶ್ವರ್ ಗುಂಡ್ಕಲ್​ಗೆ ಧನ್ಯವಾದ. ಇದು ಸಣ್ಣ ಗ್ಯಾಪ್ ಅಷ್ಟೇ. ನಾನು ಮತ್ತೆ ಕಂಬ್ಯಾಕ್ ಮಾಡುತ್ತೇನೆ. ಮಿಸ್ ಮಾಡಿಕೊಳ್ಳಿ ಮತ್ತು ಹಾರೈಸಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಹರ್ಷ-ಭುವಿ ಮದುವೆಯಿಂದ ಅರ್ಧಕ್ಕೆ ನಿರ್ಗಮಿಸಿದ ‘ಕನ್ನಡತಿ’ಯ ರತ್ನಮಾಲಾ ನಿಜಕ್ಕೂ ಇರೋದೆಲ್ಲಿ? ಇಲ್ಲಿದೆ ಉತ್ತರ

‘ಕನ್ನಡ ಬಿಗ್ ಬಾಸ್ ಸೀಸನ್ 9’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತೀಚೆಗೆ ಸುದೀಪ್ ಅವರು ಈ ಶೋನ ಪ್ರೋಮೋ ಶೂಟ್ ಮಾಡಿಸಿದ್ದಾರೆ. ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ದೊಡ್ಮನೆ ಸೇರುವ ಸ್ಪರ್ಧಿಗಳಲ್ಲಿ ರಕ್ಷಿತ್ ಕೂಡ ಒಬ್ಬರಾಗಿರುತ್ತಾರೆ ಎಂದು ಕೆಲವರು ಊಹಿಸಿದ್ದಾರೆ. ಆದರೆ ಸದ್ಯಕ್ಕಂತೂ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಇಲ್ಲ ಎಂಬ ಬೇಸರ ವೀಕ್ಷಕರನ್ನು ಅತಿಯಾಗಿ ಕಾಡುತ್ತಿದೆ. ರಕ್ಷಿತ್ ಅವರು ‘ಸ್ಮೈಲ್ ಗುರು’ ಹೆಸರಿನ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಇದರ ಕೆಲಸದ ಕಾರಣದಿಂದಲೂ ಅವರು ಬ್ರೇಕ್ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ