AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಕಪಿಲ್​ ಶರ್ಮಾಗೆ ಈ ವಿಚಾರ ತಿಳಿದು ಹೊರಗೆ ಇದ್ದ ಗಾರ್ಡ್ಸ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ನಂತರ ಅವರು ಸ್ಮೃತಿ ಇರಾನಿಗೆ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?
ಸ್ಮೃತಿ ಇರಾನಿ
TV9 Web
| Edited By: |

Updated on: Nov 26, 2021 | 6:12 PM

Share

ಕಪಿಲ್​ ಶರ್ಮಾ ನಡೆಸಿಕೊಡುತ್ತಿರುವ ‘ದಿ ಕಪಿಲ್​ ಶರ್ಮಾ ಶೋ’ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಸಿನಿಮಾಗೆ ಪ್ರಚಾರ ಮಾಡಿ ಹೋಗಿದ್ದಾರೆ. ಸೋನು ಸೂದ್, ಅಕ್ಷಯ್​ ಕುಮಾರ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಕಪಿಲ್​ ಶರ್ಮಾ ಶೋನಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರಿಗೆ ಭಾರೀ ಮುಖಭಂಗವಾಗಿದೆ. ಅವರಿಗೆ ಸೆಟ್​ ಒಳಗೆ ತೆರಳೋಕೆ ಎಂಟ್ರಿ ಸಿಕ್ಕಿಲ್ಲ. ಹೀಗಾಗಿ, ಅವರು ದೆಹಲಿಗೆ ಮರಳಿದ್ದಾರೆ.

ಸ್ಮೃತಿ ಇರಾನಿ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡವರು. ನಂತರ ಅವರು ರಾಜಕೀಯಕ್ಕೆ ಬಂದು ಯಶಸ್ಸು ಕಂಡರು. ಈಗ ಅವರು ಲೇಖಕಿ ಕೂಡ ಆಗುತ್ತಿದ್ದಾರೆ. ಹಲವು ವರ್ಷಗಳ ಶ್ರಮದಿಂದ ‘ಲಾಲ್​ ಸಲಾಮ್​’ ಹೆಸರಿನ ಪುಸ್ತಕ ಬರೆದಿದ್ದಾರೆ. ಇದರ ಪ್ರಚಾರಕ್ಕಾಗಿ ಅವರು ಕಪಿಲ್​ ಶರ್ಮಾ ಶೋಗೆ ಬರಬೇಕಿತ್ತು. ಆದರೆ, ಭದ್ರತಾ ಸಿಬ್ಬಂದಿ ಅವರನ್ನು ಒಳಗೆಬಿಟ್ಟುಕೊಂಡಿಲ್ಲ.

ಒಂದು ಗಂಟೆ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಾಗಿ ಸ್ಮೃತಿ ಅವರು ಹೇಳಿದ್ದರು. ದೆಹಲಿಯಿಂದ ಅವರು ಮುಂಬೈಗೆ ಬಂದಿದ್ದರು. ಆದರೆ, ಶೋಗೆ ಬರುವಾಗ ಅವರು ಏಕಾಂಗಿಯಾಗಿ ಬಂದಿದ್ದರು. ಯಾವುದೇ ಭದ್ರತಾ ಸಿಬ್ಬಂದಿಯನ್ನು ಜತೆಯಲ್ಲಿ ಇಟ್ಟುಕೊಂಡಿರಲಿಲ್ಲ. ಸೆಟ್​ ಬಳಿ ಬಂದು ‘ನಾನು ಸ್ಮೃತಿ ಇರಾನಿ. ಕಾರ್ಯಕ್ರಮಕ್ಕೆ ನಾನು ಇಂದು ಅತಿಥಿಯಾಗಿ ಬಂದಿದ್ದೇನೆ. ಹೀಗಾಗಿ ಒಳಗೆ ಬಿಡಿ’ ಎಂದು ಕೋರಿದ್ದಾರೆ. ಯಾವುದೇ ಭದ್ರತೆ ಇಲ್ಲದೆ ಬಂದಿದ್ದನ್ನು ನೋಡಿ ಸೆಟ್​ನ ಹೊರಗೆ ನಿಂತಿದ್ದ ಗಾರ್ಡ್ಸ್​​​ಗೆ ಅನುಮಾನ ಬಂದಿದೆ. ಸ್ಮೃತಿ ಪರಿಪರಿಯಾಗಿ ವಿವರಿಸಿದರೂ ಒಳಗೆ ಬಿಡೋಕೆ ನಿರಾಕರಿಸಿದ್ದಾರೆ. ಅರ್ಧಗಂಟೆ ಕಾದ ನಂತರ ಸಿಟ್ಟಿನಿಂದಲೇ ಅವರು  ದೆಹಲಿಗೆ ಮರಳಿದ್ದಾರೆ ಎಂದು ವರದಿ ಆಗಿದೆ.

ಕಪಿಲ್​ ಶರ್ಮಾಗೆ ಈ ವಿಚಾರ ತಿಳಿದು ಹೊರಗೆ ಇದ್ದ ಗಾರ್ಡ್ಸ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ನಂತರ ಅವರು ಸ್ಮೃತಿ ಇರಾನಿಗೆ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಮತ್ತೆ ಸ್ಮೃತಿ ಇರಾನಿ ಕಾರ್ಯಕ್ರಮಕ್ಕೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಐಟಿ ದಾಳಿ ಬಗ್ಗೆ ಮಾತಾಡಿ ಸೋನು ಸೂದ್​ಗೆ ಕುಟುಕಿದ ಕಪಿಲ್​ ಶರ್ಮಾ; ರಿಯಲ್​ ಹೀರೋ ಪ್ರತಿಕ್ರಿಯೆ ಹೇಗಿತ್ತು?

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು