AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಕಪಿಲ್​ ಶರ್ಮಾಗೆ ಈ ವಿಚಾರ ತಿಳಿದು ಹೊರಗೆ ಇದ್ದ ಗಾರ್ಡ್ಸ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ನಂತರ ಅವರು ಸ್ಮೃತಿ ಇರಾನಿಗೆ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?
ಸ್ಮೃತಿ ಇರಾನಿ
TV9 Web
| Edited By: |

Updated on: Nov 26, 2021 | 6:12 PM

Share

ಕಪಿಲ್​ ಶರ್ಮಾ ನಡೆಸಿಕೊಡುತ್ತಿರುವ ‘ದಿ ಕಪಿಲ್​ ಶರ್ಮಾ ಶೋ’ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಸಿನಿಮಾಗೆ ಪ್ರಚಾರ ಮಾಡಿ ಹೋಗಿದ್ದಾರೆ. ಸೋನು ಸೂದ್, ಅಕ್ಷಯ್​ ಕುಮಾರ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಕಪಿಲ್​ ಶರ್ಮಾ ಶೋನಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರಿಗೆ ಭಾರೀ ಮುಖಭಂಗವಾಗಿದೆ. ಅವರಿಗೆ ಸೆಟ್​ ಒಳಗೆ ತೆರಳೋಕೆ ಎಂಟ್ರಿ ಸಿಕ್ಕಿಲ್ಲ. ಹೀಗಾಗಿ, ಅವರು ದೆಹಲಿಗೆ ಮರಳಿದ್ದಾರೆ.

ಸ್ಮೃತಿ ಇರಾನಿ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡವರು. ನಂತರ ಅವರು ರಾಜಕೀಯಕ್ಕೆ ಬಂದು ಯಶಸ್ಸು ಕಂಡರು. ಈಗ ಅವರು ಲೇಖಕಿ ಕೂಡ ಆಗುತ್ತಿದ್ದಾರೆ. ಹಲವು ವರ್ಷಗಳ ಶ್ರಮದಿಂದ ‘ಲಾಲ್​ ಸಲಾಮ್​’ ಹೆಸರಿನ ಪುಸ್ತಕ ಬರೆದಿದ್ದಾರೆ. ಇದರ ಪ್ರಚಾರಕ್ಕಾಗಿ ಅವರು ಕಪಿಲ್​ ಶರ್ಮಾ ಶೋಗೆ ಬರಬೇಕಿತ್ತು. ಆದರೆ, ಭದ್ರತಾ ಸಿಬ್ಬಂದಿ ಅವರನ್ನು ಒಳಗೆಬಿಟ್ಟುಕೊಂಡಿಲ್ಲ.

ಒಂದು ಗಂಟೆ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಾಗಿ ಸ್ಮೃತಿ ಅವರು ಹೇಳಿದ್ದರು. ದೆಹಲಿಯಿಂದ ಅವರು ಮುಂಬೈಗೆ ಬಂದಿದ್ದರು. ಆದರೆ, ಶೋಗೆ ಬರುವಾಗ ಅವರು ಏಕಾಂಗಿಯಾಗಿ ಬಂದಿದ್ದರು. ಯಾವುದೇ ಭದ್ರತಾ ಸಿಬ್ಬಂದಿಯನ್ನು ಜತೆಯಲ್ಲಿ ಇಟ್ಟುಕೊಂಡಿರಲಿಲ್ಲ. ಸೆಟ್​ ಬಳಿ ಬಂದು ‘ನಾನು ಸ್ಮೃತಿ ಇರಾನಿ. ಕಾರ್ಯಕ್ರಮಕ್ಕೆ ನಾನು ಇಂದು ಅತಿಥಿಯಾಗಿ ಬಂದಿದ್ದೇನೆ. ಹೀಗಾಗಿ ಒಳಗೆ ಬಿಡಿ’ ಎಂದು ಕೋರಿದ್ದಾರೆ. ಯಾವುದೇ ಭದ್ರತೆ ಇಲ್ಲದೆ ಬಂದಿದ್ದನ್ನು ನೋಡಿ ಸೆಟ್​ನ ಹೊರಗೆ ನಿಂತಿದ್ದ ಗಾರ್ಡ್ಸ್​​​ಗೆ ಅನುಮಾನ ಬಂದಿದೆ. ಸ್ಮೃತಿ ಪರಿಪರಿಯಾಗಿ ವಿವರಿಸಿದರೂ ಒಳಗೆ ಬಿಡೋಕೆ ನಿರಾಕರಿಸಿದ್ದಾರೆ. ಅರ್ಧಗಂಟೆ ಕಾದ ನಂತರ ಸಿಟ್ಟಿನಿಂದಲೇ ಅವರು  ದೆಹಲಿಗೆ ಮರಳಿದ್ದಾರೆ ಎಂದು ವರದಿ ಆಗಿದೆ.

ಕಪಿಲ್​ ಶರ್ಮಾಗೆ ಈ ವಿಚಾರ ತಿಳಿದು ಹೊರಗೆ ಇದ್ದ ಗಾರ್ಡ್ಸ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ನಂತರ ಅವರು ಸ್ಮೃತಿ ಇರಾನಿಗೆ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಮತ್ತೆ ಸ್ಮೃತಿ ಇರಾನಿ ಕಾರ್ಯಕ್ರಮಕ್ಕೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಐಟಿ ದಾಳಿ ಬಗ್ಗೆ ಮಾತಾಡಿ ಸೋನು ಸೂದ್​ಗೆ ಕುಟುಕಿದ ಕಪಿಲ್​ ಶರ್ಮಾ; ರಿಯಲ್​ ಹೀರೋ ಪ್ರತಿಕ್ರಿಯೆ ಹೇಗಿತ್ತು?

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ