AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ; ಧಾರಾವಾಹಿ ಫಸ್ಟ್ ಲುಕ್ ವೈರಲ್

ಹೊಸ ರೂಪದಲ್ಲಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಧಾರಾವಾಹಿ ಪ್ರಸಾರಕ್ಕೆ ಸಜ್ಜಾಗಿದೆ. ನಟಿ ಸ್ಮೃತಿ ಇರಾನಿ ಅವರು ಈ ಧಾರಾವಾಹಿ ಮೂಲಕ ಮತ್ತೆ ನಟನೆಗೆ ಮರಳುತ್ತಿದ್ದಾರೆ. ಸ್ಮೃತಿ ಇರಾನಿ ಅವರ ತುಳಸಿ ಪಾತ್ರದ ಫಸ್ಟ್ ಲುಕ್ ವೈರಲ್ ಆಗಿದೆ. ಇದನ್ನು ನೋಡಿ ಅಭಿಮಾನಿಗಳು ಖುಷಿ ಆಗಿದ್ದಾರೆ.

ಮತ್ತೆ ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ; ಧಾರಾವಾಹಿ ಫಸ್ಟ್ ಲುಕ್ ವೈರಲ್
Smriti Irani
ಮದನ್​ ಕುಮಾರ್​
|

Updated on: Jul 07, 2025 | 8:37 PM

Share

ಬಣ್ಣದ ಲೋಕದಲ್ಲಿ ಮಿಂಚಿದ್ದ ನಟಿ ಸ್ಮೃತಿ ಇರಾನಿ (Smriti Irani) ಅವರು ರಾಜಕೀಯದಲ್ಲೂ ಯಶಸ್ಸು ಕಂಡರು. ಸಂಸದೆಯಾಗಿ, ಸಚಿವೆಯಾಗಿ ಕೆಲಸ ಮಾಡಿದರು. ಕಿರುತೆರೆ ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ ಅವರಿಗೆ ದೇಶವ್ಯಾಪಿ ಜನಪ್ರಿಯತೆ ಸಿಕ್ಕಿತ್ತು. ಹಿಂದಿಯ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ (Kyunki Saas Bhi Kabhi Bahu Thi) ಧಾರಾವಾಹಿಯಲ್ಲಿ ನಟಿಸಿ ಅವರು ಫೇಮಸ್ ಆಗಿದ್ದರು. ರಾಜಕೀಯಕ್ಕೆ ಕಾಲಿಟ್ಟ ನಂತರ ಅವರು ಬಣ್ಣದ ಲೋಕದಿಂದ ದೂರ ಉಳಿದುಕೊಂಡಿದ್ದರು. ಈಗ ಮತ್ತೆ ಅವರು ನಟನೆಗೆ ಮರಳುತ್ತಿದ್ದಾರೆ. ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಸೀರಿಯಲ್​ (Tv Serial)​ ಮೂಲಕವೇ ಸ್ಮೃತಿ ಇರಾನಿ ಅವರು ಕಮ್​ಬ್ಯಾಕ್ ಮಾಡುತ್ತಿದ್ದಾರೆ.

ಭಾರತದ ಕಿರುತೆರೆ ಲೋಕದಲ್ಲಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದಿತ್ತು. ಏಕ್ತಾ ಕಪೂರ್ ನಿರ್ಮಾಣ ಮಾಡಿದ ಈ ಸೀರಿಯಲ್ 2000ನೇ ಇಸವಿಯ ಜುಲೈ 3ರಿಂದ 2008ರ ನವೆಂಬರ್ 6ರ ತನಕ ಪ್ರಸಾರ ಆಗಿತ್ತು. ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಈ ಸೀರಿಯಲ್ ಬಿತ್ತರವಾಗಿತ್ತು. ಒಟ್ಟು 1,800 ಸಂಚಿಕೆಗಳು ಪ್ರಸಾರವಾಗಿದ್ದವು.

ಈಗ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಧಾರಾವಾಹಿ ಹೊಸ ರೂಪದಲ್ಲಿ ಬರಲು ಸಜ್ಜಾಗಿದೆ. ಇದರಲ್ಲಿ ಸ್ಮೃತಿ ಇರಾನಿ ಅವರು ಒಂದು ಪ್ರಮುಖ ಪಾತ್ರ ಮಾಡಲಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಬಾರಿಯೂ ಸ್ಮೃತಿ ಇರಾನಿ ಅವರು ತುಳಸಿ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ಅವರನ್ನು ಮತ್ತೆ ಕಿರುತೆರೆಯಲ್ಲಿ ನೋಡಲು ಫ್ಯಾನ್ಸ್ ಕಾತರರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಸ್ಮೃತಿ ಇರಾನಿ ಅವರು ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಧಾರಾವಾಹಿಯ 25ನೇ ವರ್ಷವನ್ನು ಸಂಭ್ರಮಿಸಿದ್ದರು. ‘25 ವರ್ಷಗಳ ಹಿಂದೆ ಭಾರತದ ಮನೆಗಳಿಗೆ ಈ ಕಥೆ ತಲುಪಿತ್ತು. ಅಸಂಖ್ಯಾತ ಜನರ ಬದುಕಿನ ಭಾಗವೇ ಆಗಿತ್ತು. ಅದು ಕೇವಲ ಧಾರಾವಾಹಿ ಆಗಿರಲಿಲ್ಲ. ಅದು ಭಾವನೆ, ನೆನಪು ಮತ್ತು ಆಚರಣೆಯೇ ಆಯಿತು’ ಎಂದು ಸ್ಮೃತಿ ಇರಾನಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಧಾರಾವಾಹಿ ಚಿತ್ರೀಕರಣ ಪ್ರಾರಂಭಿಸಿದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

‘ಆ ಸಮಯದಲ್ಲಿ ಕುಟುಂಬದವರು ಎಲ್ಲ ಕೆಲಸ ನಿಲ್ಲಿಸಿ, ಜೊತೆಯಾಗಿ ಕುಳಿತು ನಗುತ್ತಿದ್ದರು, ಅಳುತ್ತಿದ್ದರು. ತುಳಸಿ ಎಂಬ ಪಾತ್ರವನ್ನು ತಮ್ಮದೇ ಕುಟುಂಬದ ವ್ಯಕ್ತಿ ಎಂದು ಪರಿಗಣಿಸಿದ ಎಲ್ಲ ವೀಕ್ಷಕರಿಗೆ ಧನ್ಯವಾದಗಳು. ಇದು ಕೇವಲ ನನ್ನ ಜರ್ನಿ ಆಗಿರಲಿಲ್ಲ. ಇದು ನಮ್ಮೆಲ್ಲರದ್ದೂ ಆಗಿತ್ತು. ಸದಾ ನಮ್ಮೆಲ್ಲರದ್ದೂ ಆಗಿರಲಿದೆ’ ಎಂದು ಸ್ಮೃತಿ ಇರಾನಿ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು