AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ನೇಹಿತ್ ಮೂರ್ಖತನಕ್ಕೆ ಅವರೇ ಸಾಟಿ’; ಯಾರೇ ಹೇಳಿದರೂ ಬದಲಾಗುವುದಿಲ್ಲ ಈ ವ್ಯಕ್ತಿ

ಬಿಗ್ ಬಾಸ್​ನಲ್ಲಿ ಸ್ನೇಹಿತ್ ಗೌಡ ಉತ್ತಮ ಆಟಗಾರನಾಗಿ ಗುರುತಿಸಿಕೊಳ್ಳಬೇಕಿತ್ತು. ಆದರೆ, ವಿನಯ್ ಗೌಡ ಹಾಗೂ ನಮ್ರತಾ ಅವರ ಜೊತೆ ಕ್ಲೋಸ್ ಆಗುವ ಪ್ರಯತ್ನದಲ್ಲಿ ಅವರು ತಮ್ಮತನವನ್ನು ಕಳೆದುಕೊಂಡಿದ್ದಾರೆ. ಏಳು ವಾರಗಳ ಆಟದಲ್ಲಿ ಅವರು ಎಂದಿಗೂ ತಮ್ಮ ಆಟವನ್ನು ತೋರಿಸಿಯೇ ಇಲ್ಲ.

‘ಸ್ನೇಹಿತ್ ಮೂರ್ಖತನಕ್ಕೆ ಅವರೇ ಸಾಟಿ’; ಯಾರೇ ಹೇಳಿದರೂ ಬದಲಾಗುವುದಿಲ್ಲ ಈ ವ್ಯಕ್ತಿ
ಸ್ನೇಹಿತ್ ಗೌಡ
ರಾಜೇಶ್ ದುಗ್ಗುಮನೆ
|

Updated on:Nov 25, 2023 | 10:45 AM

Share

ಬಿಗ್ ಬಾಸ್​ನಲ್ಲಿ (Bigg Boss) ಪ್ರತಿ ವಾರ ಉತ್ತಮ ಹಾಗೂ ಕಳಪೆ ನೀಡಲಾಗುತ್ತದೆ. ಕಳಪೆ ನೀಡಿದವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಉತ್ತಮ ಸಿಕ್ಕವರಿಗೆ ಮೆಡಲ್ ಸಿಗುತ್ತದೆ. ಇದನ್ನು ಯಾರು, ಯಾರೊಂದಿಗೂ ಚರ್ಚೆ ಮಾಡುವಂತೆ ಇಲ್ಲ. ಆದರೆ, ಸ್ನೇಹಿತ್ ಅವರು ಈ ಮೊದಲು ಮನೆ ಮಂದಿಯ ಜೊತೆ ಚರ್ಚೆ ಮಾಡಿದ್ದರು. ಈ ಬಗ್ಗೆ ಸುದೀಪ್ ಬುದ್ಧಿವಾದ ಹೇಳಿದ್ದರು. ಬಿಗ್ ಬಾಸ್ ನಿಯಮ ಈ ರೀತಿ ಎಂದು ತಿದ್ದಿದ್ದರು. ಆದರೂ, ಅವರು ಬದಲಾಗಲೇ ಇಲ್ಲ. ಇದು ಅವರ ಮೂರ್ಖತನ ಎಂದು ಅನೇಕರು ಕರೆದಿದ್ದಾರೆ.

ಬಿಗ್ ಬಾಸ್​ನಲ್ಲಿ ಸ್ನೇಹಿತ್ ಗೌಡ ಉತ್ತಮ ಆಟಗಾರನಾಗಿ ಗುರುತಿಸಿಕೊಳ್ಳಬೇಕಿತ್ತು. ಆದರೆ, ವಿನಯ್ ಗೌಡ ಹಾಗೂ ನಮ್ರತಾ ಅವರ ಜೊತೆ ಕ್ಲೋಸ್ ಆಗುವ ಪ್ರಯತ್ನದಲ್ಲಿ ಅವರು ತಮ್ಮತನವನ್ನು ಕಳೆದುಕೊಂಡಿದ್ದಾರೆ. ಏಳು ವಾರಗಳ ಆಟದಲ್ಲಿ ಅವರು ಎಂದಿಗೂ ತಮ್ಮ ಆಟವನ್ನು ತೋರಿಸಿಯೇ ಇಲ್ಲ. ಅವರು ಈಗಾಗಲೇ ಬಿಗ್ ಬಾಸ್​ ಮನೆಯಿಂದ ಔಟ್ ಆಗಿರಬೇಕಿತ್ತು ಎಂಬುದು ಅನೇಕರ ಅಭಿಪ್ರಾಯ. ಅವರು ತಲೆಯಲ್ಲಿ ಬುದ್ಧಿ ಇಲ್ಲದೆ ಆಡುತ್ತಿದ್ದಾರೆ ಎಂದು ಕೂಡ ಅನೇಕರು ಮಾತನಾಡಿದ್ದಾರೆ.

ನಮ್ರತಾ, ವಿನಯ್ ಹಾಗೂ ಸ್ನೇಹಿತ್ ಕುಳಿತಿದ್ದರು. ಈ ವೇಳೆ ಸ್ನೇಹಿತ್ ಉತ್ತಮ ಯಾರಿಗೆ ನೀಡಬೇಕು ಎನ್ನುವ ಚರ್ಚೆ ತೆಗೆದಿದ್ದಾರೆ. ‘ಕಾರ್ತಿಕ್ ಒಳ್ಳೆಯ ರೀತಿಯ ಆಟ ಆಡಿದ್ದಾರೆ. ಅವರ ಬಗ್ಗೆ ಜನರಿಗೆ ಸಿಂಪತಿ ಇದೆ. ಅವರಿಗೆ ಈ ವಾರ ನಾವು ಕಳಪೆ ನೀಡೋದು ಬೇಡ. ನಾವು ಪ್ರತಾಪ್​ನ ಹೀರೋ ಮಾಡಿದ್ದು ಹಾಗೆಯೇ. ಕಾರ್ತಿಕ್​ಗೆ ಕಳಪೆ ನೀಡಿದರೆ ಅವರಿಗೇ ಹೆಚ್ಚು ಫೂಟೇಜ್ ಸಿಗುತ್ತದೆ’ ಎಂದಿದ್ದಾರೆ ಸ್ನೇಹಿತ್.

ಇದನ್ನೂ ಓದಿ: ‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​

ಈ ವಿಚಾರಗಳನ್ನು ಚರ್ಚೆ ಮಾಡುವಂತಿಲ್ಲ ಎಂದು ಪದೇ ಪದೇ ಹೇಳಿದರೂ ಸ್ನೇಹಿತ್ ಅದೇ ತಪ್ಪನ್ನು ಮಾಡುತ್ತಿದ್ದಾರೆ. ‘ಸ್ನೇಹಿತ್ ಮೂರ್ಖತನಕ್ಕೆ ಸ್ನೇಹಿತ್ ಅವರೇ ಸಾಕ್ಷಿ’ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 25 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು