AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಾಪ್​ ಬಗ್ಗೆ ತಪ್ಪು ತಿಳಿದುಕೊಂಡಿದ್ದೆ, ಫಿನಾಲೆಯಲ್ಲಿ ಸುದೀಪ್ ಪಕ್ಕ ಅವನಿರ್ತಾನೆ’; ಸ್ನೇಹಿತ್ ಗೌಡ

ವಿನಯ್ ಹಾಗೂ ನಮ್ರತಾ ಜೊತೆ ಸದಾ ಇರುತ್ತಿದ್ದ ಸ್ನೇಹಿತ್ ಅವರು ಪ್ರತಾಪ್​ನ ಸ್ಪರ್ಧಿ ಎಂದೇ ಪರಿಗಣಿಸಿ ಇರಲಿಲ್ಲ. ಆದರೆ, ಹೊರ ಬಂದ ಬಳಿಕ ಅವರಿಗೆ ನಿಜವಾದ ವಿಚಾರ ಏನು, ಅವರ ಬಗ್ಗೆ ಯಾವ ರೀತಿಯ ಅಭಿಪ್ರಾಯ ಇದೆ ಅನ್ನೋದು ಗೊತ್ತಾಗಿದೆ. ಇದನ್ನು ಸ್ನೇಹಿತ್ ಅವರು ಒಪ್ಪಿಕೊಂಡಿದ್ದಾರೆ.

‘ಪ್ರತಾಪ್​ ಬಗ್ಗೆ ತಪ್ಪು ತಿಳಿದುಕೊಂಡಿದ್ದೆ, ಫಿನಾಲೆಯಲ್ಲಿ ಸುದೀಪ್ ಪಕ್ಕ ಅವನಿರ್ತಾನೆ’; ಸ್ನೇಹಿತ್ ಗೌಡ
ಪ್ರತಾಪ್, ಸಂಗೀತಾ, ಸ್ನೇಹಿತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 18, 2023 | 12:07 PM

Share

ಬಿಗ್ ಬಾಸ್ (Bigg Boss) ಒಳಗಿದ್ದು ಆಡುವವರಿಗೆ ಹೊರಗಿನ ಪ್ರಪಂಚದಲ್ಲಿ ಏನು ನಡೆಯುತ್ತಿದೆ ಅನ್ನೋದು ಗೊತ್ತಾಗುವುದಿಲ್ಲ. ಯಾವ ಸ್ಪರ್ಧಿಗಳ ಬಗ್ಗೆ ಯಾವ ರೀತಿಯ ಅಭಿಪ್ರಾಯ ಇದೆ ಅನ್ನೋದು ತಿಳಿಯುವುದಿಲ್ಲ. ಒಮ್ಮೆ ಅದು ಗೊತ್ತಾದರೆ ಆಟದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಆ ವಿಚಾರ ಗೊತ್ತಾಗದಂತೆ ನೋಡಿಕೊಳ್ಳಲಾಗುತ್ತದೆ. ಬಿಗ್ ಬಾಸ್ ಒಳಗಿರೋ ಅನೇಕರು ಡ್ರೋನ್ ಪ್ರತಾಪ್ ಅವರನ್ನು ವಿರೋಧಿಸುತ್ತಿದ್ದಾರೆ. ಹೊರಗೆ ಬಂದವರಿಗೆ ನಿಜ ವಿಚಾರ ಏನು ಅನ್ನೋದು ಗೊತ್ತಾಗುತ್ತದೆ. ಸ್ನೇಹಿತ್​ ಗೌಡ ಅವರಿಗೂ ಈ ಬಗ್ಗೆ ಜ್ಞಾನೋದಯ ಆಗಿದೆ.

ಸ್ನೇಹಿತ್ ಗೌಡ ಅವರು ಬಿಗ್ ಬಾಸ್​ನಲ್ಲಿ ಎರಡು ತಿಂಗಳಿಗೂ ಅಧಿಕ ಕಾಲ ಇದ್ದರು. ಅವರು ಇದ್ದಷ್ಟು ದಿನ ಪ್ರತಾಪ್ ಅವರನ್ನು ವಿರೋಧಿಸುತ್ತಾ ಬಂದರು. ವಿನಯ್ ಹಾಗೂ ನಮ್ರತಾ ಜೊತೆ ಸದಾ ಇರುತ್ತಿದ್ದ ಅವರು ಪ್ರತಾಪ್​ನ ಸ್ಪರ್ಧಿ ಎಂದೇ ಪರಿಗಣಿಸಿ ಇರಲಿಲ್ಲ. ಆದರೆ, ಹೊರ ಬಂದ ಬಳಿಕ ಅವರಿಗೆ ನಿಜವಾದ ವಿಚಾರ ಏನು, ಅವರ ಬಗ್ಗೆ ಯಾವ ರೀತಿಯ ಅಭಿಪ್ರಾಯ ಇದೆ ಅನ್ನೋದು ಗೊತ್ತಾಗಿದೆ. ಇದನ್ನು ಸ್ನೇಹಿತ್ ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆಯಲ್ಲಿ ಪ್ರತಾಪ್ ಇರುತ್ತಾರೆ ಅನ್ನೋ ನಂಬಿಕೆ ಸ್ನೇಹಿತ್​​ಗೆ ಬಂದಿದೆ.

ಬಿಗ್ ಬಾಸ್ ಒಳಗೆ ಗೌರಿಶ್ ಅಕ್ಕಿ ಸ್ಪರ್ಧಿ ಆಗಿ ತೆರಳಿದ್ದರು. ಆದರೆ, ಬಹುಬೇಗ ಅವರು ದೊಡ್ಮನೆಯಿಂದ ಬಂದರು. ಅವರ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಪ್ರತಾಪ್ ಬಗ್ಗೆ ಇರುವ ಅಭಿಪ್ರಾಯ ಬದಲಾದ ಬಗ್ಗೆ ಸ್ನೇಹಿತ್ ಮಾತನಾಡಿದ್ದಾರೆ. ಪ್ರತಾಪ್​ನ ಅವರು ಬಾಯ್ತುಂಬ ಹೊಗಳಿದ್ದಾರೆ.

‘ಗೇಮ್​ನ ಪ್ರತಾಪ್​ನಷ್ಟು ಅರ್ಥ ಮಾಡಿಕೊಂಡವರು ಯಾರೂ ಇಲ್ಲ. ನಾವು ಹೊಡೆದುಕೊಂಡು, ರಕ್ತ ಸುರಿಸಿ ಆಟ ಆಡಿದೆವು. ನಾವೆಲ್ಲ ಹೊರಗೆ ಇದ್ದೇವೆ. ಆದರೆ, ಅವನು ಒಳಗೆ ಇದ್ದಾನೆ. ಅವನು ಎಲ್ಲಿಯೂ ಫಿಸಿಕಲ್ ಆಡ್ತಾ ಇಲ್ಲ. ನಾವು ರೋಡಿಸ್ ಆಡಿದೆವು. ಪ್ರತಾಪ್ ಬಿಗ್ ಬಾಸ್ ಆಡ್ತಾ ಇದಾನೆ. ಬಿಗ್ ಬಾಸ್​ ಫಿನಾಲೆ ಹೋಗೋರಲ್ಲಿ ಪ್ರತಾಪ್ ಮೊದಲು ಇರ್ತಾನೆ. ಸುದೀಪ್ ಸರ್ ಕೈಯಲ್ಲಿ ಒಂದು ಕೈ ಪ್ರತಾಪ್​ದಾಗಿರುತ್ತದೆ’ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಸ್ನೇಹಿತ್.

ಇದನ್ನೂ ಓದಿ: ‘ಬಿಗ್​ ಬಾಸ್​ನ ಮಾವುತ ಅವಿನಾಶ್​ ಅಲ್ಲ, ಪ್ರತಾಪ್​’; ಹೊಸ ಬಿರುದು ನೀಡಿದ ಸುದೀಪ್

ಪ್ರತಾಪ್ ಅವರ ಬಗ್ಗೆ ಹೊರ ಜಗತ್ತಿನಲ್ಲಿ ಬೇರೆಯದೇ ರೀತಿಯ ಅಭಿಪ್ರಾಯ ಇತ್ತು. ಡ್ರೋನ್​ ತಯಾರಿಸಿದ್ದಾಗಿ ಸುಳ್ಳು ಹೇಳಿದ್ದರು. ಅವರು ಬಿಗ್ ಬಾಸ್ ಹೋದಾಗ ಅನೇಕರು ಟೀಕಿಸಿದ್ದರು. ಆದರೆ, ದೊಡ್ಮನೆಗೆ ಹೋದ ಬಳಿಕ ಅವರು ತಮ್ಮ ನಿಜವಾದ ಆಟ ತೋರಿಸಿದರು. ಸೈಲೆಂಟ್ ಆಗಿದ್ದರೂ ಮೆಚ್ಚುಗೆ ಆಗುವ ರೀತಿಯಲ್ಲಿ ಅವರು ಆಟ ಆಡಿದರು. ಈ ಮೂಲಕ ಅನೇಕರಿಗೆ ಅವರು ಅಚ್ಚರಿ ಮೂಡಿಸಿದರು. ಫಿನಾಲೆ ತಲುಪುವಲ್ಲಿ ಅವರು ಮೊದಲಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ