AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾಪ್ಟನ್​ ನೀವಾ, ನಮ್ರತಾನಾ?’; ‘ಮನೆ ದಾರಿ ತಪ್ಪಲು ನೀವೆ ಮೂಲ ಕಾರಣ’ ಎಂದ ಸುದೀಪ್

ಸ್ನೇಹಿತ್​ಗೆ ಈ ವಾರದ ತಂಡ ಮಾಡೋ ಅಧಿಕಾರ ನೀಡಲಾಗಿತ್ತು. ಆದರೆ, ಈ ಅಧಿಕಾರವನ್ನು ಅವರು ದುರ್ಬಳಕೆ ಮಾಡಿಕೊಂಡರು. ಅವರು ತಂಡ ಮಾಡಿದ್ದು ಯಾರಿಗೂ ಖುಷಿ ನೀಡಲಿಲ್ಲ. ಈ ವಿಚಾರವನ್ನು ಸುದೀಪ್ ಎತ್ತಿದ್ದಾರೆ.

‘ಕ್ಯಾಪ್ಟನ್​ ನೀವಾ, ನಮ್ರತಾನಾ?’; ‘ಮನೆ ದಾರಿ ತಪ್ಪಲು ನೀವೆ ಮೂಲ ಕಾರಣ’ ಎಂದ ಸುದೀಪ್
ಸ್ನೇಹಿತ್-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 09, 2023 | 10:54 PM

Share

ಈ ವಾರ ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತ್ ಗೌಡ (Snehith Gowda) ಅವರು ಕ್ಯಾಪ್ಟನ್ ಆಗಿದ್ದರು. ಅವರು ತೆಗೆದುಕೊಂಡ ಪಕ್ಷಪಾತ ನಿರ್ಧಾರಗಳಿಂದ ಮನೆಗೆ ಸಾಕಷ್ಟು ತೊಂದರೆ ಆಗಿದೆ. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳಬಹುದು ಎಂದು ವೀಕ್ಷಕರು ಊಹಿಸಿದ್ದರು. ಅದರಂತೆ ಆಗಿದೆ. ಸುದೀಪ್ ಅವರು ಬೈದ ರೀತಿಗೆ ಸ್ನೇಹಿತ್​ಗೆ ಮಾತೇ ಬಾರದಂತೆ ಆಗಿದೆ. ಶನಿವಾರ (ಡಿಸೆಂಬರ್ 9) ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಪ್ರಸಾರ ಕಂಡಿದೆ.

ಸ್ನೇಹಿತ್​ಗೆ ಈ ವಾರದ ತಂಡ ಮಾಡೋ ಅಧಿಕಾರ ನೀಡಲಾಗಿತ್ತು. ಆದರೆ, ಈ ಅಧಿಕಾರವನ್ನು ಅವರು ದುರ್ಬಳಕೆ ಮಾಡಿಕೊಂಡರು. ಅವರು ತಂಡ ಮಾಡಿದ್ದು ಯಾರಿಗೂ ಖುಷಿ ನೀಡಲಿಲ್ಲ. ಈ ವಿಚಾರವನ್ನು ಸುದೀಪ್ ಎತ್ತಿದ್ದಾರೆ. ‘ಈ ವಾರ ಬ್ಯಾಲೆನ್ಸ್​ ಟೀಂ ಮಾಡೋ ಅವಕಾಶವನ್ನು ಬಿಗ್ ಬಾಸ್ ನೀಡಿದ್ದರು. ಆದರೆ, ನೀವು ಮಾಡಿದ್ದು ಏನು? ಡಿಸ್ಕಷನ್​ ಮಾಡಿ ಟೀಂ ಮಾಡಿ ಎಂದು ಬಿಗ್ ಬಾಸ್ ನಿಮಗೆ ಯಾವಾಗ ಹೇಳಿದ್ದರು ಹೇಳಿ’ ಎಂದು ಸುದೀಪ್ ಕೇಳಿದರು.

‘ನೀವು ಮಾಡಿರೋ ಕ್ಯಾಪ್ಟನ್ಸಿಗೆ ಇಂಗ್ಲಿಷ್​ನಲ್ಲಿ ಬಯಾಸ್ಡ್​ ಎನ್ನುತ್ತಾರೆ. ಇಂಥವರು ಲೀಡರ್ ಆಗೋಕೆ ಹೇಗೆ ಸಾಧ್ಯ? ಬಯಾಸ್ಡ್​ ಆಗಿದ್ರಿ ಯಾಕೆ’ ಎಂದು ಸುದೀಪ್ ಕೇಳಿದರು. ಇದಕ್ಕೆ ಸ್ನೇಹಿತ್ ನೇರವಾಗಿ ಉತ್ತರಿಸಿದ್ದಾರೆ. ‘ವಿನಯ್, ನಮ್ರತಾ ಅಥವಾ ಮೈಕಲ್ ಕ್ಯಾಪ್ಟನ್ ಆಗಬೇಕು ಅನ್ನೋದು ನನ್ನ ಆಸೆ ಆಗಿತ್ತು’ ಎಂದರು ಸ್ನೇಹಿತ್.

ನಂತರ ಸಂಗೀತಾಗೆ ಕ್ಲಾಸ್ ತೆಗೆದುಕೊಂಡರು ಸುದೀಪ್. ‘ಸಂಗೀತಾ ಅವರೇ ನಿಮ್ಮ ತಪ್ಪೂ ಇದೆ. ನಮ್ಮ ಟೀಂಗೆ ಅನ್ಯಾಯ ಆಗುತ್ತದೆ ಎಂದು ಹೇಳುತ್ತಲೇ ಬಂದ್ರಿ. ಒಳಗೆ ಆ್ಯಂಗರ್ ಕೂರುತ್ತದೆ. ಹಳೆಯದಲ್ಲ ನೆನಪಾಗುತ್ತದೆ. ಇದು ಎರಡನೇ ಫೌಂಡೇಷನ್’ ಎಂದರು ಸುದೀಪ್. ನಂತರ ಇಡೀ ಮನೆಯವರಿಗೆ ಕ್ಲಾಸ್ ತೆಗೆದುಕೊಂಡರು ಸುದೀಪ್.

ಬಿಗ್ ಬಾಸ್ ಮನೆಯ ದಿಕ್ಕು ತಪ್ಪಲು ಪ್ರತಿ ಹಂತದಲ್ಲೂ ಸ್ನೇಹಿತ್ ಅವರು ಕಾರಣ ಆಗುತ್ತಾ ಬಂದರು. ಸ್ನೇಹಿತ್ ಅವರು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ, ಇಡೀ ಮನೆಗೆ, ಸ್ಪರ್ಧಿಗಳಿಗೆ ಆದ ನಷ್ಟವನ್ನು ಮರಳಿ ಕೊಡೋರು ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇದನ್ನೂ ಓದಿ: ಬಿಗ್​ಬಾಸ್ ಕ್ಯಾಪ್ಟನ್ ಮನೆಗೆ ಬೀಗ ಹಾಕಿಸಿದ ಕಿಚ್ಚ ಸುದೀಪ್: ಕಾರಣವೇನು?

ಇನ್ನು, ಸುದೀಪ್ ಅವರು ವಿನಯ್​ಗೂ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿಟ್ಟು ತೆಗೆದುಕೊಂಡು ಕಾರ್ತಿಕ್​ಗೆ ಹೊಡೆದ ವಿನಯ್​ಗೆ ಸುದೀಪ್ ಬೈದಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!