AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ
ಸ್ನೇಹಿತ್
ರಾಜೇಶ್ ದುಗ್ಗುಮನೆ
|

Updated on: Dec 14, 2023 | 7:24 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ನಿಂದ ಸ್ನೇಹಿತ್ ಗೌಡ ಅವರು ಕಳೆದ ವಾರ ಔಟ್ ಆಗಿದ್ದಾರೆ. ಅವರು ಮನೆಯಿಂದ ಹೋದ ಬಗ್ಗೆ ನಮ್ರತಾ ಗೌಡ (Namratha Gowda) , ವಿನಯ್​ ಗೌಡಗೆ ಬೇಸರ ಇದೆ. ಈಗ ಸ್ನೇಹಿತ್ ಗೌಡ ಅವರು ಹೊರ ಪ್ರಪಂಚಕ್ಕೆ ಬಂದ ಬಳಿಕ ಮತ್ತೆ ಡಯಟ್ ಶುರು ಮಾಡಿದ್ದಾರೆ. ಜಿಮ್​ಗೆ ಮರಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹೀಗಾದ್ರೆ ಬಿಗ್ ಬಾಸ್ ನೋಡಲ್ಲ..

‘ನೀವು ನಿತ್ಯ ಬಿಗ್ ಬಾಸ್ ನೋಡ್ತಾ ಇದೀರಾ’ ಎಂದು ಕೆಲವರು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಕೊಟ್ಟಿದ್ದಾರೆ ಸ್ನೇಹಿತ್. ‘ನನ್ನ ಮೂವರು ಗೆಳೆಯರು (ನಮ್ರತಾ, ವಿನಯ್, ಮೈಕಲ್) ಬಿಗ್ ಬಾಸ್ ಮನೆಯಲ್ಲಿ ಇನ್ನೂ ಆಟ ಆಡುತ್ತಿದ್ದಾರೆ. ಅವರು ಎಲ್ಲಿಯವರೆಗೆ ಬಿಗ್ ಬಾಸ್​ ಮನೆಯಲ್ಲಿ ಇರ್ತಾರೋ ಅಲ್ಲಿಯವರೆಗೆ ಬಿಗ್ ಬಾಸ್ ನೋಡ್ತೀನಿ. ಅವರು ಹೊರ ಬಂದ ಬಳಿಕ ಬಿಗ್ ಬಾಸ್ ನೋಡೋದನ್ನು ನಿಲ್ಲಿಸುತ್ತೇನೆ’ ಎಂದಿದ್ದಾರೆ ಸ್ನೇಹಿತ್.

ಟ್ರೋಲ್ ಭಯ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಟ್ರೋಲ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಬಿಗ್​ ಬಾಸ್​ನಿಂದ ಹೊರ ಬಂದಾಗ ಆರಂಭದಲ್ಲಿ ಟ್ರೋಲ್ ನೋಡಿ ಭಯ ಆಯ್ತು. ಈಗ ಆ ಭಯ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಖತ್ ಹರ್ಟ್​ ಮಾಡಿದ್ದೇನೆ’; ಸ್ನೇಹಿತ್​ನ ನೆನೆದು ಕಣ್ಣೀರು ಹಾಕಿದ ನಮ್ರತಾ ಗೌಡ

ಬೇರೆಯವರನ್ನು ಸೇವ್ ಮಾಡಿದ್ರಿ..

ಸ್ನೇಹಿತ್ ಬೇರೆಯವರಿಗೋಸ್ಕರ ಆಟ ಆಡಿದ್ದಾರೆ. ಅವರು ಪ್ರಯತ್ನ ಹಾಕಿದ್ದರೆ ಇನ್ನೂ ಕೆಲವು ದಿನ ಇರಬಹುದಿತ್ತು ಎನ್ನುವ ಕಮೆಂಟ್​ಗಳು ಬಂದಿವೆ. ಆದರೆ, ಇದನ್ನು ಸ್ನೇಹಿತ್ ಗೌಡ ಒಪ್ಪಿಲ್ಲ. ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ