Sign In

By signing in or creating an account, you agree with Associated Broadcasting Company's Terms & Conditions and Privacy Policy.

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ
ಸ್ನೇಹಿತ್
Follow us
ರಾಜೇಶ್ ದುಗ್ಗುಮನೆ
|

Updated on: Dec 14, 2023 | 7:24 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ನಿಂದ ಸ್ನೇಹಿತ್ ಗೌಡ ಅವರು ಕಳೆದ ವಾರ ಔಟ್ ಆಗಿದ್ದಾರೆ. ಅವರು ಮನೆಯಿಂದ ಹೋದ ಬಗ್ಗೆ ನಮ್ರತಾ ಗೌಡ (Namratha Gowda) , ವಿನಯ್​ ಗೌಡಗೆ ಬೇಸರ ಇದೆ. ಈಗ ಸ್ನೇಹಿತ್ ಗೌಡ ಅವರು ಹೊರ ಪ್ರಪಂಚಕ್ಕೆ ಬಂದ ಬಳಿಕ ಮತ್ತೆ ಡಯಟ್ ಶುರು ಮಾಡಿದ್ದಾರೆ. ಜಿಮ್​ಗೆ ಮರಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹೀಗಾದ್ರೆ ಬಿಗ್ ಬಾಸ್ ನೋಡಲ್ಲ..

‘ನೀವು ನಿತ್ಯ ಬಿಗ್ ಬಾಸ್ ನೋಡ್ತಾ ಇದೀರಾ’ ಎಂದು ಕೆಲವರು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಕೊಟ್ಟಿದ್ದಾರೆ ಸ್ನೇಹಿತ್. ‘ನನ್ನ ಮೂವರು ಗೆಳೆಯರು (ನಮ್ರತಾ, ವಿನಯ್, ಮೈಕಲ್) ಬಿಗ್ ಬಾಸ್ ಮನೆಯಲ್ಲಿ ಇನ್ನೂ ಆಟ ಆಡುತ್ತಿದ್ದಾರೆ. ಅವರು ಎಲ್ಲಿಯವರೆಗೆ ಬಿಗ್ ಬಾಸ್​ ಮನೆಯಲ್ಲಿ ಇರ್ತಾರೋ ಅಲ್ಲಿಯವರೆಗೆ ಬಿಗ್ ಬಾಸ್ ನೋಡ್ತೀನಿ. ಅವರು ಹೊರ ಬಂದ ಬಳಿಕ ಬಿಗ್ ಬಾಸ್ ನೋಡೋದನ್ನು ನಿಲ್ಲಿಸುತ್ತೇನೆ’ ಎಂದಿದ್ದಾರೆ ಸ್ನೇಹಿತ್.

ಟ್ರೋಲ್ ಭಯ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಟ್ರೋಲ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಬಿಗ್​ ಬಾಸ್​ನಿಂದ ಹೊರ ಬಂದಾಗ ಆರಂಭದಲ್ಲಿ ಟ್ರೋಲ್ ನೋಡಿ ಭಯ ಆಯ್ತು. ಈಗ ಆ ಭಯ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಖತ್ ಹರ್ಟ್​ ಮಾಡಿದ್ದೇನೆ’; ಸ್ನೇಹಿತ್​ನ ನೆನೆದು ಕಣ್ಣೀರು ಹಾಕಿದ ನಮ್ರತಾ ಗೌಡ

ಬೇರೆಯವರನ್ನು ಸೇವ್ ಮಾಡಿದ್ರಿ..

ಸ್ನೇಹಿತ್ ಬೇರೆಯವರಿಗೋಸ್ಕರ ಆಟ ಆಡಿದ್ದಾರೆ. ಅವರು ಪ್ರಯತ್ನ ಹಾಕಿದ್ದರೆ ಇನ್ನೂ ಕೆಲವು ದಿನ ಇರಬಹುದಿತ್ತು ಎನ್ನುವ ಕಮೆಂಟ್​ಗಳು ಬಂದಿವೆ. ಆದರೆ, ಇದನ್ನು ಸ್ನೇಹಿತ್ ಗೌಡ ಒಪ್ಪಿಲ್ಲ. ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ